‘ಪಬ್ಲಿಕ್ ಮಿರ್ಚಿ ಫಲಶೃತಿ’; 30 ವರ್ಷಗಳ ನಂತರ ದಲಿತ ಕಾಲೋನಿಗೆ ಸಿಕ್ತು ಚರಂಡಿ ಭಾಗ್ಯ

ದೊಡ್ಡಬಳ್ಳಾಪುರ:  ತಾಲೂಕಿನ ಹಾದ್ರೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾದ್ರೀಪುರ ಗ್ರಾಮದಲ್ಲಿ ಕಳೆದ 30 ವರ್ಷಗಳಿಂದಲೂ ಚರಂಡಿ ವ್ಯವಸ್ಥೆ ಮಾಡಿರಲಿಲ್ಲ. ಹಾದ್ರೀಪುರ ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ, ನೀರೆಲ್ಲಾ ರಸ್ತೆಯ ಮೇಲೆ ಹರಿಯುತ್ತಿತ್ತು.

ಈ ಕುರಿತು ನ.18 ರಂದು ಪಬ್ಲಿಕ್ ಮಿರ್ಚಿ ವರದಿ ಮಾಡಿತ್ತು. ಕೂಡಲೇ ಎಚ್ಚೆತ್ತ ಪಂಚಾಯಿತಿ ಆಡಳಿತ ಈಗ ಚರಂಡಿ ವ್ಯವಸ್ಥೆ ಮಾಡಿಸಿದೆ. ಚರಂಡಿ ಆಗುತ್ತಿದ್ದಂತೆ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಮತ್ತು ಪಬ್ಲಿಕ್ ಮಿರ್ಚಿಗೆ ಸಾರ್ವಜನಿಕರು ಧನ್ಯವಾದಗಳನ್ನು ತಿಳಿಸಿದ್ದಾರೆ.

ಈ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಕುಮಾರ್ ಮಾತನಾಡಿ, 30 ವರ್ಷಗಳ ನಂತರ ಹಾದ್ರೀಪುರ ಗ್ರಾಮದಿಂದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದೇನೆ. ಅಧಿಕಾರಕ್ಕೆ ಬಂದ ಮೊದಲ ಕೆಲಸವೇ ಚರಂಡಿ ವ್ಯವಸ್ಥೆ ಮಾಡುವುದಾಗಿತ್ತು. ಆಕ್ಷನ್ ಪ್ಲಾನ್ ಕೂಡ ಮಾಡಲಾಗಿತ್ತು. ಆದರೆ, ಚುನಾವಣಾ ನಿಮಿತ್ತ ಕಾಮಗಾರಿ ಮುಂದೂಡಿಕೆ ಆಗಿತ್ತು. ಅಷ್ಟರಲ್ಲಿ ಗ್ರಾಮದಲ್ಲಿ ಕೆಲವರು ಈ ರೀತಿಯ ಆರೋಪ ಮಾಡಿದ್ದರು. ಮಾತಿಗಿಂತ ಕೆಲಸ ಮುಖ್ಯ ಎಂದು ಹೇಳಿದರು.

ನಂತರ ಹಾದ್ರಿಪುರ ಗ್ರಾಮ‌ ಪಂಚಾಯಿತಿ ಸದಸ್ಯ ದೇವರಾಜ್ ಮಾತನಾಡಿ, ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಕರ್ತವ್ಯ, ಈ ನಿಟ್ಟಿನಲ್ಲಿ ಗ್ರಾಮಗಳಲ್ಲಿ ಏನೇ ಸಮಸ್ಯೆ ಇದ್ದರೂ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ಕೂಡಲೇ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತೇವೆ. ಗ್ರಾಮಗಳಲ್ಲಿ ಅಭಿವೃದ್ಧಿ ಕೆಲಸ ಕಾರ್ಯ ಕೈಗೊಳ್ಳಲು ಎಲ್ಲರ ಸಹಕಾರ ಅಗತ್ಯ. ಸದ್ಯ ಹಾದ್ರೀಪುರ ಗ್ರಾಮದಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿದೆ. ಇನ್ನು ಮುಂದೆ ಈ ಗ್ರಾಮದಲ್ಲಿ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.

ಹಾದ್ರಿಪುರ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ (ಎಸ್‌ಸಿ) ಸೇರಿದ ಸುಮಾರು 150ಕ್ಕೂ ಹೆಚ್ಚು ಮನೆಗಳಿವೆ. 25 ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ತಾತ್ಕಾಲಿಕವಾಗಿ ‘ವಿ’ ಆಕಾರದಲ್ಲಿ ಚರಂಡಿ ನಿರ್ಮಿಸಲಾಗಿತ್ತು. ಗ್ರಾಮ ಪಂಚಾಯಿತಿಯಿಂದ ಸೂಕ್ತ ನಿರ್ವಹಣೆ ಇಲ್ಲದ ಕಾರಣಕ್ಕೆ ಬಹುತೇಕ ಕಡೆ ಹೂಳು ತುಂಬಿಕೊಂಡಿತ್ತು. ಇದರಿಂದಾಗಿ, ಚರಂಡಿಗಳು ಕಟ್ಟಿಕೊಂಡು ಸೊಳ್ಳೆಗಳ ಹೆಚ್ಳಳಕ್ಕೆ ಕಾರಣವಾಗಿತ್ತು. ಕೆಲವೆಡೆ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿತ್ತು. ಇದರಿಂದ‌ ಇಲ್ಲಿನ ನಿವಾಸಿಗಳು ಮೂಗು ಮುಚ್ಚಿಕೊಂಡು ಓಡಾಡಬೇಕಿತ್ತು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

17 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

19 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

19 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

19 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

21 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

1 day ago