ಪಬ್ಲಿಕ್ ಮಿರ್ಚಿ ವರದಿ ಫಲಶೃತಿ: ಮುಜರಾಯಿ ಇಲಾಖೆಯ ಲಕ್ಷ ಲಕ್ಷ ಹಣ ನುಂಗಿದ ರೆವೆನ್ಯೂ ಇನ್ಸ್ಪೆಕ್ಟರ್ ಹೇಮಂತ್ ಕುಮಾರ್ ಅಮಾನತು: ಹೇಮಂತ್ ಕುಮಾರ್ ಪತ್ನಿಯಿಂದ 50 ಲಕ್ಷ ರೂ. ವಾಪಸ್

ದೊಡ್ಡಬಳ್ಳಾಪುರ ತಹಶೀಲ್ದಾ‌ರ್ ಹಾಗೂ ಕೇಸ್ ವರ್ಕರ್ ಹೆಸರಿನ ನಕಲಿ ಸಹಿ ಬಳಸಿ ಮುಜರಾಯಿ ಇಲಾಖೆಯ ಲಕ್ಷ ಲಕ್ಷ ಹಣವನ್ನು ದೋಖಾ ಮಾಡಿರುವ ಆರೋಪದ ಮೇಲೆ‌ ಸಾಸಲು ಹೋಬಳಿ ಕಂದಾಯ ನಿರೀಕ್ಷಕ (RI) ಹೇಮಂತ್ ಕುಮಾರ್‌ ನನ್ನು ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ಬಂಧಿಸಿ ಕೋರ್ಟ್ ಆದೇಶದ ಮೇರೆಗೆ ಜೈಲಿಗಟ್ಟಿದ್ದಾರೆ.

ಇದಲ್ಲದೇ ವಂಚನೆ ಮಾಡಿದ ಕಂದಾಯ ನಿರೀಕ್ಷಕ ಹೇಮಂತ್ ಕುಮಾರ್ ನನ್ನು ಅಮಾನತುಗೊಳಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಆದೇಶ ಮಾಡಿದ್ದಾರೆ.

ಅಮಾನತು ಮಾಡಿರುವುದಾಗಿ ಬೆಂಗಳೂರು ಗ್ರಾಮಾಂತರ ಡಿಸಿ ಬಸವರಾಜು ಹೇಳಿದ್ದಾರೆ.

ಈ ಹೇಮಂತ್ ಕುಮಾರ್ ಲಕ್ಷ ಲಕ್ಷ ಹಣವನ್ನ ಲಪಟಾಯಿಸಿದ್ದ. ಈ ವಂಚನೆ ಪ್ರಕರಣವನ್ನು ದೊಡ್ಡಬಳ್ಳಾಪುರ ತಹಶಿಲ್ದಾರ್ ವಿಭಾ ವಿದ್ಯಾ ರಾಥೋಡ್ ಬಯಲು ಮಾಡಿದ್ದರು.

ಈ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ದೊಡ್ಡಬಳ್ಳಾಪುರ ಪೊಲೀಸರು ಹೇಮಂತ್ ಕುಮಾರ್ ನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

ಸದ್ಯ ಹೇಮಂತ್ ಕುಮಾರ್ ಪತ್ನಿ 50 ಲಕ್ಷ ರೂಪಾಯಿ ವಾಪಸ್ ದೊಡ್ಡಬಳ್ಳಾಪುರ ನಗರದ ಎಸ್ ಬಿ ಐ ಬ್ಯಾಂಕ್ ತಹಶೀಲ್ದಾರ್ ಖಾತೆಗೆ ಹಣ ಜಮಾ ಮಾಡಿದ್ದಾರೆ ಎಂಬ ಮಾಹಿತಿ ಒದಗಿಬಂದಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಮುಜರಾಯಿ ಇಲಾಖೆ ಎಫ್‌ಡಿಎ ಕರ್ತವ್ಯದಿಂದ ಸಾಸಲು ಹೋಬಳಿ ಆರ್ ಐ ಆಗಿ ವರ್ಗಾವಣೆ ಆದ ಬಳಿಕ ಹೇಮಂತ್ ಕುಮಾರ್ ಅವರು ದಾಖಲೆಗಳನ್ನು ನೀಡುವ ವೇಳೆ ಚೆಕ್‌ ಬುಕ್ ಗಳನ್ನು ನೀಡದೆ ಉಳಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಬಳಿಕ ಹಲವು ಕಂತುಗಳಲ್ಲಿ ತಹಶಿಲ್ದಾರ್ ಅವರ ನಕಲಿ ಸಹಿ ಬಳಸಿ ಲಕ್ಷ ಲಕ್ಷ ಹಣವನ್ನು ವಿವಿಧ ಖಾತೆಗಳಿಗೆ ವರ್ಗಾವಣೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಪಬ್ಲಿಕ್ ಮಿರ್ಚಿ ಸವಿಸ್ತಾರ ವರದಿ ಮಾಡಿತ್ತು. ಪಬ್ಲಿಕ್ ಮಿರ್ಚಿ ವರದಿ ಬೆನ್ನಲ್ಲೇ ವಂಚನೆ ಮಾಡಿದ ಕಂದಾಯ ನಿರೀಕ್ಷಕ ಹೇಮಂತ್ ಕುಮಾರ್ ನನ್ನು ಅಮಾನತುಗೊಳಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಆದೇಶ ಮಾಡಿದ್ದಾರೆ.

ನಕಲಿ ಸಹಿ ಬಳಸಿದ್ದ ಚೆಕ್ ಗಳನ್ನು ಬೆಂಗಳೂರಿನ ಮೃತಪಟ್ಟಿರುವ ಮಹಿಳೆಯೊಬ್ಬರ ಖಾತೆಗೆ ಹಣ ವರ್ಗಾವಣೆ ಮಾಡಿಕೊಂಡಿದ್ದು, ಆ ಮಹಿಳೆ ಕಳೆದ ಎಂಟು ತಿಂಗಳ ಹಿಂದೆಯೇ ಮೃತಪಟ್ಟಿದ್ದು, ಮೊಮ್ಮಗನ ಬಳಿ ಬ್ಯಾಂಕ್ ದಾಖಲೆ, ಮೊಬೈಲ್, ಸಿಮ್ ಪಡೆದುಕೊಂಡು ಹಂತ ಹಂತವಾಗಿ ಹಣವನ್ನು ಡ್ರಾ ಮಾಡಿಕೊಂಡಿದ್ದನು ಎನ್ನಲಾಗಿದೆ.

ಒಮ್ಮೆ ಹಣ ಡ್ರಾ ಮಾಡಲು ಕಂದಾಯ ನಿರೀಕ್ಷಕ (RI) ಹೇಮಂತ್ ಕುಮಾರ್‌ ತನ್ನ ಪತ್ನಿಯನ್ನೇ ಬ್ಯಾಂಕ್ ಗೆ ಕಳುಹಿಸಿ ಹಣ ಡ್ರಾ ಮಾಡಿಕೊಂಡಿರುವ ದೃಶ್ಯ ಬ್ಯಾಂಕ್ ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಆಕೆ ಕೂಡ ಪೊಲೀಸ್ ತನಿಖೆಯಲ್ಲಿ ಒಪ್ಪಿಕೊಂಡಿರುವ ಮಾಹಿತಿ ಒದಗಿಬಂದಿದೆ.

ಪೊಲೀಸ್ ತನಿಖೆ ವೇಳೆ ಮನೆಯಲ್ಲಿ ನಕಲಿ ಆಧಾರ್ ಕಾರ್ಡ್, ನಕಲಿ ಸಿಮ್, ಸೀಲ್, ಸಹಿ ಸೇರಿದಂತೆ ಇತರೆ ವಸ್ತುಗಳು ಪತ್ತೆಯಾಗಿರುವುದಾಗಿ ತಿಳಿದುಬಂದಿದೆ..

ಈತ ಈ ದೋಖಾ ಮಾಡಿದ ಹಣದಲ್ಲಿ 10 ಲಕ್ಷ ರೂ. ಕೊಟ್ಟು ಒಡವೆ ಖರೀದಿ, ದೊಡ್ಡಬಳ್ಳಾಪುರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದು, ಮನೆಯೊಂದನ್ನು ದುರಸ್ತಿ ಮಾಡಲು 30 ಲಕ್ಷ‌ ಖರ್ಚು ಮಾಡಿರುವುದಲ್ಲದೇ ಆನ್ ಲೈನ್ ಗೇಮ್ ಗೂ ಹಣ ಬಳಸಿಕೊಂಡಿದ್ದಾನೆ ಎನ್ನಲಾಗಿದೆ.

Ramesh Babu

Journalist

Recent Posts

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

9 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

18 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

21 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

22 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

1 day ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

2 days ago