ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಬಿಸುವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ ವ್ಯಕ್ತಿಗಳಿಗೆ ಟೆಂಡರ್ ನೀಡಲಾಗಿತ್ತು. ಇದರ ಪರಿಣಾಮ ಖಾಸಗಿ ಟೆಂಡರ್ ದಾರರು ನೀಡಿರುವ ಕಾರ್ಡುಗಳಿಗೆ ಒಂದು ತಿಂಗಳಿಂದ ರಿಚಾಜ್೯ ಮಾಡದೇ ಇರುವ ಪರಿಣಾಮ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿತ್ತು. ಈ ಕುರಿತು ಮೇ.6ರಂದು “ಪಬ್ಲಿಕ್ ಮಿರ್ಚಿ” ವರದಿ ಮಾಡಿತ್ತು. ವರದಿ ಬೆನ್ನಲ್ಲೇ ಎಚ್ಚೆತ್ತ ಪ.ಪಂ ಸೂಕ್ತ ಕ್ರಮಕೈಗೊಂಡಿದೆ.
ಖಾಸಗಿಯವರಿಗೆ ನೀಡಿದ್ದ ನಿರ್ವಹಣಾ ಜವಾಬ್ದಾರಿಯನ್ನು ಹಿಂಪಡೆದು ಪಟ್ಟಣ ಪಂಚಾಯಿತಿಯೇ ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆ ಜವಾಬ್ದಾರಿ ಹೊತ್ತಿದೆ..
ಪಬ್ಲಿಕ್ ಮಿರ್ಚಿ ವರದಿಗಾರಿಕೆಗೆ ಕಸುವನಹಳ್ಳಿ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ..
ಈ ಕುರಿತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಮುಖ್ಯ ಆಡಳಿತಾಧಿಕಾರಿ ನರಸಿಂಹ ಮೂರ್ತಿ ಮಾತನಾಡಿ, ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ ಜವಾಬ್ದಾರಿಯನ್ನು ಖಾಸಗಿಯವರಿಗೆ ನೀಡಲಾಗಿತ್ತು. ಅವರು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದ ಹಿನ್ನೆಲೆ ಅವರ ಬದಲಿಗೆ ಇದೀಗ ನಾವೇ ನಿರ್ವಹಣೆ ಮಾಡುತ್ತಿದ್ದೇವೆ. ಕಾರ್ಡ್ ರಿಚಾರ್ಜ್, ಕಾಯಿನ್ ವ್ಯವಸ್ಥೆಯಿಂದ ನೀರು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇನ್ನು ಮುಂದೆ ಜನರ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ರಿಚಾರ್ಜ್ ಮಾಡಿಕೊಳ್ಳಲು ಸ್ಕ್ಯಾನರ್ ಸ್ಥಳದಲ್ಲಿ ಅಂಟಿಸಲಾಗಿದೆ. ಒಂದು ವೇಳೆ ರಿಚಾರ್ಜ್ ಮಾಡಿಕೊಳ್ಳಲು ಬರದಿದ್ದಲ್ಲಿ ವಾಟರ್ ಮೆನ್ ಸಹಾಯ ಪಡೆಯಬಹುದಾಗಿದೆ ಎಂದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…