ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ, ತಳವಾರ ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರಪೀಠದ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಾತ್ರೆ- 2024 ಹಾಗೂ ಜನಜಾಗೃತಿ ಜಾಥಾ ಉದ್ಘಾಟಿಸಿ, ಮಾತನಾಡಿದರು.
ಕೇಂದ್ರ ಸರ್ಕಾರ ಈಗಾಗಲೇ ಈ ಸಮುದಾಯವನ್ನು ಎಸ್.ಟಿ ಗೆ ಸೇರ್ಪಡೆ ಮಾಡಿದೆ. ಇಲ್ಲಿ ಇನ್ನೂ ಪ್ರವರ್ಗದಲ್ಲಿರುವ ನಿಮ್ಮ ಮೇಲಿದ್ದ ಎಲ್ಲಾ ಪ್ರಕರಣಗಳನ್ನು ವಾಪಸ್ಸು ಪಡೆಯಲೂ ಸೂಚನೆ ನೀಡಲಾಗಿದೆ ಎಂದರು.
ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವುದರಿಂದ ಸಾಮಾಜಿಕ, ಆರ್ಥಿಕ ಅಸಮಾನತೆ ನಿರ್ಮಾಣವಾಗಿದೆ. ವಿದ್ಯೆ, ಬುದ್ಧಿವಂತಿಕೆ ಯಾರ ಸ್ವತ್ತಲ್ಲ. ಬುದ್ಧಿ, ಜ್ಞಾನ ಪಡೆದಾಗ ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯ. ಎಲ್ಲರಿಗೂ ಸಮಾನ ಎಂಬ ಭಾವ ಬರಲು ಸ್ವಾಭಿಮಾನ ಅಗತ್ಯ ಎಂದು ಹೇಳಿದರು.
ಬೇಡ ಜನಾಂಗದಲ್ಲಿ ಜನಿಸಿದ ವಾಲ್ಮೀಕಿಯವರು ರಾಮಾಯಣವನ್ನು ರಚಿಸಿ ಮಹರ್ಷಿಯಾದರು. ರಾಮಾಯಣ ಮಹಾನ್ ಗ್ರಂಥ. ಮಹಾನ್ ಗ್ರಂಥಗಳನ್ನು ಮೇಲ್ಜಾತಿಯವರು ಮಾತ್ರ ರಚಿಸಲು ಸಾಧ್ಯವೆಂಬ ಪ್ರತೀತಿಯಿತ್ತು. ಆದರೆ ಕಾವ್ಯಸಾಹಿತ್ಯವನ್ನು ಶೂದ್ರರು ರಚಿಸಬಹುದೆಂಬುದನ್ನು ಮಹರ್ಷಿ ವಾಲ್ಮೀಕಿ ನಿರೂಪಿಸಿದರು. ಶ್ರೀರಾಮಚಂದ್ರನ ಕಾಲದಲ್ಲಿಯೇ ಸಮಾನ ಸಮಾಜದ ಹಾಗೂ ಪ್ರಜಾಪ್ರಭುತ್ವದ ಪರಿಕಲ್ಪನೆಯಿತ್ತು. ಪ್ರಜೆಗಳೇ ಆಡಳಿತ ನಡೆಸುವ ಪ್ರಜಾಪ್ರಭುತ್ವದ ಮೂಲವನ್ನು ರಾಮಾಯಣದಲ್ಲಿ ಕಾಣಬಹುದು. ಬಸವಾದಿ ಶರಣರು ತಿಳಿಸಿದಂತೆ ವರ್ಗರಹಿತ, ಜಾತಿರಹಿತ, ಸಮಾನ ಅವಕಾಶ ನೀಡುವ ಸಮಾಜ ನಿರ್ಮಾಣವಾದಾಗ ರಾಮರಾಜ್ಯ ಎಂದು ಹೇಳಬಹುದು ಎಂದು ತಿಳಿಸಿದರು.
ಇಂದು ಜಾತಿ – ಜಾತಿಗಳನ್ನು ಒಡೆಯುವ ಕೆಲಸವನ್ನು ಪಟ್ಟಭದ್ರ ಹಿತಾಸಕ್ತಿಗಳು ಮಾಡುತ್ತಿವೆ. ಸಮಸಮಾಜದ ಆಶಯವನ್ನೇ ಸಂವಿಧಾನ ಪ್ರತಿಪಾದಿಸುತ್ತದೆ. ಸಂವಿಧಾನದ ಆಶಯಗಳನ್ನು ಜಾರಿಗೆ ತರುವುದೇ ಸರ್ಕಾರದ ಗುರಿಯಾಗಿದೆ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಮಾಡಬೇಕೆಂದು ಸಂವಿಧಾನ ಹೇಳುತ್ತದೆ. ಎಸ್.ಸಿ , ಎಸ್.ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರಿಗೆ ಸರಿಯಾದ ಅವಕಾಶ ದೊರೆತಲ್ಲಿ ಉತ್ತಮವಾಗಿ ಜೀವನ ರೂಪಿಸಿಕೊಳ್ಳುತ್ತಿದ್ದರು. ಇವರಿಗೆ ಸಮಾನ ಅವಕಾಶಗಳು ದೊರೆತಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದರು.
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…