ತಾಲೂಕಿನ ಮಲ್ಲಾತಹಳ್ಳಿ ಗ್ರಾಮದಲ್ಲಿ ದಲಿತರಿಗೆ ದೇವಾಲಯಕ್ಕೆ ಬಿಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಮಿರ್ಚಿ ವರದಿ ಮಾಡಿತ್ತು. ಈ ಹಿನ್ನೆಲೆ ಇಂದು ಗ್ರಾಮಕ್ಕೆ ಡಿವೈಎಸ್ ಪಿ ರವಿ.ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೊಡ್ಡಬಳ್ಳಾಪುರ ನಗರ ಕೇಂದ್ರದಿಂದ ಕೇವಲ 3 ಕಿ.ಮೀ ಅಂತರದಲ್ಲಿರುವ ಮಲ್ಲಾತಹಳ್ಳಿ ಗ್ರಾಮದಲ್ಲಿ ಇವತ್ತಿಗೂ ಅಸ್ಪೃಶ್ಯತೆ ಆಚರಣೆ ಜೀವಂತವಾಗಿದೆ ಎಂಬ ಆರೋಪ ಕೇಳಿಬಂದಿದೆ. ಇಲ್ಲಿನ ದೇವಸ್ಥಾನಗಳಿಗೆ ದಲಿತರ ಪ್ರವೇಶವಿಲ್ಲ, ಬಾಗಿಲಲ್ಲೇ ನಿಂತು ದೇವರಿಗೆ ಕೈ ಮುಗಿಯ ಬೇಕು, ದಲಿತರ ಪೂಜಾ ಸಾಮಾಗ್ರಿಗಳನ್ನು ಸಹ ದೇವಸ್ಥಾನದ ಒಳಗೆ ತೆಗೆದುಕೊಂಡು ಹೋಗುವುದಿಲ್ಲ, ಕಾಂಪೌಂಡ್ ಹೊರಗಡೆಯ ದೇವರಿಗೆ ಹಣ್ಣುಕಾಯಿ ಕೊಟ್ಟು ಪೂಜೆ ಮಾಡಿಸಿಕೊಂಡು ಹೋಗುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು.
ಬಹಳ ಹಿಂದಿನಿಂದ ಮಲ್ಲಾತಹಳ್ಳಿ ಗ್ರಾಮದಲ್ಲಿ ಸವರ್ಣಿಯರು ಅಸ್ಪೃಶ್ಯತೆಯನ್ನ ಆಚರಿಸಿಕೊಂಡು ಬರುತ್ತಿದ್ದಾರೆ, ಹಳೆ ತಲೆಮಾರಿನ ದಲಿತರು ಇದ್ಯಾವುದನ್ನು ಪ್ರಶ್ನೆ ಮಾಡದೆ ತಮ್ಮ ಮೇಲಿನ ದೌರ್ಜನ್ಯಗಳನ್ನ ಸಹಿಸಿಕೊಂಡಿದ್ದರು. ಆದರೆ ಇವತ್ತಿನ ವಿದ್ಯಾವಂತ ಹುಡುಗರು ದಲಿತರ ಮೇಲೆ ನಡೆಸುತ್ತಿರುವ ಅಸ್ಪೃಶ್ಯತೆ ಆಚರಣೆಯನ್ನ ಪಶ್ನೆ ಮಾಡಲು ಪ್ರಾರಂಭಿಸಿದ್ದಾರೆ.
ಈ ಕುರಿತು ಪಬ್ಲಿಕ್ ಮಿರ್ಚಿ ವರದಿ ಮಾಡಿತ್ತು. ಈ ಹಿನ್ನೆಲೆ ಡಿವೈಎಸ್ ಪಿ ರವಿ.ಪಿ, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…
ಪರಿಶೀಲನೆ ನಡೆಸಿದ ನಂತರ ನಾಳೆ ಪೂಜಾರಿಯನ್ನು ಕರೆಸಿ, ಪೂಜೆ ಮಾಡಿಸಿ ಎಲ್ಲರಿಗೂ ಒಳಗೆ ಹೋಗಲು ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…