ಪಬ್ಲಿಕ್ ಮಿರ್ಚಿ ಇಂಪ್ಯಾಕ್ಟ್: ಪಬ್ಲಿಕ್ ಮಿರ್ಚಿ ವರದಿ ಬೆನ್ನಲ್ಲೇ ಅಂಗನವಾಡಿ ಕೇಂದ್ರದ ಆವರಣ ಸ್ವಚ್ಛತೆ

ನಗರದ ತಾಲೂಕು ಕಚೇರಿ ಆವರಣದಲ್ಲಿನ ಅಂಗನವಾಡಿ ಕಟ್ಟಡದ ಸುತ್ತ ಇರುವ ಖಾಲಿ ಜಾಗವನ್ನು ಸ್ಥಳೀಯರು ಬಯಲು ಶೌಚಾಲಯವಾಗಿ ಬಳಕೆ‌ ಮಾಡಿಕೊಳ್ಳುತ್ತಿರುವ ಬಗ್ಗೆ ‘ಪಬ್ಲಿಕ್ ಮಿರ್ಚಿ’ ವರದಿ ಮಾಡಿತ್ತು. ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡ ನಗರಸಭೆ ಆಡಳಿತ ಕೂಡಲೇ ಸಿಬ್ಬಂದಿಯಿಂದ ಅಂಗನವಾಡಿ ಕೇಂದ್ರದ ಆವರಣವನ್ನು ಸ್ವಚ್ಛಗೊಳಿಸಿದ್ದಾರೆ.

ಈ ಕುರಿತು ಮಾತನಾಡಿದ್ದ ಅಂಗನವಾಡಿ ಕಾರ್ಯಕರ್ತೆ ಚಿನ್ನಮ್ಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಟ್ಟದ ಸುತ್ತಲೂ ಇಲ್ಲಿನ ಸ್ಥಳೀಯರು ಬೆಳಗ್ಗೆ ಮತ್ತು ಸಂಜೆ ವೇಳೆ ಬಂದು ಗಲೀಜು ಮಾಡಿ ಹೋಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಅಧಿಕಾರಿಗಳು ಮತ್ತು ನಗರಸಭಾ ಸದಸ್ಯರು ಇತ್ತ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಂಗನವಾಡಿ ಕಾರ್ಯಕರ್ತೆ ಮತ್ತು ಪೋಷಕರು ಮನವಿ ಮಾಡಿಕೊಂಡಿದ್ದರು.

ಎಚ್ಚೆತ್ತ ನಗರಸಭೆ ಅಧಿಕಾರಿಗಳು ಇಂದು‌ ಬೆಳಿಗ್ಗೆ ತಾಲ್ಲೂಕು ಕಚೇರಿ ಆವರಣದಲ್ಲಿರುವ ಅಂಗನವಾಡಿ ಆವರಣವನ್ನು ಸ್ವಚ್ಛಗೊಳಿಸಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

11 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago