Categories: ಸಿನಿಮಾ

“ಪರಂವಃ” ಚಿತ್ರದ ಮೂರನೇ ಹಾಡು ಬಿಡುಗಡೆ: ಮಾಜಿ ಸಿಎಂ ಹೆಚ್ ಡಿ‌ಕೆ ಬಿಡುಗಡೆ: ಹಾಡು ಮೆಚ್ಚಿ ಚಿತ್ರತಂಡಕ್ಕೆ ಶುಭಕೋರಿದ ಅಶ್ವಿನಿ ಪುನೀತ್ ರಾಜಕುಮಾರ್

ಪೀಪಲ್ ವರ್ಲ್ಡ್ ಫಿಲಂಸ್ ಲಾಂಛನದಲ್ಲಿ 200 ಜನ ಸ್ನೇಹಿತರು ಸೇರಿ ನಿರ್ಮಿಸಿರುವ, ಪ್ರೇಮ್ ಸಿಡೇಗಲ್, ಮೈತ್ರಿ ಜೆ ಕಶ್ಯಪ್, ಗಣೇಶ್ ಹೆಗ್ಗೋಡು ಮುಂತಾದವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ,

ಈ ಮಣ್ಣಿನ ಹೆಮ್ಮೆಯ ಕಲೆಯಾದ ವೀರಗಾಸೆಯ ಕುರಿತಾದ ಜೊತೆಗೆ ತಂದೆ ಮಗನ ನಡುವಿನ ಭಾವನಾತ್ಮಕ ಪಯಣದ ಕುರಿತು ಮೂಡಿಬಂದಿರುವ ಸಂತೋಷ್ ಕೈದಾಳರವರ ನಿರ್ದೇಶನದ “ಪರಂವಃ” ಚಲನಚಿತ್ರದ ‘ಕಿರುದೀಪ ನೀ’ ಎಂಬ ಮೂರನೇ ಲಿರಿಕಲ್ ಹಾಡು ‘Saregama Kannada’ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.

ಈ ಹಾಡನ್ನು ಗಾಯಕ ಮೆಹಬೂಬ್ ಸಾಬ್ ಹಾಡಿದ್ದು, ನಾಗೇಶ್ ಕುಂದಾಪುರ, ಸಂಕೇತ್ ಅಂಬಲಿ ಹಾಗೂ ಕಿರಣ್ ಎನ್ ಆರ್ ಪುರ ಸೇರಿ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಈ ಲಿರಿಕಲ್ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಈ ಹಾಡನ್ನು ವೀಕ್ಷಿಸಿದ ಅಶ್ವಿನಿ ಪುನೀತ್ ರಾಜ್‍ಕುಮಾರ್ ರವರು ಹಾಡನ್ನು ಮೆಚ್ಚಿ, ಚಿತ್ರತಂಡಕ್ಕೆ ಶುಭವಾಗಲೆಂದು ಹಾರೈಸಿದ್ದಾರೆ.

ಈ ಹಾಡಿಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿ ಜನರಿಂದ ಮನ್ನಣೆಗಳಿಸುತ್ತಿರೊ ಟೀಸರ್ ಹಾಗೂ ಮೊದಲೆರಡು ಲಿರಿಕಲ್ ಹಾಡುಗಳು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

23 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago