ಮಾ.28ರಂದು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಿರೇಮುದೇನಹಳ್ಳಿಯಲ್ಲಿರುವ ಓವರ್ ಹೆಡ್ ಟ್ಯಾಂಕ್ ನಿಂದ ಸರಬರಾಜಾಗುವ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣಗೊಂಡು ಹುಳ ಹುಪ್ಪಟೆಗಳು ಕಂಡು ಬರುತ್ತಿದ್ದು, ಊರಿನ ಗ್ರಾಮಸ್ಥರು ಆಂತಕಕ್ಕೆ ಸಿಲುಕಿದ್ದಾರೆ ಎಂದು “ಪಬ್ಲಿಕ್ ಮಿರ್ಚಿ” ನ್ಯೂಸ್ ವೆಬ್ ಸೈಟ್ ವರದಿ ಮಾಡಲಾಗಿತ್ತು. “ಪಬ್ಲಿಕ್ ಮಿರ್ಚಿ” ವರದಿ ಪರಿಣಾಮ ಎಚ್ಚೆತ್ತ ಅಧಿಕಾರಿಗಳು ಕೂಡಲೇ ಓವರ್ ಹೆಡ್ ಟ್ಯಾಂಕ್ ನ್ನು ಸ್ವಚ್ಛಗೊಳಿಸಿದ್ದಾರೆ.
ಓವರ್ ಹೆಡ್ ಟ್ಯಾಂಕ್ ಸ್ವಚ್ಛಗೊಂಡ ಹಿನ್ನೆಲೆ ಊರಿನ ಗ್ರಾಮಸ್ಥರು “ಪಬ್ಲಿಕ್ ಮಿರ್ಚಿ” ಗೆ ಧನ್ಯವಾದ ಅರ್ಪಿಸಿದ್ದಾರೆ. ಹಾಗೂ ಅಧಿಕಾರಿಗಳ ಸ್ಪಂದನೆಗೆ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹಲವಾರು ದಿನಗಳಿಂದ ಕುಡಿಯುವ ನೀರಿನಲ್ಲಿ ಹುಳು ಹುಪ್ಪಟೆಗಳು ಕಂಡು ಬರುತ್ತಿದ್ದು, ಈ ಕುರಿತು ಗ್ರಾಮ ಪಂಚಾಯಿತಿ ಗಮನಕ್ಕೆ ತಂದರೂ ಯಾವ ಕ್ರಮ ಕೈಗೊಳ್ಳದೇ ಇಲ್ಲಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ಊರಿನ ಗ್ರಾಮಸ್ಥರು ಆರೋಪಿಸಿದ್ದರು. ಈ ಕುರಿತು ಪಬ್ಲಿಕ್ ಮಿರ್ಚಿ ವರದಿ ಮಾಡಿ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಇದೀಗ ಓವರ್ ಹೆಡ್ ಟ್ಯಾಂಕ್ ಸ್ವಚ್ಛವಾಗಿರುವ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಎನ್. ಮುನಿರಾಜು ಅವರು ಪಬ್ಲಿಕ್ ಮಿರ್ಚಿಗೆ ತಿಳಿಸಿದ್ದಾರೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…