ಪರಿವಾರ, ತಳವಾರ ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ- ಸಿಎಂ ಸಿದ್ದರಾಮಯ್ಯ

ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ, ತಳವಾರ ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರಪೀಠದ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಾತ್ರೆ- 2024 ಹಾಗೂ ಜನಜಾಗೃತಿ ಜಾಥಾ ಉದ್ಘಾಟಿಸಿ, ಮಾತನಾಡಿದರು.

ಕೇಂದ್ರ ಸರ್ಕಾರ ಈಗಾಗಲೇ ಈ ಸಮುದಾಯವನ್ನು ಎಸ್.ಟಿ ಗೆ ಸೇರ್ಪಡೆ ಮಾಡಿದೆ. ಇಲ್ಲಿ ಇನ್ನೂ ಪ್ರವರ್ಗದಲ್ಲಿರುವ ನಿಮ್ಮ ಮೇಲಿದ್ದ ಎಲ್ಲಾ ಪ್ರಕರಣಗಳನ್ನು ವಾಪಸ್ಸು ಪಡೆಯಲೂ ಸೂಚನೆ ನೀಡಲಾಗಿದೆ ಎಂದರು.

ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವುದರಿಂದ ಸಾಮಾಜಿಕ, ಆರ್ಥಿಕ ಅಸಮಾನತೆ ನಿರ್ಮಾಣವಾಗಿದೆ. ವಿದ್ಯೆ, ಬುದ್ಧಿವಂತಿಕೆ ಯಾರ ಸ್ವತ್ತಲ್ಲ. ಬುದ್ಧಿ, ಜ್ಞಾನ ಪಡೆದಾಗ ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯ. ಎಲ್ಲರಿಗೂ ಸಮಾನ ಎಂಬ ಭಾವ ಬರಲು ಸ್ವಾಭಿಮಾನ ಅಗತ್ಯ ಎಂದು ಹೇಳಿದರು.

ಬೇಡ ಜನಾಂಗದಲ್ಲಿ ಜನಿಸಿದ ವಾಲ್ಮೀಕಿಯವರು ರಾಮಾಯಣವನ್ನು ರಚಿಸಿ ಮಹರ್ಷಿಯಾದರು. ರಾಮಾಯಣ ಮಹಾನ್ ಗ್ರಂಥ. ಮಹಾನ್ ಗ್ರಂಥಗಳನ್ನು ಮೇಲ್ಜಾತಿಯವರು ಮಾತ್ರ ರಚಿಸಲು ಸಾಧ್ಯವೆಂಬ ಪ್ರತೀತಿಯಿತ್ತು. ಆದರೆ ಕಾವ್ಯಸಾಹಿತ್ಯವನ್ನು ಶೂದ್ರರು ರಚಿಸಬಹುದೆಂಬುದನ್ನು ಮಹರ್ಷಿ ವಾಲ್ಮೀಕಿ ನಿರೂಪಿಸಿದರು. ಶ್ರೀರಾಮಚಂದ್ರನ ಕಾಲದಲ್ಲಿಯೇ ಸಮಾನ ಸಮಾಜದ ಹಾಗೂ ಪ್ರಜಾಪ್ರಭುತ್ವದ ಪರಿಕಲ್ಪನೆಯಿತ್ತು. ಪ್ರಜೆಗಳೇ ಆಡಳಿತ ನಡೆಸುವ ಪ್ರಜಾಪ್ರಭುತ್ವದ ಮೂಲವನ್ನು ರಾಮಾಯಣದಲ್ಲಿ ಕಾಣಬಹುದು. ಬಸವಾದಿ ಶರಣರು ತಿಳಿಸಿದಂತೆ ವರ್ಗರಹಿತ, ಜಾತಿರಹಿತ, ಸಮಾನ ಅವಕಾಶ ನೀಡುವ ಸಮಾಜ ನಿರ್ಮಾಣವಾದಾಗ ರಾಮರಾಜ್ಯ ಎಂದು ಹೇಳಬಹುದು ಎಂದು ತಿಳಿಸಿದರು.

ಇಂದು ಜಾತಿ – ಜಾತಿಗಳನ್ನು ಒಡೆಯುವ ಕೆಲಸವನ್ನು ಪಟ್ಟಭದ್ರ ಹಿತಾಸಕ್ತಿಗಳು ಮಾಡುತ್ತಿವೆ. ಸಮಸಮಾಜದ ಆಶಯವನ್ನೇ ಸಂವಿಧಾನ ಪ್ರತಿಪಾದಿಸುತ್ತದೆ. ಸಂವಿಧಾನದ ಆಶಯಗಳನ್ನು ಜಾರಿಗೆ ತರುವುದೇ ಸರ್ಕಾರದ ಗುರಿಯಾಗಿದೆ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಮಾಡಬೇಕೆಂದು ಸಂವಿಧಾನ ಹೇಳುತ್ತದೆ. ಎಸ್.ಸಿ , ಎಸ್.ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರಿಗೆ ಸರಿಯಾದ ಅವಕಾಶ ದೊರೆತಲ್ಲಿ ಉತ್ತಮವಾಗಿ ಜೀವನ ರೂಪಿಸಿಕೊಳ್ಳುತ್ತಿದ್ದರು. ಇವರಿಗೆ ಸಮಾನ ಅವಕಾಶಗಳು ದೊರೆತಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದರು.

Ramesh Babu

Journalist

Recent Posts

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

2 hours ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

14 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

16 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

16 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

23 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

23 hours ago