ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಅಂಗೀಕರಿಸಿದೆ.
ಈ ಆಯೋಗವು ನಾಲ್ಕು ಪ್ರಮುಖ ಶಿಫಾರಸ್ಸುಗಳನ್ನು ಮಾಡಿದೆ. ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕು. ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿವಸಗಳೊಳಗೆ ಹೊಸ ಸಮೀಕ್ಷೆಯನ್ನು ನಡೆಸಬಹುದೆಂದು ತಜ್ಞರು ಅಭಿಪ್ರಾಯ ಪಡುತ್ತಾರೆ. ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿಯನ್ನು ಸಿದ್ಧಪಡಿಸಬೇಕು. ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು, ಸಮೀಕ್ಷೆಗೆ ಅಗತ್ಯವಿರುವ ತರಬೇತಿ, ಸಂಪನ್ಮೂಲ ಕ್ರೋಢೀಕರಣಗಳ ಉಸ್ತುವಾರಿಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದು ಸೂಕ್ತವೆಂದು ಆಯೋಗವು ಅಭಿಪ್ರಾಯಪಟ್ಟಿದೆ. ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ಈ ವರದಿಯಲ್ಲಿ ತಿಳಿಯಪಡಿಸಿರುವ ಮಾನದಂಡಗಳಂತೆ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವರ್ಗೀಕರಣಗೊಳಿಸಿ ಲಭ್ಯವಿರುವ ಮೀಸಲಾತಿ ಪ್ರಮಾಣವನ್ನು ಆದ್ಯತೆ ಮೇಲೆ ಹಂಚಿಕೆ ಮಾಡಬೇಕು ಎಂದು ಸಮಿತಿ ಶಿಫಾರಸ್ಸು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಾಗಮೋಹನ್ ದಾಸ್ ಆಯೋಗದವರ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಇಂದು ಅಂಗೀಕರಿಸಿದೆ. ಒಳಮೀಸಲಾತಿ ವರ್ಗೀಕರಣವನ್ನು ಶೀಘ್ರಗತಿಯಲ್ಲಿ ಕೈಗೊಳ್ಳುವ ಸಂಬಂಧ, ಹೊಸ ಸಮೀಕ್ಷೆ ನಡೆಸುವ ಕಾರ್ಯವನ್ನು ನಾಗಮೋಹನ್ ದಾಸ್ ಸಮಿತಿಗೆ ವಹಿಸಲು ಸಚಿವ ಸಂಪುಟ ನಿರ್ಣಯಿಸಿದೆ. ಸಮೀಕ್ಷಾ ಕಾರ್ಯವನ್ನು 60 ದಿನದೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಅನುಕೂಲವಾಗುವಂತೆ ಸಮಿತಿಯ ಅವಧಿಯನ್ನು ಎರಡು ತಿಂಗಳವೆರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…