ಪರಪುರುಷನ ಜೊತೆಗಿದ್ದ ಕಾರಣ ಪತ್ನಿಯನ್ನು ಕೊಲೆಗೈದ ಪ್ರಕರಣ: ಜೀವಾವಧಿ ಶಿಕ್ಷೆಯಿಂದ ಪಾರಾದ ಕೊಲೆಗೈದ ಪತಿ

ಪರಪುರುಷನ ಜೊತೆಗಿದ್ದ ಕಾರಣ ಪತ್ನಿಯನ್ನು ಕೊಲೆಗೈದ ಪ್ರಕರಣದಲ್ಲಿ ಪತಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಏಳು ವರ್ಷಕ್ಕೆ ಇಳಿಸಿ ಹೈಕೋರ್ಟ್‌ ಆದೇಶಿಸಿದೆ.

ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ದೊಡ್ಡಬಳ್ಳಾಪುರದ ಬೊಮ್ಮನಹಳ್ಳಿಯ ನಿವಾಸಿ ರಾಜೇಶ್‌ (39) ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿಯನ್ನು ಭಾಗಶಃ ಪುರಸ್ಕರಿಸಿದ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಹಾಗೂ ಕೆ.ಎಸ್‌.ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಸಿ.ಎಚ್‌.ಹನುಮಂತರಾಯ ವಾದ ಮಂಡಿಸಿ, ಮೇಲ್ಮನವಿದಾರನ ಪತ್ನಿ ಬೆಳಗಿನ ಜಾವ 4 ಗಂಟೆಯಲ್ಲಿ ಗ್ರಾಮದ ಹೊರ ವಲಯದ ಹೊಲದಲ್ಲಿ ಪರಪುರುಷನ ಜೊತೆಗಿದ್ದರು. ಈ ದೃಶ್ಯವನ್ನು ನೋಡಿದ್ದರಿಂದ ಉಂಟಾದ ಹಠಾತ್‌ ಪ್ರಚೋದನೆಯಿಂದ ಪತಿ ಸ್ವಯಂ ನಿಯಂತ್ರಣ ಹಾಗೂ ಮಾನಸಿಕ ಸಮತೋಲನ ಕಳೆದುಕೊಂಡು ಪತ್ನಿಯನ್ನು ಹತ್ಯೆಗೈದಿದ್ದಾನೆ. ಆತ ಘಟನಾ ಸ್ಥಳಕ್ಕೆ ನಿರಾಯುಧನಾಗಿ ಹೋಗಿದ್ದ. ಹೆಂಡತಿಯನ್ನು ಕೊಲೆ ಮಾಡುವ ಉದ್ದೇಶ ಹೊಂದಿರಲಿಲ್ಲ. ಹಾಗಾಗಿ, ಅದನ್ನು ಉದ್ದೇಶಪೂರ್ವಕ ಕೊಲೆಯೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದರು. ಈ ವಾದ ಪರಿಗಣಿಸಿದ ಹೈಕೋರ್ಟ್‌ ರಾಜೇಶ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಏಳು ವರ್ಷ ಕಠಿಣ ಜೈಲು ಶಿಕ್ಷೆಗೆ ಇಳಿಸಿದೆ.

ಪ್ರಕರಣದ ವಿವರ:

ಲಕ್ಷ್ಮಿ ಎಂಬಾಕೆಯನ್ನು ರಾಜೇಶ್‌ 2010ರ ಅ.22ರಂದು ಮದುವೆಯಾಗಿದ್ದರು. ಆತನೊಂದಿಗೆ ಬಾಳಲು ಲಕ್ಷ್ಮೀ ಗೆ ಇಷ್ಟವಿರಲಿಲ್ಲ. ಇದರಿಂದ ರಾಜೇಶ್‌ ಎರಡನೇ ಮದುವೆಯಾಗಲು ಆಕೆ ಒಪ್ಪಿಗೆ ಪತ್ರ ಬರೆದುಕೊಟ್ಟಿದ್ದಳು. ಅದರಂತೆ ರಾಜೇಶ್‌ ಎರಡನೇ ಮದುವೆಯಾಗಿದ್ದರು. ಹಿರಿಯರ ರಾಜಿ ಸಂಧಾನದಂತೆ ಲಕ್ಷ್ಮೀ ಗೆ ಮನೆ ಕಟ್ಟಿಸಿಕೊಡಲಾಗಿತ್ತು. ಇಬ್ಬರು ಪತ್ನಿಯರೊಂದಿಗೆ ರಾಜೇಶ್‌ ಸಂಸಾರ ನಡೆಸುತ್ತಿದ್ದರು.

ಲಕ್ಷ್ಮಿ 2018ರ ಫೆ.8ರಂದು ತವರು ಮನೆಯಿಂದ ರಾಜೇಶ್‌ ಮನೆಗೆ ಬಂದಿದ್ದರು. ಅಂದು ಬೆಳಗಿನ ಜಾವ 4 ಗಂಟೆಯಲ್ಲಿ ಲಕ್ಷ್ಮಿ ತನ್ನ ಪಕ್ಕದಲ್ಲಿ ಇಲ್ಲದೇ ಇರುವುದನ್ನು ರಾಜೇಶ್‌ ಗಮನಿಸಿದ್ದರು. ಹೆಂಡತಿಯನ್ನು ಹುಡುಕಿಕೊಂಡು ಹೋದಾಗ ಗ್ರಾಮದ ಹೊರವಲಯದ ಹೊಲದಲ್ಲಿ ಯಾರೋ ಮಾತನಾಡುತ್ತಿರುವುದು ಕೇಳಿತ್ತು. ಅಲ್ಲಿಗೆ ತೆರಳಿ ನೋಡಿದಾಗ ಲಕ್ಷ್ಮಿ ಪರಪುರುಷನ ಜೊತೆಯಲ್ಲಿ ಇರುವುದು ಕಂಡುಬಂದಿತ್ತು. ಇದರಿಂದ ಕುಪಿತನಾದ ರಾಜೇಶ್‌, ಆಕೆ ತೊಟ್ಟಿದ್ದ ವೇಲ್‌ನಿಂದಲೇ ಕುತ್ತಿಗೆ ಬಿಗಿದು ಸಾಯಿಸಿದ್ದರು.

ನಂತರ ಸ್ನೇಹಿತನ ಮೂಲಕ ರಾಜೇಶ್‌ ಘಟನೆಯ ಮಾಹಿತಿಯನ್ನು ದೊಡ್ಡಬೆಳವೆಂಗಲ ಪೊಲೀಸರು ತಿಳಿಸಿದ್ದನು. ಕೊಲೆ ಪ್ರಕರಣ ದಾಖಲಿಸಿದ್ದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದರು. ದೊಡ್ಡಬಳ್ಳಾಪುರ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಕೊಲೆ ಪ್ರಕರಣದಡಿ ರಾಜೇಶ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಆದೇಶ ಪ್ರಶ್ನಿಸಿ ಆತ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದನು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

6 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

10 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

10 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

13 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago