ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಿಂಡಿಪಾಪನಹಳ್ಳಿಯ ಪದ್ಮಶ್ರೀ ಪುರಸ್ಕೃತ ಮುನಿವೆಂಕಟಪ್ಪನವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡುವುದಾಗಿ ಘೋಷಣೆ ಮಾಡಲಾಗಿದೆ.
ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಅವರು ಕಲಾ ಕ್ಷೇತ್ರದ ಸಲ್ಲಿಸಿದ ಸೇವೆಗಾಗಿ ಗೌರವ ಡಾಕ್ಟರೇಟ್ ನೀಡಲು ನಿರ್ಧಾರ ಮಾಡಿದೆ.
ಸ್ವತಃ ವಿಶ್ವವಿದ್ಯಾಲಯದ ಕುಲಪತಿಗಳು ಮುನಿವೆಂಕಟಪ್ಪ ಅವರ ಮನೆಗೆ ಭೇಟಿ ನೀಡಿ ಆಹ್ವಾನ ನೀಡಿದ ಪ್ರೊ.ನಿರಂಜನ ಅವರು, ನಮ್ಮ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವ ಸಂದರ್ಭದಲ್ಲಿ ಕಲಾ ಕ್ಷೇತ್ರದಲ್ಲಿನ ತಮ್ಮ ಕೊಡುಗೆಗಾಗಿ ತಮ್ಮನ್ನು ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಬೇಕೆ೦ದು ವಿಶ್ವವಿದ್ಯಾಲಯವು ನಿರ್ಧರಿಸಿದ್ದು, ನಮ್ಮ ಪ್ರಸ್ತಾವನೆಗೆ ಕುಲಾಧಿಪತಿಗಳಾದ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಘಟಿಕೋತ್ಸವವು ಜುಲೈ.4 ಬೆಳಿಗ್ಗೆ 10-30ಕ್ಕೆ ಕೋಲಾರದ ನಂದಿನಿ ಪ್ಯಾಲೇಸ್ ಸಭಾಂಗಣದಲ್ಲಿ ನಡೆಯಲಿದೆ. ತಾವು ಬಂದು ಗೌರವವನ್ನು ಸ್ವೀಕರಿಸಬೇಕೆಂದು ಕೋರಿದ್ದಾರೆ.
ಈ ಸಂದರ್ಭದಲ್ಲಿ ಪ್ರೊಫೆಸರ್ ನರಸಿಂಹಮೂರ್ತಿ ಉಪಸ್ಥಿತರಿದ್ದರು.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…