ಪರಪುರುಷನ ಜೊತೆಗಿದ್ದ ಕಾರಣ ಪತ್ನಿಯನ್ನು ಕೊಲೆಗೈದ ಪ್ರಕರಣ: ಜೀವಾವಧಿ ಶಿಕ್ಷೆಯಿಂದ ಪಾರಾದ ಕೊಲೆಗೈದ ಪತಿ

ಪರಪುರುಷನ ಜೊತೆಗಿದ್ದ ಕಾರಣ ಪತ್ನಿಯನ್ನು ಕೊಲೆಗೈದ ಪ್ರಕರಣದಲ್ಲಿ ಪತಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಏಳು ವರ್ಷಕ್ಕೆ ಇಳಿಸಿ ಹೈಕೋರ್ಟ್‌ ಆದೇಶಿಸಿದೆ.

ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ದೊಡ್ಡಬಳ್ಳಾಪುರದ ಬೊಮ್ಮನಹಳ್ಳಿಯ ನಿವಾಸಿ ರಾಜೇಶ್‌ (39) ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿಯನ್ನು ಭಾಗಶಃ ಪುರಸ್ಕರಿಸಿದ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಹಾಗೂ ಕೆ.ಎಸ್‌.ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಸಿ.ಎಚ್‌.ಹನುಮಂತರಾಯ ವಾದ ಮಂಡಿಸಿ, ಮೇಲ್ಮನವಿದಾರನ ಪತ್ನಿ ಬೆಳಗಿನ ಜಾವ 4 ಗಂಟೆಯಲ್ಲಿ ಗ್ರಾಮದ ಹೊರ ವಲಯದ ಹೊಲದಲ್ಲಿ ಪರಪುರುಷನ ಜೊತೆಗಿದ್ದರು. ಈ ದೃಶ್ಯವನ್ನು ನೋಡಿದ್ದರಿಂದ ಉಂಟಾದ ಹಠಾತ್‌ ಪ್ರಚೋದನೆಯಿಂದ ಪತಿ ಸ್ವಯಂ ನಿಯಂತ್ರಣ ಹಾಗೂ ಮಾನಸಿಕ ಸಮತೋಲನ ಕಳೆದುಕೊಂಡು ಪತ್ನಿಯನ್ನು ಹತ್ಯೆಗೈದಿದ್ದಾನೆ. ಆತ ಘಟನಾ ಸ್ಥಳಕ್ಕೆ ನಿರಾಯುಧನಾಗಿ ಹೋಗಿದ್ದ. ಹೆಂಡತಿಯನ್ನು ಕೊಲೆ ಮಾಡುವ ಉದ್ದೇಶ ಹೊಂದಿರಲಿಲ್ಲ. ಹಾಗಾಗಿ, ಅದನ್ನು ಉದ್ದೇಶಪೂರ್ವಕ ಕೊಲೆಯೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದರು. ಈ ವಾದ ಪರಿಗಣಿಸಿದ ಹೈಕೋರ್ಟ್‌ ರಾಜೇಶ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಏಳು ವರ್ಷ ಕಠಿಣ ಜೈಲು ಶಿಕ್ಷೆಗೆ ಇಳಿಸಿದೆ.

ಪ್ರಕರಣದ ವಿವರ:

ಲಕ್ಷ್ಮಿ ಎಂಬಾಕೆಯನ್ನು ರಾಜೇಶ್‌ 2010ರ ಅ.22ರಂದು ಮದುವೆಯಾಗಿದ್ದರು. ಆತನೊಂದಿಗೆ ಬಾಳಲು ಲಕ್ಷ್ಮೀ ಗೆ ಇಷ್ಟವಿರಲಿಲ್ಲ. ಇದರಿಂದ ರಾಜೇಶ್‌ ಎರಡನೇ ಮದುವೆಯಾಗಲು ಆಕೆ ಒಪ್ಪಿಗೆ ಪತ್ರ ಬರೆದುಕೊಟ್ಟಿದ್ದಳು. ಅದರಂತೆ ರಾಜೇಶ್‌ ಎರಡನೇ ಮದುವೆಯಾಗಿದ್ದರು. ಹಿರಿಯರ ರಾಜಿ ಸಂಧಾನದಂತೆ ಲಕ್ಷ್ಮೀ ಗೆ ಮನೆ ಕಟ್ಟಿಸಿಕೊಡಲಾಗಿತ್ತು. ಇಬ್ಬರು ಪತ್ನಿಯರೊಂದಿಗೆ ರಾಜೇಶ್‌ ಸಂಸಾರ ನಡೆಸುತ್ತಿದ್ದರು.

ಲಕ್ಷ್ಮಿ 2018ರ ಫೆ.8ರಂದು ತವರು ಮನೆಯಿಂದ ರಾಜೇಶ್‌ ಮನೆಗೆ ಬಂದಿದ್ದರು. ಅಂದು ಬೆಳಗಿನ ಜಾವ 4 ಗಂಟೆಯಲ್ಲಿ ಲಕ್ಷ್ಮಿ ತನ್ನ ಪಕ್ಕದಲ್ಲಿ ಇಲ್ಲದೇ ಇರುವುದನ್ನು ರಾಜೇಶ್‌ ಗಮನಿಸಿದ್ದರು. ಹೆಂಡತಿಯನ್ನು ಹುಡುಕಿಕೊಂಡು ಹೋದಾಗ ಗ್ರಾಮದ ಹೊರವಲಯದ ಹೊಲದಲ್ಲಿ ಯಾರೋ ಮಾತನಾಡುತ್ತಿರುವುದು ಕೇಳಿತ್ತು. ಅಲ್ಲಿಗೆ ತೆರಳಿ ನೋಡಿದಾಗ ಲಕ್ಷ್ಮಿ ಪರಪುರುಷನ ಜೊತೆಯಲ್ಲಿ ಇರುವುದು ಕಂಡುಬಂದಿತ್ತು. ಇದರಿಂದ ಕುಪಿತನಾದ ರಾಜೇಶ್‌, ಆಕೆ ತೊಟ್ಟಿದ್ದ ವೇಲ್‌ನಿಂದಲೇ ಕುತ್ತಿಗೆ ಬಿಗಿದು ಸಾಯಿಸಿದ್ದರು.

ನಂತರ ಸ್ನೇಹಿತನ ಮೂಲಕ ರಾಜೇಶ್‌ ಘಟನೆಯ ಮಾಹಿತಿಯನ್ನು ದೊಡ್ಡಬೆಳವೆಂಗಲ ಪೊಲೀಸರು ತಿಳಿಸಿದ್ದನು. ಕೊಲೆ ಪ್ರಕರಣ ದಾಖಲಿಸಿದ್ದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದರು. ದೊಡ್ಡಬಳ್ಳಾಪುರ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಕೊಲೆ ಪ್ರಕರಣದಡಿ ರಾಜೇಶ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಆದೇಶ ಪ್ರಶ್ನಿಸಿ ಆತ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದನು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

10 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

11 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

11 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

13 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

16 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

17 hours ago