ಪರಿಶಿಷ್ಟರ ಮೇಲಿನ ದೌರ್ಜನ್ಯವನ್ನು ಆಯೋಗ ಸಹಿಸುವುದಿಲ್ಲ-ಡಾ.ಎಲ್ ಮೂರ್ತಿ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲಿನ ಶೋಷಣೆ, ದೌರ್ಜನ್ಯಗಳನ್ನು ಆಯೋಗವು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ನಡೆದ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ನೆರಿದಿದ್ದ ಸಾರ್ವಜನಿಕರು ಹಾಗೂ ಸಮುದಾಯದ ಮುಖಂಡರಿಂದ ಅಹವಾಲು ಸ್ವೀಕರಿಸಿದರು ವಿಚಾರಗಳ ಬಗ್ಗೆ ಚರ್ಚಿಸಿದರು.

ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯಾವುದೇ ವ್ಯಕ್ತಿ ಅಥವಾ ಸಮುದಾಯ,ಶೋಷಣೆ ಮತ್ತು ದೌರ್ಜನ್ಯಕ್ಕೊಳಗಾದರೆ ಆಯೋಗವು ತಕ್ಷಣ ನಿರ್ದಾಕ್ಷಿಣ್ಯವಾಗಿ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತದೆ. ಈ ಸಂಬಂಧವಾಗಿ ಆಯೋಗಕ್ಕೆ ಬಂದು ಪ್ರಕರಣ ದಾಖಲಿಸಬಹುದು.

ಪ್ರಮುಖವಾಗಿ ಶೋಷಣೆ, ದೌರ್ಜನ್ಯ, ಜಮೀನಿನ ಖಾತೆ, ಪಹಣಿ, ಸ್ಮಶಾನ, ಸಮುದಾಯ ಭವನ, ಎಸ್‌ಸಿಎಸ್ಪಿ ಮತ್ತು ಟಿಎಸ್‌ಪಿ ಅನುದಾನ ಬಳಕೆ, ಅಕ್ರಮ ಮದ್ಯ ಮಾರಾಟ, ಪೊಲೀಸ್ ನಡವಳಿಕೆ, ಕಾಮಗಾರಿಗಳಿಗೆ ನಾಮ ಫಲಕ, ಆಶ್ರಯ ಯೋಜನೆ ಮುಂತಾದ ಸಮಸ್ಯೆಗಳ ಬಗ್ಗೆ ಸಮಾಜದ ಮುಖಂಡರು ತಿಳಿಸಿದ್ದಾರೆ. ಇವುಗಳನ್ನು ಆಯೋಗವು ಕುಲಂಕುಶವಾಗಿ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಿದೆ ಎಂದರು.

ಬಳಿಕ ಇದೇ ನಡೆದ ಜಿಲ್ಲಾಮಟ್ಡದ ಅಧಿಕಾರಿಗಳ ಸಭೆಯಲ್ಲಿ, ಎಲ್ಲಾ ಇಲಾಖೆಗಳಿಂದ ಜಿಲ್ಲೆಗೆ ಹಂಚಿಕೆಯಾಗಿರುವ ಅನುದಾನದ ಬಗ್ಗೆ ಮಾಹಿತಿ ಪಡೆದು, ವಿಸ್ತೃತವಾಗಿ ಚರ್ಚಿಸಿದರು. ಎಸ್‌ಸಿ/ಎಸ್‌ಟಿ ಸಮುದಾಯಗಳ ನಾಗರಿಕ ಹಕ್ಕುಗಳು, ಶಿಕ್ಷಣ ಹಾಗೂ ಅವರನ್ನು ಸಾಮಾಜಿಕವಾಗಿ ಸದೃಢರಾಗಿಸಲುಷ ಅಧಿಕಾರಿಗಳು ಶ್ರಮವಹಿಸಬೇಕು ಎಂದು ಹಲವು ಸೂಚನೆ ಮತ್ತು ನಿರ್ದೇಶನಗಳನ್ನು ನೀಡಿದರು.

*ಅನುದಾನ ಸದ್ಬಳಕೆ ಆಗಬೇಕು*

ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಅನುದಾನ ಒದಗಿಸಲಿದ್ದು ಆ ಹಣವು ಸಂಪೂರ್ಣವಾಗಿ ಪರಿಶಿಷ್ಟರ ಅಭಿವೃದ್ಧಿಗೆ ಸಮರ್ಪಕವಾಗಿ ಸದ್ಬಳಕೆ ಆಗಬೇಕು. ಪುರಸಭೆ, ನಗರಸಭೆ 24.5% ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ 25% ಹಣ ಪರಿಶಿಷ್ಟರಿಗೆ ಮೀಸಲಿಡಲಾಗುತ್ತದೆ. ಆ ಹಣ ದುರುಪಯೋಗ ಪಡಿಸಿಕೊಳ್ಳುವುದು ಅಥವಾ ಇತರೆ ಕೆಲಸಗಳಿಗೆ ಅನುದಾನ ಬಳಕೆ ಮಾಡುವುದು ಅಪರಾಧ. ಅಂತಹ ಲೋಪ ಎಸಗುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

*ಕಾಮಗಾರಿಗಳಿಗೆ ನಾಮಫಲಕ ಅಳವಡಿಸಿ*

ಎಸ್ಸಿಎಸ್ಪಿ ಟಿಎಸ್ಪಿ ಅನುದಾನ ಯೋಜನೆಯಡಿ ಕೈಗೊಂಡಿರುವ ರಸ್ತೆ, ಚರಂಡಿ ಮುಂತಾದ ಕಾಮಗಾರಿಗಳು ಮುಗಿದ ನಂತರ ಅಲ್ಲಿ ನಾಮಫಲಕ ಅಳವಡಿಸಿ ಇದರಿಂದ ಅಕ್ರಮ ಬಿಲ್ಲುಗಳು ಮಾಡಿಕೊಳ್ಳುವುದು ತಪ್ಪುತ್ತದೆ.

*ಅಕ್ರಮ ಮದ್ಯ ಮಾರಾಟ ತಡೆ*

ಗ್ರಾಮೀಣ ಪ್ರದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕೇರಿ, ಕಾಲೋನಿಗಳಲ್ಲಿ ಸಣ್ಣ ಅಂಗಡಿ, ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಸಮುದಾಯದ ಜನರು ಹೆಚ್ಚಾಗಿ ಅವಲಂಬಿತರಾಗಿದ್ದಾರೆ. ಇದನ್ನು ಸಂಪೂರ್ಣವಾಗಿ ಮಟ್ಟ ಹಾಕುವ ನಿಟ್ಟಿನಲ್ಲಿ ಅಬಕಾರಿ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದರು.

*ಕುಂದುಕೊರತೆ ಸಭೆಗಳು ಕಾಲಮಿತಿಯೊಳಗೆ ಆಗಬೇಕು*

ತಾಲ್ಲೂಕು ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಾಗೃತಿ ಸಮಿತಿ ಸಭೆಗಳು ಕಾಲಮಿತಿಯೊಳಗೆ ಆಗಬೇಕು. ಪ.ಜಾತಿ ಪಂಗಡದ ಮುಖಂಡರನ್ನು, ಸದಸ್ಯರನ್ನು ಸಭೆಗೆ ಆಹ್ವಾನಿಸಬೇಕು.‌ ಜಾಗೃತಿ ಸಭೆಗಳಲ್ಲಿ ಪರಿಶಿಷ್ಟರ ಸಮಸ್ಯೆಗಳಿಗೆ ತ್ವರಿತ ಪರಿಹಾರ, ಕ್ರಮ ಕೈಗೊಳ್ಳುವುದು. ಪೊಲೀಸ್ ಠಾಣೆಗಳಲ್ಲಿ ಪ.ಜಾತಿ ಪ.ಪಂಗಡದ ಜನರಿಗೆ ಗೌರವ, ಸೌಜನ್ಯದಿಂದ ವರ್ತಿಸುವುದನ್ನು ಮುಖ್ಯ ಎಂದರು.

*ಪಿಟಿಸಿಎಲ್ ಪ್ರಕರಣಗಳ ತ್ವರಿತ ವಿಲೇವಾರಿ ಆಗಬೇಕು*
ಭೂ ಒತ್ತುವರಿ, ಭೂ ಒಡೆತನ ಸಂಬಂಧಿಸಿದಂತೆ ಎಸಿ ನ್ಯಾಯಾಲಯದಲ್ಲಿನ ಪ್ರಕರಣಗಳ ತ್ವರಿತ ವಿಲೇವಾರಿ ಆಗಬೇಕು. ಪಿಟಿಸಿಎಲ್ ಪ್ರಕರಣಗಳು ಹೈಕೋರ್ಟ್ ನಲ್ಲಿ ತಡೆಷಇದ್ದರೆ ಅಂತಹ ಪ್ರಕರಣಗಳ ವಿಲೇವಾರಿಗೆ ಆಯೋಗದ ವತಿಯಿಂದ ಮೂರು ಜನ ಅಡ್ವೋಕೇಟ್ ನೇಮಿಸಿದ್ದು ದೂರುದಾರರು ಇದರ ಸದುಪಯೋಗ ಪಡೆದುಕೊಳ್ಳಬಹುದು.

ಸಭೆಯಲ್ಲಿ ಜಿಲ್ಲಾಧಿಕಾರಿ ಎಬಿ ಬಸವರಾಜು, ಎಸ್ಪಿ ಸಿಕೆ ಬಾಬಾ, ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಕಾರ್ಯದರ್ಶಿ ಹೆಚ್.ಎಸ್ ಶಿವರಾಂ ಹೆಚ್ ಎಸ್, ಸದಸ್ಯರಾದ ಕುಂಬಯ್ಯ, ಎ‌ಎಸ್ಪಿ ನಾಗರಾಜ್, ಜಿಪಂ ಉಪಕಾರ್ಯದರ್ಶಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಪ್ರೇಮ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೇ.5ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್‌ಗಳಲ್ಲಿ ವಿದ್ಯುತ್…

6 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

12 hours ago

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

23 hours ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

23 hours ago

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

1 day ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

1 day ago