ಪಬ್ಲಿಕ್ ಮಿರ್ಚಿ ವರದಿ ಫಲಶೃತಿ: ಮಲ್ಲಾತಹಳ್ಳಿ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ಆರೋಪ ವಿಚಾರ: ಗ್ರಾಮಕ್ಕೆ ಡಿವೈಎಸ್ಪಿ, ತಹಶೀಲ್ದಾರ್ ಭೇಟಿ, ಪರಿಶೀಲನೆ

ತಾಲೂಕಿನ ಮಲ್ಲಾತಹಳ್ಳಿ ಗ್ರಾಮದಲ್ಲಿ ದಲಿತರಿಗೆ ದೇವಾಲಯಕ್ಕೆ ಬಿಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಮಿರ್ಚಿ ವರದಿ ಮಾಡಿತ್ತು. ಈ ಹಿನ್ನೆಲೆ ಇಂದು ಗ್ರಾಮಕ್ಕೆ ಡಿವೈಎಸ್ ಪಿ ರವಿ.ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದೊಡ್ಡಬಳ್ಳಾಪುರ ನಗರ ಕೇಂದ್ರದಿಂದ ಕೇವಲ 3 ಕಿ.ಮೀ ಅಂತರದಲ್ಲಿರುವ ಮಲ್ಲಾತಹಳ್ಳಿ ಗ್ರಾಮದಲ್ಲಿ ಇವತ್ತಿಗೂ ಅಸ್ಪೃಶ್ಯತೆ ಆಚರಣೆ ಜೀವಂತವಾಗಿದೆ ಎಂಬ ಆರೋಪ ಕೇಳಿಬಂದಿದೆ. ಇಲ್ಲಿನ ದೇವಸ್ಥಾನಗಳಿಗೆ ದಲಿತರ ಪ್ರವೇಶವಿಲ್ಲ, ಬಾಗಿಲಲ್ಲೇ ನಿಂತು ದೇವರಿಗೆ ಕೈ ಮುಗಿಯ ಬೇಕು, ದಲಿತರ ಪೂಜಾ ಸಾಮಾಗ್ರಿಗಳನ್ನು ಸಹ ದೇವಸ್ಥಾನದ ಒಳಗೆ ತೆಗೆದುಕೊಂಡು ಹೋಗುವುದಿಲ್ಲ, ಕಾಂಪೌಂಡ್ ಹೊರಗಡೆಯ ದೇವರಿಗೆ ಹಣ್ಣುಕಾಯಿ ಕೊಟ್ಟು ಪೂಜೆ ಮಾಡಿಸಿಕೊಂಡು ಹೋಗುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು.

ಬಹಳ ಹಿಂದಿನಿಂದ ಮಲ್ಲಾತಹಳ್ಳಿ ಗ್ರಾಮದಲ್ಲಿ ಸವರ್ಣಿಯರು ಅಸ್ಪೃಶ್ಯತೆಯನ್ನ ಆಚರಿಸಿಕೊಂಡು ಬರುತ್ತಿದ್ದಾರೆ, ಹಳೆ ತಲೆಮಾರಿನ ದಲಿತರು ಇದ್ಯಾವುದನ್ನು ಪ್ರಶ್ನೆ ಮಾಡದೆ ತಮ್ಮ ಮೇಲಿನ ದೌರ್ಜನ್ಯಗಳನ್ನ ಸಹಿಸಿಕೊಂಡಿದ್ದರು. ಆದರೆ ಇವತ್ತಿನ ವಿದ್ಯಾವಂತ ಹುಡುಗರು ದಲಿತರ ಮೇಲೆ ನಡೆಸುತ್ತಿರುವ ಅಸ್ಪೃಶ್ಯತೆ ಆಚರಣೆಯನ್ನ ಪಶ್ನೆ ಮಾಡಲು ಪ್ರಾರಂಭಿಸಿದ್ದಾರೆ.

ಈ ಕುರಿತು ಪಬ್ಲಿಕ್ ಮಿರ್ಚಿ ವರದಿ ಮಾಡಿತ್ತು. ಈ ಹಿನ್ನೆಲೆ ಡಿವೈಎಸ್ ಪಿ ರವಿ.ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

ಪರಿಶೀಲನೆ ನಡೆಸಿದ ನಂತರ ನಾಳೆ ಪೂಜಾರಿಯನ್ನು ಕರೆಸಿ, ಪೂಜೆ ಮಾಡಿಸಿ ಎಲ್ಲರಿಗೂ ಒಳಗೆ ಹೋಗಲು ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

8 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

9 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

18 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago