ಪಬ್ಲಿಕ್ ಮಿರ್ಚಿ ವರದಿ ಫಲಶೃತಿ: ಮುಜರಾಯಿ ಇಲಾಖೆಯ ಲಕ್ಷ ಲಕ್ಷ ಹಣ ನುಂಗಿದ ರೆವೆನ್ಯೂ ಇನ್ಸ್ಪೆಕ್ಟರ್ ಹೇಮಂತ್ ಕುಮಾರ್ ಅಮಾನತು: ಹೇಮಂತ್ ಕುಮಾರ್ ಪತ್ನಿಯಿಂದ 50 ಲಕ್ಷ ರೂ. ವಾಪಸ್

ದೊಡ್ಡಬಳ್ಳಾಪುರ ತಹಶೀಲ್ದಾ‌ರ್ ಹಾಗೂ ಕೇಸ್ ವರ್ಕರ್ ಹೆಸರಿನ ನಕಲಿ ಸಹಿ ಬಳಸಿ ಮುಜರಾಯಿ ಇಲಾಖೆಯ ಲಕ್ಷ ಲಕ್ಷ ಹಣವನ್ನು ದೋಖಾ ಮಾಡಿರುವ ಆರೋಪದ ಮೇಲೆ‌ ಸಾಸಲು ಹೋಬಳಿ ಕಂದಾಯ ನಿರೀಕ್ಷಕ (RI) ಹೇಮಂತ್ ಕುಮಾರ್‌ ನನ್ನು ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ಬಂಧಿಸಿ ಕೋರ್ಟ್ ಆದೇಶದ ಮೇರೆಗೆ ಜೈಲಿಗಟ್ಟಿದ್ದಾರೆ.

ಇದಲ್ಲದೇ ವಂಚನೆ ಮಾಡಿದ ಕಂದಾಯ ನಿರೀಕ್ಷಕ ಹೇಮಂತ್ ಕುಮಾರ್ ನನ್ನು ಅಮಾನತುಗೊಳಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಆದೇಶ ಮಾಡಿದ್ದಾರೆ.

ಅಮಾನತು ಮಾಡಿರುವುದಾಗಿ ಬೆಂಗಳೂರು ಗ್ರಾಮಾಂತರ ಡಿಸಿ ಬಸವರಾಜು ಹೇಳಿದ್ದಾರೆ.

ಈ ಹೇಮಂತ್ ಕುಮಾರ್ ಲಕ್ಷ ಲಕ್ಷ ಹಣವನ್ನ ಲಪಟಾಯಿಸಿದ್ದ. ಈ ವಂಚನೆ ಪ್ರಕರಣವನ್ನು ದೊಡ್ಡಬಳ್ಳಾಪುರ ತಹಶಿಲ್ದಾರ್ ವಿಭಾ ವಿದ್ಯಾ ರಾಥೋಡ್ ಬಯಲು ಮಾಡಿದ್ದರು.

ಈ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ದೊಡ್ಡಬಳ್ಳಾಪುರ ಪೊಲೀಸರು ಹೇಮಂತ್ ಕುಮಾರ್ ನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

ಸದ್ಯ ಹೇಮಂತ್ ಕುಮಾರ್ ಪತ್ನಿ 50 ಲಕ್ಷ ರೂಪಾಯಿ ವಾಪಸ್ ದೊಡ್ಡಬಳ್ಳಾಪುರ ನಗರದ ಎಸ್ ಬಿ ಐ ಬ್ಯಾಂಕ್ ತಹಶೀಲ್ದಾರ್ ಖಾತೆಗೆ ಹಣ ಜಮಾ ಮಾಡಿದ್ದಾರೆ ಎಂಬ ಮಾಹಿತಿ ಒದಗಿಬಂದಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಮುಜರಾಯಿ ಇಲಾಖೆ ಎಫ್‌ಡಿಎ ಕರ್ತವ್ಯದಿಂದ ಸಾಸಲು ಹೋಬಳಿ ಆರ್ ಐ ಆಗಿ ವರ್ಗಾವಣೆ ಆದ ಬಳಿಕ ಹೇಮಂತ್ ಕುಮಾರ್ ಅವರು ದಾಖಲೆಗಳನ್ನು ನೀಡುವ ವೇಳೆ ಚೆಕ್‌ ಬುಕ್ ಗಳನ್ನು ನೀಡದೆ ಉಳಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಬಳಿಕ ಹಲವು ಕಂತುಗಳಲ್ಲಿ ತಹಶಿಲ್ದಾರ್ ಅವರ ನಕಲಿ ಸಹಿ ಬಳಸಿ ಲಕ್ಷ ಲಕ್ಷ ಹಣವನ್ನು ವಿವಿಧ ಖಾತೆಗಳಿಗೆ ವರ್ಗಾವಣೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಪಬ್ಲಿಕ್ ಮಿರ್ಚಿ ಸವಿಸ್ತಾರ ವರದಿ ಮಾಡಿತ್ತು. ಪಬ್ಲಿಕ್ ಮಿರ್ಚಿ ವರದಿ ಬೆನ್ನಲ್ಲೇ ವಂಚನೆ ಮಾಡಿದ ಕಂದಾಯ ನಿರೀಕ್ಷಕ ಹೇಮಂತ್ ಕುಮಾರ್ ನನ್ನು ಅಮಾನತುಗೊಳಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಆದೇಶ ಮಾಡಿದ್ದಾರೆ.

ನಕಲಿ ಸಹಿ ಬಳಸಿದ್ದ ಚೆಕ್ ಗಳನ್ನು ಬೆಂಗಳೂರಿನ ಮೃತಪಟ್ಟಿರುವ ಮಹಿಳೆಯೊಬ್ಬರ ಖಾತೆಗೆ ಹಣ ವರ್ಗಾವಣೆ ಮಾಡಿಕೊಂಡಿದ್ದು, ಆ ಮಹಿಳೆ ಕಳೆದ ಎಂಟು ತಿಂಗಳ ಹಿಂದೆಯೇ ಮೃತಪಟ್ಟಿದ್ದು, ಮೊಮ್ಮಗನ ಬಳಿ ಬ್ಯಾಂಕ್ ದಾಖಲೆ, ಮೊಬೈಲ್, ಸಿಮ್ ಪಡೆದುಕೊಂಡು ಹಂತ ಹಂತವಾಗಿ ಹಣವನ್ನು ಡ್ರಾ ಮಾಡಿಕೊಂಡಿದ್ದನು ಎನ್ನಲಾಗಿದೆ.

ಒಮ್ಮೆ ಹಣ ಡ್ರಾ ಮಾಡಲು ಕಂದಾಯ ನಿರೀಕ್ಷಕ (RI) ಹೇಮಂತ್ ಕುಮಾರ್‌ ತನ್ನ ಪತ್ನಿಯನ್ನೇ ಬ್ಯಾಂಕ್ ಗೆ ಕಳುಹಿಸಿ ಹಣ ಡ್ರಾ ಮಾಡಿಕೊಂಡಿರುವ ದೃಶ್ಯ ಬ್ಯಾಂಕ್ ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಆಕೆ ಕೂಡ ಪೊಲೀಸ್ ತನಿಖೆಯಲ್ಲಿ ಒಪ್ಪಿಕೊಂಡಿರುವ ಮಾಹಿತಿ ಒದಗಿಬಂದಿದೆ.

ಪೊಲೀಸ್ ತನಿಖೆ ವೇಳೆ ಮನೆಯಲ್ಲಿ ನಕಲಿ ಆಧಾರ್ ಕಾರ್ಡ್, ನಕಲಿ ಸಿಮ್, ಸೀಲ್, ಸಹಿ ಸೇರಿದಂತೆ ಇತರೆ ವಸ್ತುಗಳು ಪತ್ತೆಯಾಗಿರುವುದಾಗಿ ತಿಳಿದುಬಂದಿದೆ..

ಈತ ಈ ದೋಖಾ ಮಾಡಿದ ಹಣದಲ್ಲಿ 10 ಲಕ್ಷ ರೂ. ಕೊಟ್ಟು ಒಡವೆ ಖರೀದಿ, ದೊಡ್ಡಬಳ್ಳಾಪುರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದು, ಮನೆಯೊಂದನ್ನು ದುರಸ್ತಿ ಮಾಡಲು 30 ಲಕ್ಷ‌ ಖರ್ಚು ಮಾಡಿರುವುದಲ್ಲದೇ ಆನ್ ಲೈನ್ ಗೇಮ್ ಗೂ ಹಣ ಬಳಸಿಕೊಂಡಿದ್ದಾನೆ ಎನ್ನಲಾಗಿದೆ.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

4 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

16 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

16 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

19 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

20 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago