ಪದ್ಮಶ್ರೀ ಪಿ.ಮುನಿವೆಂಕಟಪ್ಪ ಅವರಿಗೆ ಬೆಂ. ಉತ್ತರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್: ಸ್ವತಃ ಪಿ.ಮುನಿವೆಂಕಟಪ್ಪರವರ ಮನೆಗೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ ವಿಶ್ವವಿದ್ಯಾಲಯದ ಕುಲಪತಿ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಿಂಡಿಪಾಪನಹಳ್ಳಿಯ ಪದ್ಮಶ್ರೀ ಪುರಸ್ಕೃತ ಮುನಿವೆಂಕಟಪ್ಪನವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡುವುದಾಗಿ ಘೋಷಣೆ ಮಾಡಲಾಗಿದೆ.

ಪಿಂಡಿಪಾಪನಹಳ್ಳಿ‌ ಮುನಿವೆಂಕಟಪ್ಪ ಅವರು ಕಲಾ ಕ್ಷೇತ್ರದ ಸಲ್ಲಿಸಿದ ಸೇವೆಗಾಗಿ ಗೌರವ ಡಾಕ್ಟರೇಟ್ ನೀಡಲು ನಿರ್ಧಾರ ಮಾಡಿದೆ.

ಸ್ವತಃ ವಿಶ್ವವಿದ್ಯಾಲಯದ ಕುಲಪತಿಗಳು ಮುನಿವೆಂಕಟಪ್ಪ ಅವರ ಮನೆಗೆ ಭೇಟಿ ನೀಡಿ ಆಹ್ವಾನ ನೀಡಿದ ಪ್ರೊ.ನಿರಂಜನ ಅವರು, ನಮ್ಮ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವ ಸಂದರ್ಭದಲ್ಲಿ ಕಲಾ ಕ್ಷೇತ್ರದಲ್ಲಿನ ತಮ್ಮ ಕೊಡುಗೆಗಾಗಿ ತಮ್ಮನ್ನು ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಬೇಕೆ೦ದು ವಿಶ್ವವಿದ್ಯಾಲಯವು ನಿರ್ಧರಿಸಿದ್ದು, ನಮ್ಮ ಪ್ರಸ್ತಾವನೆಗೆ ಕುಲಾಧಿಪತಿಗಳಾದ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಘಟಿಕೋತ್ಸವವು ಜುಲೈ.4 ಬೆಳಿಗ್ಗೆ 10-30ಕ್ಕೆ ಕೋಲಾರದ ನಂದಿನಿ ಪ್ಯಾಲೇಸ್ ಸಭಾಂಗಣದಲ್ಲಿ ನಡೆಯಲಿದೆ. ತಾವು ಬಂದು ಗೌರವವನ್ನು ಸ್ವೀಕರಿಸಬೇಕೆಂದು ಕೋರಿದ್ದಾರೆ.

ಈ ಸಂದರ್ಭದಲ್ಲಿ ಪ್ರೊಫೆಸರ್ ನರಸಿಂಹಮೂರ್ತಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

10 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

10 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

15 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

16 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

21 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

23 hours ago