ಪರಿಶಿಷ್ಟ ಜಾತಿ ಒಳಮೀಸಲಾತಿಯ ಮಧ್ಯಂತರ ವರದಿ: ಸಚಿವ ಸಂಪುಟ ಅಂಗೀಕಾರ

ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಅಂಗೀಕರಿಸಿದೆ.

ಈ ಆಯೋಗವು ನಾಲ್ಕು ಪ್ರಮುಖ ಶಿಫಾರಸ್ಸುಗಳನ್ನು ಮಾಡಿದೆ. ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕು. ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿವಸಗಳೊಳಗೆ ಹೊಸ ಸಮೀಕ್ಷೆಯನ್ನು ನಡೆಸಬಹುದೆಂದು ತಜ್ಞರು ಅಭಿಪ್ರಾಯ ಪಡುತ್ತಾರೆ. ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿಯನ್ನು ಸಿದ್ಧಪಡಿಸಬೇಕು. ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು, ಸಮೀಕ್ಷೆಗೆ ಅಗತ್ಯವಿರುವ ತರಬೇತಿ, ಸಂಪನ್ಮೂಲ ಕ್ರೋಢೀಕರಣಗಳ ಉಸ್ತುವಾರಿಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದು ಸೂಕ್ತವೆಂದು ಆಯೋಗವು ಅಭಿಪ್ರಾಯಪಟ್ಟಿದೆ. ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ಈ ವರದಿಯಲ್ಲಿ ತಿಳಿಯಪಡಿಸಿರುವ ಮಾನದಂಡಗಳಂತೆ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವರ್ಗೀಕರಣಗೊಳಿಸಿ ಲಭ್ಯವಿರುವ ಮೀಸಲಾತಿ ಪ್ರಮಾಣವನ್ನು ಆದ್ಯತೆ ಮೇಲೆ ಹಂಚಿಕೆ ಮಾಡಬೇಕು ಎಂದು ಸಮಿತಿ ಶಿಫಾರಸ್ಸು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾಗಮೋಹನ್ ದಾಸ್ ಆಯೋಗದವರ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಇಂದು ಅಂಗೀಕರಿಸಿದೆ. ಒಳಮೀಸಲಾತಿ ವರ್ಗೀಕರಣವನ್ನು ಶೀಘ್ರಗತಿಯಲ್ಲಿ ಕೈಗೊಳ್ಳುವ ಸಂಬಂಧ, ಹೊಸ ಸಮೀಕ್ಷೆ ನಡೆಸುವ ಕಾರ್ಯವನ್ನು ನಾಗಮೋಹನ್ ದಾಸ್ ಸಮಿತಿಗೆ ವಹಿಸಲು ಸಚಿವ ಸಂಪುಟ ನಿರ್ಣಯಿಸಿದೆ. ಸಮೀಕ್ಷಾ ಕಾರ್ಯವನ್ನು 60 ದಿನದೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಅನುಕೂಲವಾಗುವಂತೆ ಸಮಿತಿಯ ಅವಧಿಯನ್ನು ಎರಡು ತಿಂಗಳವೆರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

10 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

12 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

13 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago