ಕೋಲಾರ: ಪರಿಶಿಷ್ಟ ಜನರ ಅಭಿವೃದ್ದಿಗೆ ಮೀಸಲಿದ್ದ ಎಸ್ಸಿಪಿ, ಟಿಎಸ್ ಪಿ ಅನುದಾನವನ್ನು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿರವುದನ್ನು ಖಂಡಿಸಿ ಮಾ.4 ರಂದು ನಗರದಲ್ಲಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಲಾಗುತ್ತದೆ ಎಂದು ಮಾಜಿ ಸಂಸದ ಎಸ್ ಮುನಿಸ್ವಾಮಿ ತಿಳಿಸಿದರು.
ನಗರದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪ್ರತಿಭಟನೆಗೆ ಸಂಬಂಧಿಸಿದಂತೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ನವರು ಎಲ್ಲರಿಗೂ ಉಚಿತ ಎಂದು ಪಂಚ ಗ್ಯಾರೆಂಟಿಗಳನ್ನು ಘೋಷಣೆ ಮಾಡಿದರು. ಅದಕ್ಕೆ ಈಗ ಹಣ ಹೊಂದಿಸಲಾಗದೆ. ಎಸ್ಸಿಪಿ ಮತ್ತು ಎಸ್ಟಿಪಿ ಮೀಸಲು ಹಣವನ್ನು ಬಳಸಿಕೊಳ್ಳುತ್ತಿದೆ. ಅದಕ್ಕಾಗಿ ನಿಯಮಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಈಗಾಗಲೇ ಸರ್ಕಾರವು ಬಜೆಟ್ ನಲ್ಲಿ ಮಂಡನೆ ಮಾಡಲು ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಸುಮಾರು 14488 ಕೋಟೆಯನ್ನು ಪ್ರಸ್ತಾವನೆಗೆ ಕಳಸಿದ್ದಾರೆ ಈವರಗೆ ಆಯಾ ಜನಾಂಗದವರಿಗೆ ಮೀಸಲಾದ ಹಣ ಅದೇ ಜನಾಂಗದ ಅಭಿವೃದ್ಧಿಗೆ ಬಳಸಿಕೊಳ್ಳಲಾಗಿತ್ತು ಆದರೆ ಕಾಂಗ್ರೆಸ್ ಸರ್ಕಾರವು ದಲಿತರ ಪರ ಅಂತ ಹೇಳಿ ಅಧಿಕಾರಕ್ಕೆ ಬಂದ ನಂತರ ಅ ಅನುದಾನವನ್ನು ಬೇರೆ ಕಡೆ ಬಳಕೆ ಮಾಡಲಾಗುತ್ತಿದೆ ಇದರ ವಿರುದ್ದವಾಗಿ ನಡೆಯುವ ಪ್ರತಿಭಟನೆಗೆ ದಲಿತ ಪರವಾಗಿರುವ ಎಲ್ಲಾ ಸಂಘಟನೆಗಳು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ ಕಾಂಗ್ರೆಸ್ ಪಕ್ಷವು ಹೆಸರಿಗೆ ಮಾತ್ರ ಸಂವಿಧಾನದ ಪರ ಆದರೆ ಮಾಡುವುದು ಎಲ್ಲಾ ಸಂವಿಧಾನ ವಿರೋಧಿ ಕೆಲಸವಾಗಿದೆ ಎಸ್ಸಿ , ಎಸ್ಟಿ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಗ್ಯಾರೆಂಟಿಗೆ ಬಳಸಿಕೊಂಡಿದೆ ರಾಜ್ಯದ ಕಾಂಗ್ರೆಸ್ ಸರ್ಕಾರ. ಇದನ್ನು ಕೈಬಿಡಲು ರಾಜ್ಯಾದ್ಯಾಂತ ನಮ್ಮ ಪಕ್ಷ ಹೋರಾಟ ಮಾಡುತ್ತದೆ ರಾಜ್ಯ ಮುಖಂಡರ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ ಹಾಕಲಾಗುತ್ತದೆ ಯಾವುದೇ ಕಾರಣಕ್ಕೂ ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನ ಬೇರೆ ಕಾರ್ಯಕ್ರಮಗಳಿಗೆ ವರ್ಗಾವಣೆ ಆಗಬಾರದು ಇದರ ವಿರುದ್ದದ ಹೋರಾಟಕ್ಕೆ ಪಕ್ಷಾತೀತವಾಗಿ ಬೆಂಬಲಿಸಬೇಕು ಎಂದರು.
ರಾಜ್ಯದಲ್ಲಿ ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟಿದ್ದ ಶೇ.24 ಹಣವನ್ನು ರಾಜ್ಯ ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿಕೊಂಡಿದೆ. ಈ ಮೂಲಕ ತಳ ಸಮುದಾಯಗಳಿಗೆ ಅನ್ಯಾಯ ಮಾಡಿದೆ ನಮ್ಮ ಪಕ್ಷ ಗ್ಯಾರಂಟಿ ಯೋಜನೆಗಳ ವಿರುದ್ಧವಿಲ್ಲ. ಆದರೆ, ರಾಜ್ಯ ಸರ್ಕಾರ ಗ್ಯಾರಂಟಿಗಳಿಗೆ ಅಗತ್ಯವಿರುವ 56,000 ಕೋಟಿಗಳಷ್ಟು ಹಣವನ್ನು ಪ್ರತ್ಯೇಕವಾಗಿ ಮೀಸಲಿಡಬೇಕು ಮತ್ತು ಎಸ್ಸಿ, ಎಸ್ಟಿ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಟ್ಟ ಶೇ 24.8 ರಷ್ಟು ಹಣವನ್ನು ಬಳಸಬಾರದು ಎಂದರು.
ರಾಜ್ಯ ಸರ್ಕಾರ ವಿವಿಧ ಅಭಿವೃದ್ಧಿ ನಿಗಮಗಳ ಹಣ ಕಡಿತಗೊಳಿಸುವ ಮೂಲಕ ದಲಿತರ ಕಲ್ಯಾಣಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಗ್ಯಾರಂಟಿ ಹೆಸರಿನಲ್ಲಿ ಜನರನ್ನು ಯಾಮಾರಿಸುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ರಾಜ್ಯದ ಖಜಾನೆ ಖಾಲಿಯಾಗದೆ ಎಂದು ಕಿಡಿಕಾರಿದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಸಂದೀಪ್, ಮಾಜಿ ಶಾಸಕ ಎಂ.ನಾರಾಯಣಸ್ವಾಮಿ, ಜಿಪಂ ಮಾಜಿ ಸದಸ್ಯರಾದ ಎಸ್.ಬಿ ಮುನಿವೆಂಕಟಪ್ಪ, ಬಿ.ವಿ ಮಹೇಶ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಪ್ಪಿರಾಜು, ಮುಖಂಡರಾದ ವಾದಿರಾಜ್, ಹನುಮಂತಪ್ಪ, ಸುಂದರ್, ಕೆಂಬೋಡಿ ನಾರಾಯಣಸ್ವಾಮಿ, ತೇಜಸ್, ಬಾಲಾಜಿ, ತಿಮ್ಮರಾಯಪ್ಪ, ದಲಿತ ಸಂಘಟನೆಗಳ ಮುಖಂಡರಾದ ಹೂಹಳ್ಳಿ ಪ್ರಕಾಶ್, ವೆಂಕಟಾಚಲಪತಿ, ರಾಜಕುಮಾರ್, ಯುವಶಕ್ತಿ ಸುಬ್ಬು, ಮುಂತಾದವರು ಇದ್ದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…