ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಿಂಡಿಪಾಪನಹಳ್ಳಿಯ ಪದ್ಮಶ್ರೀ ಪುರಸ್ಕೃತ ಮುನಿವೆಂಕಟಪ್ಪನವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡುವುದಾಗಿ ಘೋಷಣೆ ಮಾಡಲಾಗಿದೆ.
ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಅವರು ಕಲಾ ಕ್ಷೇತ್ರದ ಸಲ್ಲಿಸಿದ ಸೇವೆಗಾಗಿ ಗೌರವ ಡಾಕ್ಟರೇಟ್ ನೀಡಲು ನಿರ್ಧಾರ ಮಾಡಿದೆ.
ಸ್ವತಃ ವಿಶ್ವವಿದ್ಯಾಲಯದ ಕುಲಪತಿಗಳು ಮುನಿವೆಂಕಟಪ್ಪ ಅವರ ಮನೆಗೆ ಭೇಟಿ ನೀಡಿ ಆಹ್ವಾನ ನೀಡಿದ ಪ್ರೊ.ನಿರಂಜನ ಅವರು, ನಮ್ಮ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವ ಸಂದರ್ಭದಲ್ಲಿ ಕಲಾ ಕ್ಷೇತ್ರದಲ್ಲಿನ ತಮ್ಮ ಕೊಡುಗೆಗಾಗಿ ತಮ್ಮನ್ನು ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಬೇಕೆ೦ದು ವಿಶ್ವವಿದ್ಯಾಲಯವು ನಿರ್ಧರಿಸಿದ್ದು, ನಮ್ಮ ಪ್ರಸ್ತಾವನೆಗೆ ಕುಲಾಧಿಪತಿಗಳಾದ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಘಟಿಕೋತ್ಸವವು ಜುಲೈ.4 ಬೆಳಿಗ್ಗೆ 10-30ಕ್ಕೆ ಕೋಲಾರದ ನಂದಿನಿ ಪ್ಯಾಲೇಸ್ ಸಭಾಂಗಣದಲ್ಲಿ ನಡೆಯಲಿದೆ. ತಾವು ಬಂದು ಗೌರವವನ್ನು ಸ್ವೀಕರಿಸಬೇಕೆಂದು ಕೋರಿದ್ದಾರೆ.
ಈ ಸಂದರ್ಭದಲ್ಲಿ ಪ್ರೊಫೆಸರ್ ನರಸಿಂಹಮೂರ್ತಿ ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…