ಪರಿಶಿಷ್ಟ ಜಾತಿಯ ಮುಖಂಡರನ್ನು ಗುರಿಯಾಗಿಸಿಕೊಂಡು ಇಡಿ, ಸಿಬಿಐ ದಾಳಿ ಮೂಲಕ ಬಿಜೆಪಿಯವರು ಕಿರುಕುಳ ಆರೋಪ: ಎಸ್‌ಸಿ ಎಸ್‌ಟಿ ಕಾಂಗ್ರೆಸ್ ಘಟಕ ಖಂಡನೆ

ಬಿಜೆಪಿ ಪಕ್ಷದವರು ಕಾಂಗ್ರೆಸ್ ಪಕ್ಷದಲ್ಲಿರುವ ಪರಿಶಿಷ್ಟ ಜಾತಿಯ ಮುಖಂಡರನ್ನು ಗುರಿಯಾಗಿಸಿಕೊಂಡು ಇಡಿ, ಸಿಬಿಐ ದಾಳಿ ಮೂಲಕ ಕಿರುಕುಳ ನೀಡುತ್ತಿರುವುದು ಖಂಡನೀಯ. ಇದನ್ನು ಎಸ್‌ಸಿ ಎಸ್‌ಟಿ ಕಾಂಗ್ರೆಸ್ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಕೆಪಿಸಿಸಿ ಸದಸ್ಯರಾದ ಜಿ.ಲಕ್ಷ್ಮೀಪತಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ದೊಡ್ಡಬಳ್ಳಾಪುರ ನಗರ, ಗ್ರಾಮಾಂತರ ಬ್ಲಾಕ್ ಮತ್ತು ಎಸ್‌ಸಿ ಎಸ್‌ಟಿ ಘಟಕದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇಡಿ, ಐಟಿ ಮುಂತಾದ ಸಾಂವಿಧಾನಿಕ ಸಂಸ್ಥೆಗಳನ್ನು ಬಳಸಿ ಪ್ರಭಾವಿ ದಲಿತ ನಾಯಕರ ಮನೆ ಮೇಲೆ ದಾಳಿ ಮಾಡಿಸಿ ಅವರನ್ನು ಕುಂದಿಸುವ ಕೆಲಸ ನಿರಂತವಾಗಿ ನಡೆಯುತ್ತಿದೆ. ಇದನ್ನು ಖಂಡಿಸಿ ರಾಜ್ಯದೆಲ್ಲಡೆ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದೆ. ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಬಿಜೆಪಿ ವಿರುದ್ಧ ತೀವ್ರವಾದ ಪ್ರತಿಭಟನೆಗಳನ್ನು ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಸಬಾ ಎಸ್‌ಸಿ ಎಸ್ಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆಂಪಣ್ಣ ಮಾತನಾಡಿ, ಛಲವಾದಿ ನಾರಾಯಣಸ್ವಾಮಿ ಅವರು ಪ್ರಿಯಾಂಕ್ ಖರ್ಗೆಯವರನ್ನು ನಾಯಿಗೆ ಹೋಲಿಸಿರುವುದು ಸರಿಯಲ್ಲ, ರಾಜಕಾರಣದಲ್ಲಿ ಯಾರೂ ಶಾಶ್ವತವಲ್ಲ, ಅವರ ಕುಟುಂಬದೊಂದಿಗೆ ಇದ್ದು, ಬೆಳೆದು ಇದೀಗ ಕೋಮುವಾದಿ ಬಿಜೆಪಿ ಪಕ್ಷಗದೊಂದಿಗೆ ಸೇರಿ ಅವರ ತಾಳಕ್ಕೆ ತಕ್ಕಂತೆ ಕುಣಿದು ನಾಯಿಗೆ ಹೋಲಿಕೆ ಮಾಡಿರುವುದು ಖಂಡನೀಯ, ಛಲವಾದಿ ನಾರಾಯಣಸ್ವಾಮಿ ಅವರು ಕೂಡಲೆ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು.

ನಗರ ಎಸ್‌ಸಿ ಘಟಕದ ಅಧ್ಯಕ್ಷರಾದ ಮುನಿರಾಜ್ ಅವರು ಮಾತನಾಡಿ ಬಿಜೆಪಿ ನಾಯಕರನ್ನು ಮೆಚ್ಚಿಸುವ ಒಂದೇ ಕಾರಣಕ್ಕೆ ಕಾಂಗ್ರೆಸ್ ಮುಖಂಡರಾದ ಪ್ರಿಯಾಂಕ್ ಖರ್ಗೆಯವರನ್ನು ಅವಾಚ್ಯ ಶಬ್ದಗಳಿಂದ ನಿಂದನೇ ಮಾಡಿರುವುದು ಖಂಡನೀಯ, ಕೂಡಲೇ ಛಲವಾದಿ ನಾರಾಯಣಸ್ವಾಮಿ ಕ್ಷಮೆ ಕೋರಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಿಮ್ಮ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿ ಮುಖಕ್ಕೆ ಮಸಿ ಬಳಿಯ ಬೇಕಾಗುತ್ತದೆ ಎಂದು ಆಕ್ರೋಶ ಹೊರಹಾಕಿದರು.

ಪರಿಶಿಷ್ಟ ಜನಾಂಗದ ರಾಜ್ಯ ಸಚಿವರಾದ ಪ್ರಿಯಾಂಕ್ ಖರ್ಗೆಯವರ ವಿರುದ್ಧ ಅದೇ ಸಮುದಾಯದವರಾದ ಛಲವಾದಿ ನಾರಾಯಣಸ್ವಾಮಿ ಆಕ್ಷೇಪಾರ್ಹ ಪದಬಳಕೆ ಮಾಡಿ ಬಿಜೆಪಿಯವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ಕುರುಬ ಸಂಘದ ರಾಜ್ಯ ಖಜಾಂಚಿ ಕಂಟನಕುಂಟೆ ಕೃಷ್ಣ ಮೂರ್ತಿ ಆರೋಪಿಸಿದರು.

ಇನ್ನು ರಾಜಕಾರಣದಲ್ಲಿ ಇದುವರೆಗೂ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೇ ಬೆಳೆದ ರಾಜಕಾರಣಿ ಗೃಹ ಸಚಿವ ಜಿ.ಪರಮೇಶ್ವರ್ ಅವರ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸುತ್ತಿರುವುದುನ್ನು ನಮ್ಮ ಪಕ್ಷ ಖಂಡಿಸುತ್ತದೆ. ಇದೇ ರೀತಿ ಮುಂದುವರೆದರೇ ಮುಂದಿನ ದಿನಗಳಲ್ಲಿ ಬಿಜೆಪಿಗೆ ಬುದ್ದಿ ಕಲಿಸುವ ಕೆಲಸ ಮಾಡಲಾಗುವುದು ಎಂದರು.

ನಗರಸಭಾ ಸದಸ್ಯರಾದ ಶಿವಣ್ಣ ಮಾತನಾಡಿ, ಪ್ರಿಕಾಂಕ್ ಖರ್ಗೆಯವರ ಏಳಿಗೆಯನ್ನು ಸಹಿಸದೇ ಛಲವಾದಿ ನಾರಾಯಣಸ್ವಾಮಿ ನಾಯಿಗೆ ಹೋಲಿಕೆ ಮಾಡಿರುವುದು ಸರಿಯಲ್ಲ. ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಸ್ಥಾನ ಪಡೆದುಕೊಂಡಿರಿವುದು ಪ್ರಿಯಾಂಕ್ ಖರ್ಗೆಯನ್ನ ಟಾರ್ಗೆಟ್ ಮಾಡಿ ಖಂಡಸೋಕೆ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ ಇದನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಭೈರೇಗೌಡ, ನಗರ ಬ್ಲಾಕ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ದಲಿತ ಮುಖಂಡ ಟಿ.ಮಂಜುನಾಥ್, ಶ್ರೀನಿವಾಸ್ ಮಂಜುನಾಥ್‌ ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

14 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

24 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago