ಪರಿಶಿಷ್ಟ ಜಾತಿಯ ಮುಖಂಡರನ್ನು ಗುರಿಯಾಗಿಸಿಕೊಂಡು ಇಡಿ, ಸಿಬಿಐ ದಾಳಿ ಮೂಲಕ ಬಿಜೆಪಿಯವರು ಕಿರುಕುಳ ಆರೋಪ: ಎಸ್‌ಸಿ ಎಸ್‌ಟಿ ಕಾಂಗ್ರೆಸ್ ಘಟಕ ಖಂಡನೆ

ಬಿಜೆಪಿ ಪಕ್ಷದವರು ಕಾಂಗ್ರೆಸ್ ಪಕ್ಷದಲ್ಲಿರುವ ಪರಿಶಿಷ್ಟ ಜಾತಿಯ ಮುಖಂಡರನ್ನು ಗುರಿಯಾಗಿಸಿಕೊಂಡು ಇಡಿ, ಸಿಬಿಐ ದಾಳಿ ಮೂಲಕ ಕಿರುಕುಳ ನೀಡುತ್ತಿರುವುದು ಖಂಡನೀಯ. ಇದನ್ನು ಎಸ್‌ಸಿ ಎಸ್‌ಟಿ ಕಾಂಗ್ರೆಸ್ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಕೆಪಿಸಿಸಿ ಸದಸ್ಯರಾದ ಜಿ.ಲಕ್ಷ್ಮೀಪತಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ದೊಡ್ಡಬಳ್ಳಾಪುರ ನಗರ, ಗ್ರಾಮಾಂತರ ಬ್ಲಾಕ್ ಮತ್ತು ಎಸ್‌ಸಿ ಎಸ್‌ಟಿ ಘಟಕದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇಡಿ, ಐಟಿ ಮುಂತಾದ ಸಾಂವಿಧಾನಿಕ ಸಂಸ್ಥೆಗಳನ್ನು ಬಳಸಿ ಪ್ರಭಾವಿ ದಲಿತ ನಾಯಕರ ಮನೆ ಮೇಲೆ ದಾಳಿ ಮಾಡಿಸಿ ಅವರನ್ನು ಕುಂದಿಸುವ ಕೆಲಸ ನಿರಂತವಾಗಿ ನಡೆಯುತ್ತಿದೆ. ಇದನ್ನು ಖಂಡಿಸಿ ರಾಜ್ಯದೆಲ್ಲಡೆ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದೆ. ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಬಿಜೆಪಿ ವಿರುದ್ಧ ತೀವ್ರವಾದ ಪ್ರತಿಭಟನೆಗಳನ್ನು ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಸಬಾ ಎಸ್‌ಸಿ ಎಸ್ಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆಂಪಣ್ಣ ಮಾತನಾಡಿ, ಛಲವಾದಿ ನಾರಾಯಣಸ್ವಾಮಿ ಅವರು ಪ್ರಿಯಾಂಕ್ ಖರ್ಗೆಯವರನ್ನು ನಾಯಿಗೆ ಹೋಲಿಸಿರುವುದು ಸರಿಯಲ್ಲ, ರಾಜಕಾರಣದಲ್ಲಿ ಯಾರೂ ಶಾಶ್ವತವಲ್ಲ, ಅವರ ಕುಟುಂಬದೊಂದಿಗೆ ಇದ್ದು, ಬೆಳೆದು ಇದೀಗ ಕೋಮುವಾದಿ ಬಿಜೆಪಿ ಪಕ್ಷಗದೊಂದಿಗೆ ಸೇರಿ ಅವರ ತಾಳಕ್ಕೆ ತಕ್ಕಂತೆ ಕುಣಿದು ನಾಯಿಗೆ ಹೋಲಿಕೆ ಮಾಡಿರುವುದು ಖಂಡನೀಯ, ಛಲವಾದಿ ನಾರಾಯಣಸ್ವಾಮಿ ಅವರು ಕೂಡಲೆ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು.

ನಗರ ಎಸ್‌ಸಿ ಘಟಕದ ಅಧ್ಯಕ್ಷರಾದ ಮುನಿರಾಜ್ ಅವರು ಮಾತನಾಡಿ ಬಿಜೆಪಿ ನಾಯಕರನ್ನು ಮೆಚ್ಚಿಸುವ ಒಂದೇ ಕಾರಣಕ್ಕೆ ಕಾಂಗ್ರೆಸ್ ಮುಖಂಡರಾದ ಪ್ರಿಯಾಂಕ್ ಖರ್ಗೆಯವರನ್ನು ಅವಾಚ್ಯ ಶಬ್ದಗಳಿಂದ ನಿಂದನೇ ಮಾಡಿರುವುದು ಖಂಡನೀಯ, ಕೂಡಲೇ ಛಲವಾದಿ ನಾರಾಯಣಸ್ವಾಮಿ ಕ್ಷಮೆ ಕೋರಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಿಮ್ಮ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿ ಮುಖಕ್ಕೆ ಮಸಿ ಬಳಿಯ ಬೇಕಾಗುತ್ತದೆ ಎಂದು ಆಕ್ರೋಶ ಹೊರಹಾಕಿದರು.

ಪರಿಶಿಷ್ಟ ಜನಾಂಗದ ರಾಜ್ಯ ಸಚಿವರಾದ ಪ್ರಿಯಾಂಕ್ ಖರ್ಗೆಯವರ ವಿರುದ್ಧ ಅದೇ ಸಮುದಾಯದವರಾದ ಛಲವಾದಿ ನಾರಾಯಣಸ್ವಾಮಿ ಆಕ್ಷೇಪಾರ್ಹ ಪದಬಳಕೆ ಮಾಡಿ ಬಿಜೆಪಿಯವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ಕುರುಬ ಸಂಘದ ರಾಜ್ಯ ಖಜಾಂಚಿ ಕಂಟನಕುಂಟೆ ಕೃಷ್ಣ ಮೂರ್ತಿ ಆರೋಪಿಸಿದರು.

ಇನ್ನು ರಾಜಕಾರಣದಲ್ಲಿ ಇದುವರೆಗೂ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೇ ಬೆಳೆದ ರಾಜಕಾರಣಿ ಗೃಹ ಸಚಿವ ಜಿ.ಪರಮೇಶ್ವರ್ ಅವರ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸುತ್ತಿರುವುದುನ್ನು ನಮ್ಮ ಪಕ್ಷ ಖಂಡಿಸುತ್ತದೆ. ಇದೇ ರೀತಿ ಮುಂದುವರೆದರೇ ಮುಂದಿನ ದಿನಗಳಲ್ಲಿ ಬಿಜೆಪಿಗೆ ಬುದ್ದಿ ಕಲಿಸುವ ಕೆಲಸ ಮಾಡಲಾಗುವುದು ಎಂದರು.

ನಗರಸಭಾ ಸದಸ್ಯರಾದ ಶಿವಣ್ಣ ಮಾತನಾಡಿ, ಪ್ರಿಕಾಂಕ್ ಖರ್ಗೆಯವರ ಏಳಿಗೆಯನ್ನು ಸಹಿಸದೇ ಛಲವಾದಿ ನಾರಾಯಣಸ್ವಾಮಿ ನಾಯಿಗೆ ಹೋಲಿಕೆ ಮಾಡಿರುವುದು ಸರಿಯಲ್ಲ. ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಸ್ಥಾನ ಪಡೆದುಕೊಂಡಿರಿವುದು ಪ್ರಿಯಾಂಕ್ ಖರ್ಗೆಯನ್ನ ಟಾರ್ಗೆಟ್ ಮಾಡಿ ಖಂಡಸೋಕೆ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ ಇದನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಭೈರೇಗೌಡ, ನಗರ ಬ್ಲಾಕ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ದಲಿತ ಮುಖಂಡ ಟಿ.ಮಂಜುನಾಥ್, ಶ್ರೀನಿವಾಸ್ ಮಂಜುನಾಥ್‌ ಉಪಸ್ಥಿತರಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

9 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

11 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

11 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

12 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

16 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

18 hours ago