ಪರಿವಾರ, ತಳವಾರ ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ- ಸಿಎಂ ಸಿದ್ದರಾಮಯ್ಯ

ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ, ತಳವಾರ ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರಪೀಠದ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಾತ್ರೆ- 2024 ಹಾಗೂ ಜನಜಾಗೃತಿ ಜಾಥಾ ಉದ್ಘಾಟಿಸಿ, ಮಾತನಾಡಿದರು.

ಕೇಂದ್ರ ಸರ್ಕಾರ ಈಗಾಗಲೇ ಈ ಸಮುದಾಯವನ್ನು ಎಸ್.ಟಿ ಗೆ ಸೇರ್ಪಡೆ ಮಾಡಿದೆ. ಇಲ್ಲಿ ಇನ್ನೂ ಪ್ರವರ್ಗದಲ್ಲಿರುವ ನಿಮ್ಮ ಮೇಲಿದ್ದ ಎಲ್ಲಾ ಪ್ರಕರಣಗಳನ್ನು ವಾಪಸ್ಸು ಪಡೆಯಲೂ ಸೂಚನೆ ನೀಡಲಾಗಿದೆ ಎಂದರು.

ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವುದರಿಂದ ಸಾಮಾಜಿಕ, ಆರ್ಥಿಕ ಅಸಮಾನತೆ ನಿರ್ಮಾಣವಾಗಿದೆ. ವಿದ್ಯೆ, ಬುದ್ಧಿವಂತಿಕೆ ಯಾರ ಸ್ವತ್ತಲ್ಲ. ಬುದ್ಧಿ, ಜ್ಞಾನ ಪಡೆದಾಗ ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯ. ಎಲ್ಲರಿಗೂ ಸಮಾನ ಎಂಬ ಭಾವ ಬರಲು ಸ್ವಾಭಿಮಾನ ಅಗತ್ಯ ಎಂದು ಹೇಳಿದರು.

ಬೇಡ ಜನಾಂಗದಲ್ಲಿ ಜನಿಸಿದ ವಾಲ್ಮೀಕಿಯವರು ರಾಮಾಯಣವನ್ನು ರಚಿಸಿ ಮಹರ್ಷಿಯಾದರು. ರಾಮಾಯಣ ಮಹಾನ್ ಗ್ರಂಥ. ಮಹಾನ್ ಗ್ರಂಥಗಳನ್ನು ಮೇಲ್ಜಾತಿಯವರು ಮಾತ್ರ ರಚಿಸಲು ಸಾಧ್ಯವೆಂಬ ಪ್ರತೀತಿಯಿತ್ತು. ಆದರೆ ಕಾವ್ಯಸಾಹಿತ್ಯವನ್ನು ಶೂದ್ರರು ರಚಿಸಬಹುದೆಂಬುದನ್ನು ಮಹರ್ಷಿ ವಾಲ್ಮೀಕಿ ನಿರೂಪಿಸಿದರು. ಶ್ರೀರಾಮಚಂದ್ರನ ಕಾಲದಲ್ಲಿಯೇ ಸಮಾನ ಸಮಾಜದ ಹಾಗೂ ಪ್ರಜಾಪ್ರಭುತ್ವದ ಪರಿಕಲ್ಪನೆಯಿತ್ತು. ಪ್ರಜೆಗಳೇ ಆಡಳಿತ ನಡೆಸುವ ಪ್ರಜಾಪ್ರಭುತ್ವದ ಮೂಲವನ್ನು ರಾಮಾಯಣದಲ್ಲಿ ಕಾಣಬಹುದು. ಬಸವಾದಿ ಶರಣರು ತಿಳಿಸಿದಂತೆ ವರ್ಗರಹಿತ, ಜಾತಿರಹಿತ, ಸಮಾನ ಅವಕಾಶ ನೀಡುವ ಸಮಾಜ ನಿರ್ಮಾಣವಾದಾಗ ರಾಮರಾಜ್ಯ ಎಂದು ಹೇಳಬಹುದು ಎಂದು ತಿಳಿಸಿದರು.

ಇಂದು ಜಾತಿ – ಜಾತಿಗಳನ್ನು ಒಡೆಯುವ ಕೆಲಸವನ್ನು ಪಟ್ಟಭದ್ರ ಹಿತಾಸಕ್ತಿಗಳು ಮಾಡುತ್ತಿವೆ. ಸಮಸಮಾಜದ ಆಶಯವನ್ನೇ ಸಂವಿಧಾನ ಪ್ರತಿಪಾದಿಸುತ್ತದೆ. ಸಂವಿಧಾನದ ಆಶಯಗಳನ್ನು ಜಾರಿಗೆ ತರುವುದೇ ಸರ್ಕಾರದ ಗುರಿಯಾಗಿದೆ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಮಾಡಬೇಕೆಂದು ಸಂವಿಧಾನ ಹೇಳುತ್ತದೆ. ಎಸ್.ಸಿ , ಎಸ್.ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರಿಗೆ ಸರಿಯಾದ ಅವಕಾಶ ದೊರೆತಲ್ಲಿ ಉತ್ತಮವಾಗಿ ಜೀವನ ರೂಪಿಸಿಕೊಳ್ಳುತ್ತಿದ್ದರು. ಇವರಿಗೆ ಸಮಾನ ಅವಕಾಶಗಳು ದೊರೆತಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

7 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

11 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

11 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

14 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago