ಪಬ್ಲಿಕ್ ಮಿರ್ಚಿ ವರದಿ ಫಲಶೃತಿ: ಮುಜರಾಯಿ ಇಲಾಖೆಯ ಲಕ್ಷ ಲಕ್ಷ ಹಣ ನುಂಗಿದ ರೆವೆನ್ಯೂ ಇನ್ಸ್ಪೆಕ್ಟರ್ ಹೇಮಂತ್ ಕುಮಾರ್ ಅಮಾನತು: ಹೇಮಂತ್ ಕುಮಾರ್ ಪತ್ನಿಯಿಂದ 50 ಲಕ್ಷ ರೂ. ವಾಪಸ್

ದೊಡ್ಡಬಳ್ಳಾಪುರ ತಹಶೀಲ್ದಾ‌ರ್ ಹಾಗೂ ಕೇಸ್ ವರ್ಕರ್ ಹೆಸರಿನ ನಕಲಿ ಸಹಿ ಬಳಸಿ ಮುಜರಾಯಿ ಇಲಾಖೆಯ ಲಕ್ಷ ಲಕ್ಷ ಹಣವನ್ನು ದೋಖಾ ಮಾಡಿರುವ ಆರೋಪದ ಮೇಲೆ‌ ಸಾಸಲು ಹೋಬಳಿ ಕಂದಾಯ ನಿರೀಕ್ಷಕ (RI) ಹೇಮಂತ್ ಕುಮಾರ್‌ ನನ್ನು ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ಬಂಧಿಸಿ ಕೋರ್ಟ್ ಆದೇಶದ ಮೇರೆಗೆ ಜೈಲಿಗಟ್ಟಿದ್ದಾರೆ.

ಇದಲ್ಲದೇ ವಂಚನೆ ಮಾಡಿದ ಕಂದಾಯ ನಿರೀಕ್ಷಕ ಹೇಮಂತ್ ಕುಮಾರ್ ನನ್ನು ಅಮಾನತುಗೊಳಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಆದೇಶ ಮಾಡಿದ್ದಾರೆ.

ಅಮಾನತು ಮಾಡಿರುವುದಾಗಿ ಬೆಂಗಳೂರು ಗ್ರಾಮಾಂತರ ಡಿಸಿ ಬಸವರಾಜು ಹೇಳಿದ್ದಾರೆ.

ಈ ಹೇಮಂತ್ ಕುಮಾರ್ ಲಕ್ಷ ಲಕ್ಷ ಹಣವನ್ನ ಲಪಟಾಯಿಸಿದ್ದ. ಈ ವಂಚನೆ ಪ್ರಕರಣವನ್ನು ದೊಡ್ಡಬಳ್ಳಾಪುರ ತಹಶಿಲ್ದಾರ್ ವಿಭಾ ವಿದ್ಯಾ ರಾಥೋಡ್ ಬಯಲು ಮಾಡಿದ್ದರು.

ಈ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ದೊಡ್ಡಬಳ್ಳಾಪುರ ಪೊಲೀಸರು ಹೇಮಂತ್ ಕುಮಾರ್ ನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

ಸದ್ಯ ಹೇಮಂತ್ ಕುಮಾರ್ ಪತ್ನಿ 50 ಲಕ್ಷ ರೂಪಾಯಿ ವಾಪಸ್ ದೊಡ್ಡಬಳ್ಳಾಪುರ ನಗರದ ಎಸ್ ಬಿ ಐ ಬ್ಯಾಂಕ್ ತಹಶೀಲ್ದಾರ್ ಖಾತೆಗೆ ಹಣ ಜಮಾ ಮಾಡಿದ್ದಾರೆ ಎಂಬ ಮಾಹಿತಿ ಒದಗಿಬಂದಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಮುಜರಾಯಿ ಇಲಾಖೆ ಎಫ್‌ಡಿಎ ಕರ್ತವ್ಯದಿಂದ ಸಾಸಲು ಹೋಬಳಿ ಆರ್ ಐ ಆಗಿ ವರ್ಗಾವಣೆ ಆದ ಬಳಿಕ ಹೇಮಂತ್ ಕುಮಾರ್ ಅವರು ದಾಖಲೆಗಳನ್ನು ನೀಡುವ ವೇಳೆ ಚೆಕ್‌ ಬುಕ್ ಗಳನ್ನು ನೀಡದೆ ಉಳಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಬಳಿಕ ಹಲವು ಕಂತುಗಳಲ್ಲಿ ತಹಶಿಲ್ದಾರ್ ಅವರ ನಕಲಿ ಸಹಿ ಬಳಸಿ ಲಕ್ಷ ಲಕ್ಷ ಹಣವನ್ನು ವಿವಿಧ ಖಾತೆಗಳಿಗೆ ವರ್ಗಾವಣೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಪಬ್ಲಿಕ್ ಮಿರ್ಚಿ ಸವಿಸ್ತಾರ ವರದಿ ಮಾಡಿತ್ತು. ಪಬ್ಲಿಕ್ ಮಿರ್ಚಿ ವರದಿ ಬೆನ್ನಲ್ಲೇ ವಂಚನೆ ಮಾಡಿದ ಕಂದಾಯ ನಿರೀಕ್ಷಕ ಹೇಮಂತ್ ಕುಮಾರ್ ನನ್ನು ಅಮಾನತುಗೊಳಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಆದೇಶ ಮಾಡಿದ್ದಾರೆ.

ನಕಲಿ ಸಹಿ ಬಳಸಿದ್ದ ಚೆಕ್ ಗಳನ್ನು ಬೆಂಗಳೂರಿನ ಮೃತಪಟ್ಟಿರುವ ಮಹಿಳೆಯೊಬ್ಬರ ಖಾತೆಗೆ ಹಣ ವರ್ಗಾವಣೆ ಮಾಡಿಕೊಂಡಿದ್ದು, ಆ ಮಹಿಳೆ ಕಳೆದ ಎಂಟು ತಿಂಗಳ ಹಿಂದೆಯೇ ಮೃತಪಟ್ಟಿದ್ದು, ಮೊಮ್ಮಗನ ಬಳಿ ಬ್ಯಾಂಕ್ ದಾಖಲೆ, ಮೊಬೈಲ್, ಸಿಮ್ ಪಡೆದುಕೊಂಡು ಹಂತ ಹಂತವಾಗಿ ಹಣವನ್ನು ಡ್ರಾ ಮಾಡಿಕೊಂಡಿದ್ದನು ಎನ್ನಲಾಗಿದೆ.

ಒಮ್ಮೆ ಹಣ ಡ್ರಾ ಮಾಡಲು ಕಂದಾಯ ನಿರೀಕ್ಷಕ (RI) ಹೇಮಂತ್ ಕುಮಾರ್‌ ತನ್ನ ಪತ್ನಿಯನ್ನೇ ಬ್ಯಾಂಕ್ ಗೆ ಕಳುಹಿಸಿ ಹಣ ಡ್ರಾ ಮಾಡಿಕೊಂಡಿರುವ ದೃಶ್ಯ ಬ್ಯಾಂಕ್ ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಆಕೆ ಕೂಡ ಪೊಲೀಸ್ ತನಿಖೆಯಲ್ಲಿ ಒಪ್ಪಿಕೊಂಡಿರುವ ಮಾಹಿತಿ ಒದಗಿಬಂದಿದೆ.

ಪೊಲೀಸ್ ತನಿಖೆ ವೇಳೆ ಮನೆಯಲ್ಲಿ ನಕಲಿ ಆಧಾರ್ ಕಾರ್ಡ್, ನಕಲಿ ಸಿಮ್, ಸೀಲ್, ಸಹಿ ಸೇರಿದಂತೆ ಇತರೆ ವಸ್ತುಗಳು ಪತ್ತೆಯಾಗಿರುವುದಾಗಿ ತಿಳಿದುಬಂದಿದೆ..

ಈತ ಈ ದೋಖಾ ಮಾಡಿದ ಹಣದಲ್ಲಿ 10 ಲಕ್ಷ ರೂ. ಕೊಟ್ಟು ಒಡವೆ ಖರೀದಿ, ದೊಡ್ಡಬಳ್ಳಾಪುರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದು, ಮನೆಯೊಂದನ್ನು ದುರಸ್ತಿ ಮಾಡಲು 30 ಲಕ್ಷ‌ ಖರ್ಚು ಮಾಡಿರುವುದಲ್ಲದೇ ಆನ್ ಲೈನ್ ಗೇಮ್ ಗೂ ಹಣ ಬಳಸಿಕೊಂಡಿದ್ದಾನೆ ಎನ್ನಲಾಗಿದೆ.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

5 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

10 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago