ತಾಲೂಕಿನ ಮಲ್ಲಾತಹಳ್ಳಿ ಗ್ರಾಮದಲ್ಲಿ ದಲಿತರಿಗೆ ದೇವಾಲಯಕ್ಕೆ ಬಿಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಮಿರ್ಚಿ ವರದಿ ಮಾಡಿತ್ತು. ಈ ಹಿನ್ನೆಲೆ ಇಂದು ಗ್ರಾಮಕ್ಕೆ ಡಿವೈಎಸ್ ಪಿ ರವಿ.ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೊಡ್ಡಬಳ್ಳಾಪುರ ನಗರ ಕೇಂದ್ರದಿಂದ ಕೇವಲ 3 ಕಿ.ಮೀ ಅಂತರದಲ್ಲಿರುವ ಮಲ್ಲಾತಹಳ್ಳಿ ಗ್ರಾಮದಲ್ಲಿ ಇವತ್ತಿಗೂ ಅಸ್ಪೃಶ್ಯತೆ ಆಚರಣೆ ಜೀವಂತವಾಗಿದೆ ಎಂಬ ಆರೋಪ ಕೇಳಿಬಂದಿದೆ. ಇಲ್ಲಿನ ದೇವಸ್ಥಾನಗಳಿಗೆ ದಲಿತರ ಪ್ರವೇಶವಿಲ್ಲ, ಬಾಗಿಲಲ್ಲೇ ನಿಂತು ದೇವರಿಗೆ ಕೈ ಮುಗಿಯ ಬೇಕು, ದಲಿತರ ಪೂಜಾ ಸಾಮಾಗ್ರಿಗಳನ್ನು ಸಹ ದೇವಸ್ಥಾನದ ಒಳಗೆ ತೆಗೆದುಕೊಂಡು ಹೋಗುವುದಿಲ್ಲ, ಕಾಂಪೌಂಡ್ ಹೊರಗಡೆಯ ದೇವರಿಗೆ ಹಣ್ಣುಕಾಯಿ ಕೊಟ್ಟು ಪೂಜೆ ಮಾಡಿಸಿಕೊಂಡು ಹೋಗುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು.
ಬಹಳ ಹಿಂದಿನಿಂದ ಮಲ್ಲಾತಹಳ್ಳಿ ಗ್ರಾಮದಲ್ಲಿ ಸವರ್ಣಿಯರು ಅಸ್ಪೃಶ್ಯತೆಯನ್ನ ಆಚರಿಸಿಕೊಂಡು ಬರುತ್ತಿದ್ದಾರೆ, ಹಳೆ ತಲೆಮಾರಿನ ದಲಿತರು ಇದ್ಯಾವುದನ್ನು ಪ್ರಶ್ನೆ ಮಾಡದೆ ತಮ್ಮ ಮೇಲಿನ ದೌರ್ಜನ್ಯಗಳನ್ನ ಸಹಿಸಿಕೊಂಡಿದ್ದರು. ಆದರೆ ಇವತ್ತಿನ ವಿದ್ಯಾವಂತ ಹುಡುಗರು ದಲಿತರ ಮೇಲೆ ನಡೆಸುತ್ತಿರುವ ಅಸ್ಪೃಶ್ಯತೆ ಆಚರಣೆಯನ್ನ ಪಶ್ನೆ ಮಾಡಲು ಪ್ರಾರಂಭಿಸಿದ್ದಾರೆ.
ಈ ಕುರಿತು ಪಬ್ಲಿಕ್ ಮಿರ್ಚಿ ವರದಿ ಮಾಡಿತ್ತು. ಈ ಹಿನ್ನೆಲೆ ಡಿವೈಎಸ್ ಪಿ ರವಿ.ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…
ಪರಿಶೀಲನೆ ನಡೆಸಿದ ನಂತರ ನಾಳೆ ಪೂಜಾರಿಯನ್ನು ಕರೆಸಿ, ಪೂಜೆ ಮಾಡಿಸಿ ಎಲ್ಲರಿಗೂ ಒಳಗೆ ಹೋಗಲು ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.
Ставки на спорт UA: советы и стратегии для успеха Ставки на спорт в Украине: основы…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…
ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...
ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…