ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಬಿಸುವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ ವ್ಯಕ್ತಿಗಳಿಗೆ ಟೆಂಡರ್ ನೀಡಲಾಗಿತ್ತು. ಇದರ ಪರಿಣಾಮ ಖಾಸಗಿ ಟೆಂಡರ್ ದಾರರು ನೀಡಿರುವ ಕಾರ್ಡುಗಳಿಗೆ ಒಂದು ತಿಂಗಳಿಂದ ರಿಚಾಜ್೯ ಮಾಡದೇ ಇರುವ ಪರಿಣಾಮ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿತ್ತು. ಈ ಕುರಿತು ಮೇ.6ರಂದು “ಪಬ್ಲಿಕ್ ಮಿರ್ಚಿ” ವರದಿ ಮಾಡಿತ್ತು. ವರದಿ ಬೆನ್ನಲ್ಲೇ ಎಚ್ಚೆತ್ತ ಪ.ಪಂ ಸೂಕ್ತ ಕ್ರಮಕೈಗೊಂಡಿದೆ.
ಖಾಸಗಿಯವರಿಗೆ ನೀಡಿದ್ದ ನಿರ್ವಹಣಾ ಜವಾಬ್ದಾರಿಯನ್ನು ಹಿಂಪಡೆದು ಪಟ್ಟಣ ಪಂಚಾಯಿತಿಯೇ ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆ ಜವಾಬ್ದಾರಿ ಹೊತ್ತಿದೆ..
ಪಬ್ಲಿಕ್ ಮಿರ್ಚಿ ವರದಿಗಾರಿಕೆಗೆ ಕಸುವನಹಳ್ಳಿ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ..
ಈ ಕುರಿತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಮುಖ್ಯ ಆಡಳಿತಾಧಿಕಾರಿ ನರಸಿಂಹ ಮೂರ್ತಿ ಮಾತನಾಡಿ, ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ ಜವಾಬ್ದಾರಿಯನ್ನು ಖಾಸಗಿಯವರಿಗೆ ನೀಡಲಾಗಿತ್ತು. ಅವರು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದ ಹಿನ್ನೆಲೆ ಅವರ ಬದಲಿಗೆ ಇದೀಗ ನಾವೇ ನಿರ್ವಹಣೆ ಮಾಡುತ್ತಿದ್ದೇವೆ. ಕಾರ್ಡ್ ರಿಚಾರ್ಜ್, ಕಾಯಿನ್ ವ್ಯವಸ್ಥೆಯಿಂದ ನೀರು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇನ್ನು ಮುಂದೆ ಜನರ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ರಿಚಾರ್ಜ್ ಮಾಡಿಕೊಳ್ಳಲು ಸ್ಕ್ಯಾನರ್ ಸ್ಥಳದಲ್ಲಿ ಅಂಟಿಸಲಾಗಿದೆ. ಒಂದು ವೇಳೆ ರಿಚಾರ್ಜ್ ಮಾಡಿಕೊಳ್ಳಲು ಬರದಿದ್ದಲ್ಲಿ ವಾಟರ್ ಮೆನ್ ಸಹಾಯ ಪಡೆಯಬಹುದಾಗಿದೆ ಎಂದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…