ಪರಿಶಿಷ್ಟ ಜಾತಿ/ಪಂಗಡಗಳ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ….

ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ/ಪಂಗಡಗಳ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಮುಖ್ಯಾಂಶಗಳು:

• ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು.
“ಪೊಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ 56 ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು.

• ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10ರಷ್ಟಿದ್ದು, ಇದು ಹೆಚ್ಚಾಗಬೇಕು. ಆರೋಪಿಗಳ ಜೊತೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

• ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು.

• ದೌರ್ಜ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು.

• 2023ರಿಂದ ಕಳೆದ ಮೂರು ವರ್ಷಗಳಲ್ಲಿ ಒಟ್ಟು 6,635 ಪ್ರಕರಣಗಳು ದಾಖಲಾಗಿವೆ. 4912 ಪ್ರಕರಣಗಳಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದೆ. 60 ದಿನಗಳ ಒಳಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿರುವುದು 4,149 ಪ್ರಕರಣಗಳಲ್ಲಿ ಮಾತ್ರ. ನೋಂದಣಿಯಾದ ಒಟ್ಟು ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ 63% ಪ್ರಕರಣಗಳಲ್ಲಿ ಮಾತ್ರ ದೋಷಾರೋಪಣೆ ಪಟ್ಟಿ ಸಲ್ಲಿಕೆ ಯಾಗಿರುತ್ತದೆ. ಶಿಕ್ಷೆಯಾದ ಪ್ರಕರಣಗಳು ಕೇವಲ 36. ತನಿಖಾ ಹಂತದಲ್ಲಿ ಸುಮಾರು 679 ಪ್ರಕರಣಗಳಿವೆ.

• ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು.

• ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ನ್ಯಾಯಾಲಯಗಳಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳ ಕುರಿತು ತೀರ್ಪು ಬಂದರೂ, ತೀರ್ಪು ಜಾರಿಗೆ ಯಾಕೆ ಬಾಕಿ ಇದೆ. ಪ್ರಸ್ತುತ ಸುಳ್ಳು ಜಾತಿ ಪ್ರಮಾಣ ಪತ್ರ ಸಾಬೀತಾಗಿರುವ 170 ಪ್ರಕರಣಗಳಲ್ಲಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆದಿರುವುದು ಸಾಬೀತಾದರೆ ಅದನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಿದ್ದು, ಸಮಗ್ರ ವರದಿಯನ್ನು ಸಲ್ಲಿಸಬೇಕು.

• ರಾಜ್ಯದಲ್ಲಿ 33 ಡಿಸಿಆರ್‌ಇ ಪೊಲೀಸ್‌ ಠಾಣೆಗಳನ್ನು ತೆರೆಯಲಾಗಿದ್ದು, ಇಲ್ಲಿ ಸಿಬ್ಬಂದಿ ಕೊರತೆಯಿದ್ದರೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು.

• ದೌರ್ಜನ್ಯ ಪ್ರಕರಣಗಳಲ್ಲಿ ಪ್ರತಿ ದೂರು ದಾಖಲಿಸುವ ಪ್ರವೃತ್ತಿ ಹೆಚ್ಚುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಪ್ರಕರಣಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ದೂರಿನಲ್ಲಿ ಸತ್ಯಾಂಶವಿದ್ದರೆ ಮಾತ್ರ ಎಫ್‌ಐಆರ್‌ ದಾಖಲಿಸಬೇಕು.

• ರಾಜ್ಯಾದ್ಯಂತ ದೇವದಾಸಿಯರ ಸಮೀಕ್ಷೆ ಕಾರ್ಯವನ್ನು ಈಗಾಗಲೇ ಆರಂಭಿಸಲಾಗಿದ್ದು, ಸಮೀಕ್ಷೆ ಪೂರ್ಣಗೊಂಡ ಬಳಿಕ ದೇವದಾಸಿಯರ ಪುನರ್ವಸತಿಗೆ ಹಾಗೂ ಈ ಪಿಡುಗನ್ನು ಸಂಪೂರ್ಣವಾಗಿ ತೊಲಗಿಸಲು ಯೋಜನೆ ಜಾರಿಗೊಳಿಸಲಾಗುವುದು. ವಿಶೇಷ ಅನುದಾನ ನೀಡುವ ಬಗ್ಗೆಯೂ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

• ಬಾಕಿಯಿರುವ ಬ್ಯಾಕ್‌ಲಾಗ್‌ ಹುದ್ದೆಗಳ ನೇಮಕಾತಿ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಬ್ಯಾಕ್‌ಲಾಗ್‌ ಹುದ್ದೆ ಭರ್ತಿ ವಿಷಯದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ. ಸರ್ಕಾರ ದಲಿತರ ಪರವಾಗಿದ್ದು, ದಲಿತರಿಗೆ ಸೂಕ್ತ ನ್ಯಾಯ ಒದಗಿಸಲು ಅಡ್ಡಗಾಲು ಹಾಕುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

5 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago