ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಕೂಗಳತೆ ದೂರದಲ್ಲಿರುವ ದಲಿತ ಕಾಲೋನಿಯಲ್ಲಿ ಚರಂಡಿ ಇದ್ದು ಇಲ್ಲದಂತಾಗಿತ್ತು. ಕೊಳಚೆ ನೀರು ಮನೆಯ ಮುಂದೆ ಶೇಖರಣೆಯಾಗಿ, ರಸ್ತೆಯಲ್ಲಿಯೇ ಕೊಳೆತು ಇಡೀ ಪ್ರದೇಶ ದುರ್ನಾತ ಬೀರುತ್ತಿತ್ತು. ಸೊಳ್ಳೆ, ನೊಣ ಸೇರಿದಂತೆ ಇತರೆ ಕ್ರಿಮಿ ಕೀಟಗಳ ಆವಾಸ ಸ್ಥಾನವಾಗಿತ್ತು. ಇದರಿಂದ ರೋಗ ಹರಡುವ ಸಾಧ್ಯತೆ ಹೆಚ್ಚಿತ್ತು. ಅದರೆ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಶುಚಿತ್ವದತ್ತ ಸ್ವಲ್ಪವೂ ಗಮನ ಹರಿಸುತ್ತಿಲ್ಲ ಎಂದು ಇಲ್ಲಿನ ನಿವಾಸಿಗಳು ಆರೋಪಿಸಿ ಪ್ರತಿಭಟನೆ ಮಾಡಿ ಪಂಚಾಯಿತಿ ವಿರುದ್ಧ ದಿಕ್ಕಾರ ಕೂಗಿದ್ದರು. ಈ ಕುರಿತು “ಪಬ್ಲಿಕ್ ಮಿರ್ಚಿ” ವರದಿ ಮಾಡಿತ್ತು….
“ಪಬ್ಲಿಕ್ ಮಿರ್ಚಿ” ವರದಿ ಹಾಗೂ ನಿವಾಸಿಗಳ ಪ್ರತಿಭಟನೆ ಬೆನ್ನಲ್ಲೇ ಎಚ್ಚೆತ್ತ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ, ಜನಪ್ರತಿನಿಧಿಗಳು ಚರಂಡಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ….
ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಪಂಚಾಯಿತಿ ವಿರುದ್ಧ ದಲಿತರು ಪ್ರತಿಭಟನೆ ನಡೆಸಿದ್ದರು.
ಈ ಹಿನ್ನೆಲೆ 15ನೇ ಹಣಕಾಸು ಅನುದಾನದಡಿಯಲ್ಲಿ 2ಲಕ್ಷ ವೆಚ್ಚದಲ್ಲಿ ಸಿಸಿ ಚರಂಡಿ ಕಾಮಗಾರಿಯನ್ನು ನಡೆಸಲಾಗುತ್ತಿದೆ ಎಂದು ಪಂಚಾಯಿತಿ ಮೂಲಗಳು ತಿಳಿಸಿವೆ…
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…