‘ಪಬ್ಲಿಕ್ ಮಿರ್ಚಿ ಫಲಶೃತಿ’; 30 ವರ್ಷಗಳ ನಂತರ ದಲಿತ ಕಾಲೋನಿಗೆ ಸಿಕ್ತು ಚರಂಡಿ ಭಾಗ್ಯ

ದೊಡ್ಡಬಳ್ಳಾಪುರ:  ತಾಲೂಕಿನ ಹಾದ್ರೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾದ್ರೀಪುರ ಗ್ರಾಮದಲ್ಲಿ ಕಳೆದ 30 ವರ್ಷಗಳಿಂದಲೂ ಚರಂಡಿ ವ್ಯವಸ್ಥೆ ಮಾಡಿರಲಿಲ್ಲ. ಹಾದ್ರೀಪುರ ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ, ನೀರೆಲ್ಲಾ ರಸ್ತೆಯ ಮೇಲೆ ಹರಿಯುತ್ತಿತ್ತು.

ಈ ಕುರಿತು ನ.18 ರಂದು ಪಬ್ಲಿಕ್ ಮಿರ್ಚಿ ವರದಿ ಮಾಡಿತ್ತು. ಕೂಡಲೇ ಎಚ್ಚೆತ್ತ ಪಂಚಾಯಿತಿ ಆಡಳಿತ ಈಗ ಚರಂಡಿ ವ್ಯವಸ್ಥೆ ಮಾಡಿಸಿದೆ. ಚರಂಡಿ ಆಗುತ್ತಿದ್ದಂತೆ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಮತ್ತು ಪಬ್ಲಿಕ್ ಮಿರ್ಚಿಗೆ ಸಾರ್ವಜನಿಕರು ಧನ್ಯವಾದಗಳನ್ನು ತಿಳಿಸಿದ್ದಾರೆ.

ಈ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಕುಮಾರ್ ಮಾತನಾಡಿ, 30 ವರ್ಷಗಳ ನಂತರ ಹಾದ್ರೀಪುರ ಗ್ರಾಮದಿಂದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದೇನೆ. ಅಧಿಕಾರಕ್ಕೆ ಬಂದ ಮೊದಲ ಕೆಲಸವೇ ಚರಂಡಿ ವ್ಯವಸ್ಥೆ ಮಾಡುವುದಾಗಿತ್ತು. ಆಕ್ಷನ್ ಪ್ಲಾನ್ ಕೂಡ ಮಾಡಲಾಗಿತ್ತು. ಆದರೆ, ಚುನಾವಣಾ ನಿಮಿತ್ತ ಕಾಮಗಾರಿ ಮುಂದೂಡಿಕೆ ಆಗಿತ್ತು. ಅಷ್ಟರಲ್ಲಿ ಗ್ರಾಮದಲ್ಲಿ ಕೆಲವರು ಈ ರೀತಿಯ ಆರೋಪ ಮಾಡಿದ್ದರು. ಮಾತಿಗಿಂತ ಕೆಲಸ ಮುಖ್ಯ ಎಂದು ಹೇಳಿದರು.

ನಂತರ ಹಾದ್ರಿಪುರ ಗ್ರಾಮ‌ ಪಂಚಾಯಿತಿ ಸದಸ್ಯ ದೇವರಾಜ್ ಮಾತನಾಡಿ, ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಕರ್ತವ್ಯ, ಈ ನಿಟ್ಟಿನಲ್ಲಿ ಗ್ರಾಮಗಳಲ್ಲಿ ಏನೇ ಸಮಸ್ಯೆ ಇದ್ದರೂ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ಕೂಡಲೇ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತೇವೆ. ಗ್ರಾಮಗಳಲ್ಲಿ ಅಭಿವೃದ್ಧಿ ಕೆಲಸ ಕಾರ್ಯ ಕೈಗೊಳ್ಳಲು ಎಲ್ಲರ ಸಹಕಾರ ಅಗತ್ಯ. ಸದ್ಯ ಹಾದ್ರೀಪುರ ಗ್ರಾಮದಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿದೆ. ಇನ್ನು ಮುಂದೆ ಈ ಗ್ರಾಮದಲ್ಲಿ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.

ಹಾದ್ರಿಪುರ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ (ಎಸ್‌ಸಿ) ಸೇರಿದ ಸುಮಾರು 150ಕ್ಕೂ ಹೆಚ್ಚು ಮನೆಗಳಿವೆ. 25 ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ತಾತ್ಕಾಲಿಕವಾಗಿ ‘ವಿ’ ಆಕಾರದಲ್ಲಿ ಚರಂಡಿ ನಿರ್ಮಿಸಲಾಗಿತ್ತು. ಗ್ರಾಮ ಪಂಚಾಯಿತಿಯಿಂದ ಸೂಕ್ತ ನಿರ್ವಹಣೆ ಇಲ್ಲದ ಕಾರಣಕ್ಕೆ ಬಹುತೇಕ ಕಡೆ ಹೂಳು ತುಂಬಿಕೊಂಡಿತ್ತು. ಇದರಿಂದಾಗಿ, ಚರಂಡಿಗಳು ಕಟ್ಟಿಕೊಂಡು ಸೊಳ್ಳೆಗಳ ಹೆಚ್ಳಳಕ್ಕೆ ಕಾರಣವಾಗಿತ್ತು. ಕೆಲವೆಡೆ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿತ್ತು. ಇದರಿಂದ‌ ಇಲ್ಲಿನ ನಿವಾಸಿಗಳು ಮೂಗು ಮುಚ್ಚಿಕೊಂಡು ಓಡಾಡಬೇಕಿತ್ತು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

7 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

11 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

11 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

16 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago