ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗ ಯುವಕ ಯುವತಿಯರಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ

ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ (ಸಿಡಾಕ್)ಧಾರವಾಡ, ಕೌಶಲ್ಯಾಭಿವೃಧ್ದಿ, ಉದ್ಯಮಶೀಲತೆ ಮತ್ತು ಜೀವನೊಪಾಯ ಇಲಾಖೆ ಬೆಂಗಳೂರು ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗ ಯುವಕ ಯುವತಿಯರಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಡಿಸೆಂಬರ್ 18 ರಿಂದ ಡಿಸೆಂಬರ್ 30 ರವರೆಗೆ ಹಮ್ಮಿಕೊಳ್ಳಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಭಾವಿ ಉದ್ಯಮಶೀಲರಿಗೆ ಸಣ್ಣ ಉದ್ದಿಮೆಯನ್ನು ಸ್ಥಾಪಿಸುವ ಬಗ್ಗೆ ಯೋಜನಾ ವರದಿ ತಯಾರಿಕೆಗೆ ಸರ್ಕಾರದ ಸವಲತ್ತುಗಳು, ರಿಯಾಯಿತಿಗಳು, ಸಹಾಯಧನ, ಲೆಕ್ಕ ಪತ್ರ ನಿರ್ವಹಣೆ ಹಾಗೂ ಸ್ವಯಂ ಉದ್ಯೊಗಕ್ಕೆ ಸಂಬಂಧ ಪಟ್ಟ ಹಾಗೂ PMEGP ಯೋಜನೆ ಬಗ್ಗೆ ಉಚಿತವಾಗಿ ಮಾರ್ಗದರ್ಶನ ಜೊತೆಗೆ ಪ್ರಮಾಣ ಪತ್ರ ನೀಡಲಾಗುವುದು.

ಫಲಾನುಭವಿಗಳ ಅನುಕೂಲತೆಗಳು :- ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಅರಿವು, ಉದ್ಯಮಶೀಲತೆ, ಬ್ಯಾಂಕಿಂಗ್, ಹಣಕಾಸು ನಿರ್ವಹಣೆ, ವ್ಯಾಪರ ಬಗ್ಗೆ ಮಾಹಿತಿ (ಅನುಭವವುಳ್ಳ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ) ಯೋಜನಾ ವರದಿ ತಯಾರಿಕೆ, PMEGP  ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ, MSME UDYAM certificate registration, FSSAI certificate registration, ಮಾರುಕಟ್ಟೆಯ ಬಗ್ಗೆ ಮಾಹಿತಿ, ಸರ್ಕಾರದ ಪ್ರಮಾಣ ಪತ್ರ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ (ಸಿಡಾಕ್) ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳ ಕಚೇರಿ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ದೇವನಹಳ್ಳಿ – ದೊಡ್ಡಬಳ್ಳಾಪುರ ಮುಖ್ಯರಸ್ತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಮೊಬೈಲ್ ಸಂಖ್ಯೆ 8861738168 ಅನ್ನು ಸಂಪರ್ಕಿಸಬಹುದು ಎಂದು ಸಿಡಾಕ್ ಸಂಸ್ಥೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

19 minutes ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

11 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

12 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

12 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

15 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

18 hours ago