ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಅಂಗೀಕರಿಸಿದೆ.
ಈ ಆಯೋಗವು ನಾಲ್ಕು ಪ್ರಮುಖ ಶಿಫಾರಸ್ಸುಗಳನ್ನು ಮಾಡಿದೆ. ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕು. ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿವಸಗಳೊಳಗೆ ಹೊಸ ಸಮೀಕ್ಷೆಯನ್ನು ನಡೆಸಬಹುದೆಂದು ತಜ್ಞರು ಅಭಿಪ್ರಾಯ ಪಡುತ್ತಾರೆ. ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿಯನ್ನು ಸಿದ್ಧಪಡಿಸಬೇಕು. ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು, ಸಮೀಕ್ಷೆಗೆ ಅಗತ್ಯವಿರುವ ತರಬೇತಿ, ಸಂಪನ್ಮೂಲ ಕ್ರೋಢೀಕರಣಗಳ ಉಸ್ತುವಾರಿಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದು ಸೂಕ್ತವೆಂದು ಆಯೋಗವು ಅಭಿಪ್ರಾಯಪಟ್ಟಿದೆ. ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ಈ ವರದಿಯಲ್ಲಿ ತಿಳಿಯಪಡಿಸಿರುವ ಮಾನದಂಡಗಳಂತೆ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವರ್ಗೀಕರಣಗೊಳಿಸಿ ಲಭ್ಯವಿರುವ ಮೀಸಲಾತಿ ಪ್ರಮಾಣವನ್ನು ಆದ್ಯತೆ ಮೇಲೆ ಹಂಚಿಕೆ ಮಾಡಬೇಕು ಎಂದು ಸಮಿತಿ ಶಿಫಾರಸ್ಸು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಾಗಮೋಹನ್ ದಾಸ್ ಆಯೋಗದವರ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಇಂದು ಅಂಗೀಕರಿಸಿದೆ. ಒಳಮೀಸಲಾತಿ ವರ್ಗೀಕರಣವನ್ನು ಶೀಘ್ರಗತಿಯಲ್ಲಿ ಕೈಗೊಳ್ಳುವ ಸಂಬಂಧ, ಹೊಸ ಸಮೀಕ್ಷೆ ನಡೆಸುವ ಕಾರ್ಯವನ್ನು ನಾಗಮೋಹನ್ ದಾಸ್ ಸಮಿತಿಗೆ ವಹಿಸಲು ಸಚಿವ ಸಂಪುಟ ನಿರ್ಣಯಿಸಿದೆ. ಸಮೀಕ್ಷಾ ಕಾರ್ಯವನ್ನು 60 ದಿನದೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಅನುಕೂಲವಾಗುವಂತೆ ಸಮಿತಿಯ ಅವಧಿಯನ್ನು ಎರಡು ತಿಂಗಳವೆರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…