ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ (ಸಿಡಾಕ್)ಧಾರವಾಡ, ಕೌಶಲ್ಯಾಭಿವೃಧ್ದಿ, ಉದ್ಯಮಶೀಲತೆ ಮತ್ತು ಜೀವನೊಪಾಯ ಇಲಾಖೆ ಬೆಂಗಳೂರು ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗ ಯುವಕ ಯುವತಿಯರಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಡಿಸೆಂಬರ್ 18 ರಿಂದ ಡಿಸೆಂಬರ್ 30 ರವರೆಗೆ ಹಮ್ಮಿಕೊಳ್ಳಲಾಗುತ್ತಿದೆ.
ಈ ಕಾರ್ಯಕ್ರಮದಲ್ಲಿ ಭಾವಿ ಉದ್ಯಮಶೀಲರಿಗೆ ಸಣ್ಣ ಉದ್ದಿಮೆಯನ್ನು ಸ್ಥಾಪಿಸುವ ಬಗ್ಗೆ ಯೋಜನಾ ವರದಿ ತಯಾರಿಕೆಗೆ ಸರ್ಕಾರದ ಸವಲತ್ತುಗಳು, ರಿಯಾಯಿತಿಗಳು, ಸಹಾಯಧನ, ಲೆಕ್ಕ ಪತ್ರ ನಿರ್ವಹಣೆ ಹಾಗೂ ಸ್ವಯಂ ಉದ್ಯೊಗಕ್ಕೆ ಸಂಬಂಧ ಪಟ್ಟ ಹಾಗೂ PMEGP ಯೋಜನೆ ಬಗ್ಗೆ ಉಚಿತವಾಗಿ ಮಾರ್ಗದರ್ಶನ ಜೊತೆಗೆ ಪ್ರಮಾಣ ಪತ್ರ ನೀಡಲಾಗುವುದು.
ಫಲಾನುಭವಿಗಳ ಅನುಕೂಲತೆಗಳು :- ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಅರಿವು, ಉದ್ಯಮಶೀಲತೆ, ಬ್ಯಾಂಕಿಂಗ್, ಹಣಕಾಸು ನಿರ್ವಹಣೆ, ವ್ಯಾಪರ ಬಗ್ಗೆ ಮಾಹಿತಿ (ಅನುಭವವುಳ್ಳ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ) ಯೋಜನಾ ವರದಿ ತಯಾರಿಕೆ, PMEGP ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ, MSME UDYAM certificate registration, FSSAI certificate registration, ಮಾರುಕಟ್ಟೆಯ ಬಗ್ಗೆ ಮಾಹಿತಿ, ಸರ್ಕಾರದ ಪ್ರಮಾಣ ಪತ್ರ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ (ಸಿಡಾಕ್) ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳ ಕಚೇರಿ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ದೇವನಹಳ್ಳಿ – ದೊಡ್ಡಬಳ್ಳಾಪುರ ಮುಖ್ಯರಸ್ತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಮೊಬೈಲ್ ಸಂಖ್ಯೆ 8861738168 ಅನ್ನು ಸಂಪರ್ಕಿಸಬಹುದು ಎಂದು ಸಿಡಾಕ್ ಸಂಸ್ಥೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…