Categories: ಸಿನಿಮಾ

“ಪರಂವಃ” ಚಿತ್ರದ ಮೂರನೇ ಹಾಡು ಬಿಡುಗಡೆ: ಮಾಜಿ ಸಿಎಂ ಹೆಚ್ ಡಿ‌ಕೆ ಬಿಡುಗಡೆ: ಹಾಡು ಮೆಚ್ಚಿ ಚಿತ್ರತಂಡಕ್ಕೆ ಶುಭಕೋರಿದ ಅಶ್ವಿನಿ ಪುನೀತ್ ರಾಜಕುಮಾರ್

ಪೀಪಲ್ ವರ್ಲ್ಡ್ ಫಿಲಂಸ್ ಲಾಂಛನದಲ್ಲಿ 200 ಜನ ಸ್ನೇಹಿತರು ಸೇರಿ ನಿರ್ಮಿಸಿರುವ, ಪ್ರೇಮ್ ಸಿಡೇಗಲ್, ಮೈತ್ರಿ ಜೆ ಕಶ್ಯಪ್, ಗಣೇಶ್ ಹೆಗ್ಗೋಡು ಮುಂತಾದವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ,

ಈ ಮಣ್ಣಿನ ಹೆಮ್ಮೆಯ ಕಲೆಯಾದ ವೀರಗಾಸೆಯ ಕುರಿತಾದ ಜೊತೆಗೆ ತಂದೆ ಮಗನ ನಡುವಿನ ಭಾವನಾತ್ಮಕ ಪಯಣದ ಕುರಿತು ಮೂಡಿಬಂದಿರುವ ಸಂತೋಷ್ ಕೈದಾಳರವರ ನಿರ್ದೇಶನದ “ಪರಂವಃ” ಚಲನಚಿತ್ರದ ‘ಕಿರುದೀಪ ನೀ’ ಎಂಬ ಮೂರನೇ ಲಿರಿಕಲ್ ಹಾಡು ‘Saregama Kannada’ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.

ಈ ಹಾಡನ್ನು ಗಾಯಕ ಮೆಹಬೂಬ್ ಸಾಬ್ ಹಾಡಿದ್ದು, ನಾಗೇಶ್ ಕುಂದಾಪುರ, ಸಂಕೇತ್ ಅಂಬಲಿ ಹಾಗೂ ಕಿರಣ್ ಎನ್ ಆರ್ ಪುರ ಸೇರಿ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಈ ಲಿರಿಕಲ್ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಈ ಹಾಡನ್ನು ವೀಕ್ಷಿಸಿದ ಅಶ್ವಿನಿ ಪುನೀತ್ ರಾಜ್‍ಕುಮಾರ್ ರವರು ಹಾಡನ್ನು ಮೆಚ್ಚಿ, ಚಿತ್ರತಂಡಕ್ಕೆ ಶುಭವಾಗಲೆಂದು ಹಾರೈಸಿದ್ದಾರೆ.

ಈ ಹಾಡಿಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿ ಜನರಿಂದ ಮನ್ನಣೆಗಳಿಸುತ್ತಿರೊ ಟೀಸರ್ ಹಾಗೂ ಮೊದಲೆರಡು ಲಿರಿಕಲ್ ಹಾಡುಗಳು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

3 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

10 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

11 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

24 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

24 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

24 hours ago