ಪೀಪಲ್ ವರ್ಲ್ಡ್ ಫಿಲಂಸ್ ಲಾಂಛನದಲ್ಲಿ 200 ಜನ ಸ್ನೇಹಿತರು ಸೇರಿ ನಿರ್ಮಿಸಿರುವ, ಪ್ರೇಮ್ ಸಿಡೇಗಲ್, ಮೈತ್ರಿ ಜೆ ಕಶ್ಯಪ್, ಗಣೇಶ್ ಹೆಗ್ಗೋಡು ಮುಂತಾದವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ,
ಈ ಮಣ್ಣಿನ ಹೆಮ್ಮೆಯ ಕಲೆಯಾದ ವೀರಗಾಸೆಯ ಕುರಿತಾದ ಜೊತೆಗೆ ತಂದೆ ಮಗನ ನಡುವಿನ ಭಾವನಾತ್ಮಕ ಪಯಣದ ಕುರಿತು ಮೂಡಿಬಂದಿರುವ ಸಂತೋಷ್ ಕೈದಾಳರವರ ನಿರ್ದೇಶನದ “ಪರಂವಃ” ಚಲನಚಿತ್ರದ ‘ಕಿರುದೀಪ ನೀ’ ಎಂಬ ಮೂರನೇ ಲಿರಿಕಲ್ ಹಾಡು ‘Saregama Kannada’ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.
ಈ ಹಾಡನ್ನು ಗಾಯಕ ಮೆಹಬೂಬ್ ಸಾಬ್ ಹಾಡಿದ್ದು, ನಾಗೇಶ್ ಕುಂದಾಪುರ, ಸಂಕೇತ್ ಅಂಬಲಿ ಹಾಗೂ ಕಿರಣ್ ಎನ್ ಆರ್ ಪುರ ಸೇರಿ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಈ ಲಿರಿಕಲ್ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಈ ಹಾಡನ್ನು ವೀಕ್ಷಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್ ರವರು ಹಾಡನ್ನು ಮೆಚ್ಚಿ, ಚಿತ್ರತಂಡಕ್ಕೆ ಶುಭವಾಗಲೆಂದು ಹಾರೈಸಿದ್ದಾರೆ.
ಈ ಹಾಡಿಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿ ಜನರಿಂದ ಮನ್ನಣೆಗಳಿಸುತ್ತಿರೊ ಟೀಸರ್ ಹಾಗೂ ಮೊದಲೆರಡು ಲಿರಿಕಲ್ ಹಾಡುಗಳು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…