ಪರಿಶಿಷ್ಟ ಜಾತಿ/ಪಂಗಡಗಳ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ….

ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ/ಪಂಗಡಗಳ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಮುಖ್ಯಾಂಶಗಳು:

• ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು.
“ಪೊಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ 56 ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು.

• ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10ರಷ್ಟಿದ್ದು, ಇದು ಹೆಚ್ಚಾಗಬೇಕು. ಆರೋಪಿಗಳ ಜೊತೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

• ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು.

• ದೌರ್ಜ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು.

• 2023ರಿಂದ ಕಳೆದ ಮೂರು ವರ್ಷಗಳಲ್ಲಿ ಒಟ್ಟು 6,635 ಪ್ರಕರಣಗಳು ದಾಖಲಾಗಿವೆ. 4912 ಪ್ರಕರಣಗಳಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದೆ. 60 ದಿನಗಳ ಒಳಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿರುವುದು 4,149 ಪ್ರಕರಣಗಳಲ್ಲಿ ಮಾತ್ರ. ನೋಂದಣಿಯಾದ ಒಟ್ಟು ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ 63% ಪ್ರಕರಣಗಳಲ್ಲಿ ಮಾತ್ರ ದೋಷಾರೋಪಣೆ ಪಟ್ಟಿ ಸಲ್ಲಿಕೆ ಯಾಗಿರುತ್ತದೆ. ಶಿಕ್ಷೆಯಾದ ಪ್ರಕರಣಗಳು ಕೇವಲ 36. ತನಿಖಾ ಹಂತದಲ್ಲಿ ಸುಮಾರು 679 ಪ್ರಕರಣಗಳಿವೆ.

• ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು.

• ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ನ್ಯಾಯಾಲಯಗಳಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳ ಕುರಿತು ತೀರ್ಪು ಬಂದರೂ, ತೀರ್ಪು ಜಾರಿಗೆ ಯಾಕೆ ಬಾಕಿ ಇದೆ. ಪ್ರಸ್ತುತ ಸುಳ್ಳು ಜಾತಿ ಪ್ರಮಾಣ ಪತ್ರ ಸಾಬೀತಾಗಿರುವ 170 ಪ್ರಕರಣಗಳಲ್ಲಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆದಿರುವುದು ಸಾಬೀತಾದರೆ ಅದನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಿದ್ದು, ಸಮಗ್ರ ವರದಿಯನ್ನು ಸಲ್ಲಿಸಬೇಕು.

• ರಾಜ್ಯದಲ್ಲಿ 33 ಡಿಸಿಆರ್‌ಇ ಪೊಲೀಸ್‌ ಠಾಣೆಗಳನ್ನು ತೆರೆಯಲಾಗಿದ್ದು, ಇಲ್ಲಿ ಸಿಬ್ಬಂದಿ ಕೊರತೆಯಿದ್ದರೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು.

• ದೌರ್ಜನ್ಯ ಪ್ರಕರಣಗಳಲ್ಲಿ ಪ್ರತಿ ದೂರು ದಾಖಲಿಸುವ ಪ್ರವೃತ್ತಿ ಹೆಚ್ಚುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಪ್ರಕರಣಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ದೂರಿನಲ್ಲಿ ಸತ್ಯಾಂಶವಿದ್ದರೆ ಮಾತ್ರ ಎಫ್‌ಐಆರ್‌ ದಾಖಲಿಸಬೇಕು.

• ರಾಜ್ಯಾದ್ಯಂತ ದೇವದಾಸಿಯರ ಸಮೀಕ್ಷೆ ಕಾರ್ಯವನ್ನು ಈಗಾಗಲೇ ಆರಂಭಿಸಲಾಗಿದ್ದು, ಸಮೀಕ್ಷೆ ಪೂರ್ಣಗೊಂಡ ಬಳಿಕ ದೇವದಾಸಿಯರ ಪುನರ್ವಸತಿಗೆ ಹಾಗೂ ಈ ಪಿಡುಗನ್ನು ಸಂಪೂರ್ಣವಾಗಿ ತೊಲಗಿಸಲು ಯೋಜನೆ ಜಾರಿಗೊಳಿಸಲಾಗುವುದು. ವಿಶೇಷ ಅನುದಾನ ನೀಡುವ ಬಗ್ಗೆಯೂ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

• ಬಾಕಿಯಿರುವ ಬ್ಯಾಕ್‌ಲಾಗ್‌ ಹುದ್ದೆಗಳ ನೇಮಕಾತಿ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಬ್ಯಾಕ್‌ಲಾಗ್‌ ಹುದ್ದೆ ಭರ್ತಿ ವಿಷಯದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ. ಸರ್ಕಾರ ದಲಿತರ ಪರವಾಗಿದ್ದು, ದಲಿತರಿಗೆ ಸೂಕ್ತ ನ್ಯಾಯ ಒದಗಿಸಲು ಅಡ್ಡಗಾಲು ಹಾಕುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

17 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago