‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ ಸಂತಸ ಮನೆಮಾಡಿದೆ.

ಗುತ್ತಿಗೆದಾರನ ನಿರ್ಲಕ್ಷ್ಯ ಧೋರಣೆಯಿಂದ ಕಾಮಗಾರಿ ವಿಳಂಬವಾಗಿತ್ತು. ರಸ್ತೆ ಸಂಪೂರ್ಣ ಹದಗೆಟ್ಟಿದ್ದರಿಂದ ಸಾರ್ವಜನಿಕರು, ರೈತರು ಹಾಗೂ ವಿದ್ಯಾರ್ಥಿಗಳು ನಿತ್ಯ ಪರದಾಡುತ್ತಿರುವ ಕುರಿತು ಮೇ 12ರಂದು ‘ಪಬ್ಲಿಕ್ ಮಿರ್ಚಿ’ ನ್ಯೂಸ್ ವೆಬ್ ಸೈಟ್ ನಲ್ಲಿ ವರದಿ ಪ್ರಕಟಿಸಲಾಗಿತ್ತು. ವರದಿ ಪ್ರಕಟವಾದ ಬೆನ್ನಲ್ಲೇ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಎಚ್ಚೆತ್ತುಕೊಂಡು ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಆರಂಭಿಸಿದ್ದಾರೆ.

2025ರ ಅಕ್ಟೋಬರ್ 24ರಂದು ಕಾಮಗಾರಿಗೆ ಚಾಲನೆ ನೀಡಲಾಗಿದ್ದರೂ ಹಲವು ತಿಂಗಳುಗಳಿಂದ ರಸ್ತೆ‌ ಕಾಮಗಾರಿ ಅಪೂರ್ಣವಾಗಿಯೇ ಉಳಿದಿತ್ತು. ರಸ್ತೆ ಮೇಲೆ ಜಲ್ಲಿಕಲ್ಲು ಹಾಸಿ ಬಿಟ್ಟಿದ್ದರಿಂದ ಧೂಳು ಹೆಚ್ಚಾಗಿ ವಾಹನ ಸವಾರರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಸಾರ್ವಜನಿಕರು ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿರಲಿಲ್ಲ.

ದೊಡ್ಡಹಳ್ಳ ಸಮೀಪದಿಂದ ಗುಂಡಮಗೆರೆ–ಹೊಸಹಳ್ಳಿ ಮಾರ್ಗವಾಗಿ ಸಾಗುವ ಈ ರಸ್ತೆ ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ನಿತ್ಯ ಸಂಚಾರಕ್ಕೆ ಜೀವನಾಡಿಯಂತಿದೆ. ಸುಮಾರು 3.5 ಕಿಮೀ ಉದ್ದದ ರಸ್ತೆ ಡಾಂಬರೀಕರಣ ಕಾಮಗಾರಿ ಇದೀಗ ವೇಗ ಪಡೆದುಕೊಂಡಿದ್ದು, ಶೀಘ್ರದಲ್ಲೇ ಗುಣಮಟ್ಟದ ರಸ್ತೆ ನಿರ್ಮಾಣ ಪೂರ್ಣಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.

ಡಾಂಬರು ಕಾಮಗಾರಿ ಆರಂಭವಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ‘ಪಬ್ಲಿಕ್ ಮಿರ್ಚಿ’ ನ್ಯೂಸ್ ವೆಬ್ ಸೈಟ್ ಗೆ ಅಭಿನಂದನೆ ಸಲ್ಲಿಸಿ, ರಸ್ತೆ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 hours ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

20 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

1 day ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

1 day ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

1 day ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 days ago