ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಾಲ್ಮೀಕಿ ಜಯಂತಿಯ ಅಂಗವಾಗಿ ಇಂದು ವಿಧಾನಸೌಧದ  ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ  ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

ನಮ್ಮ ಹಿಂದಿನ ಸರ್ಕಾರದ ಅವಧಿಯಲ್ಲಿ  ಬೆಳಗಾವಿಯ ಅಧಿವೇಶನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡುವ ತೀರ್ಮಾನವನ್ನು ಕೈಗೊಳ್ಳಲಾಯಿತು. ಆದಕಾರಣ ಎಸ್ ಸಿ ಎಸ್ ಪಿ ಹಾಗೂ ಟಿಎಸ್ ಪಿ ಯೋಜನೆಯಡಿ ಹೆಚ್ಚು ಅನುದಾನ ಖರ್ಚು ಮಾಡಲು ಸಾಧ್ಯವಾಯಿತು. ಮೊದಲು ಈ ಯೋಜನೆಗಳಡಿ ಕೇವಲ 6 ಸಾವಿರ ಅನುದಾನ ಮೀಸಲಿಡಲಾಗುತ್ತಿತ್ತು. ಆದರೆ ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಈ ಮೊತ್ತವನ್ನು 6 ಸಾವಿರದಿಂದ 30 ಸಾವಿರಕ್ಕೆ ಹೆಚ್ಚಿಗೆ ಮಾಡಲಾಯಿತು. ಹಿಂದಿನ ಸರ್ಕಾರದವರು ಈ ಮೊತ್ತವನ್ನು ಹೆಚ್ಚಿಸಲಿಲ್ಲ. ನಮ್ಮ ಸರ್ಕಾರ ಈ ವರ್ಷದ ಆಯವ್ಯಯದಲ್ಲಿ ಈ ವರ್ಗಗಳಿಗೆ 34 ಸಾವಿರ ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.

ಎಸ್ ಸಿ, ಎಸ್ ಟಿ ಜನರಿಗೆ ಅನುದಾನ ರಾಜ್ಯಾಂಗಬದ್ಧ 

ರಾಜ್ಯದ ಒಟ್ಟು ಜನಸಂಖ್ಯೆಯ ಶೇ.17.1ರಷ್ಟು ಎಸ್ ಸಿ ಹಾಗೂ ಶೇ.7 ರಷ್ಟು ಎಸ್ ಟಿ ವರ್ಗಕ್ಕೆ ಸೇರಿದವರಿದ್ದಾರೆ. 2011ರ ಜನಗಣತಿ ಪ್ರಕಾರ, ಶೇ.24.1 ರಷ್ಟು ಎಸ್ ಸಿ ಹಾಗೂ ಎಸ್ ಟಿ ವರ್ಗದ ಜನಸಂಖ್ಯೆಯಿದೆ. ಈ ಜನಸಂಖ್ಯೆಗನುಗುಣವಾಗಿ ಎಸ್ ಸಿ ಎಸ್ ಟಿ ವರ್ಗಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ಅನುದಾನ ಮೀಸಲಿಡುವ ಬಗ್ಗೆ ಕಾನೂನು ತಂದ ಮೊದಲ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೆ ರಾಜ್ಯ ಪಾತ್ರವಾಗಿದೆ. ಯಾವುದೇ ಸರ್ಕಾರಗಳು ಬಂದರೂ ಈ ಕಾನೂನನ್ನು ಯಾರು ಬದಲಾಯಿಸಲು ಸಾಧ್ಯವಿಲ್ಲ. ಈ ಕಾನೂನು ನಂತರ 2013 ರಿಂದ 2018ರವರೆಗೆ ನಮ್ಮ ಸರ್ಕಾರ ಒಟ್ಟು 88 ಸಾವಿರ ಕೋಟಿ ರೂ.ಗಳನ್ನು ಎಸ್ ಸಿ ಎಸ್ಟಿ ಜನರಿಗೆ ಮೀಸಲಿಡಲಾಗಿತ್ತು.  ಈ ಪ್ರಮಾಣದ ಜನಸಂಖ್ಯೆಗೆ ಈ ಅನುದಾನ ರಾಜ್ಯಾಂಗಬದ್ಧವಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಶಸ್ತಿ ವಿಜೇತರ ಸಾಧನೆಗಳು ಸ್ಫೂರ್ತಿಯಾಗಲಿ

ನಾಡಿನ ಸಮಸ್ತ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದ ಶುಭಾಶಯಗಳನ್ನು ಮುಖ್ಯಮಂತ್ರಿಯವರು ಕೋರಿದರು. ಈ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 8 ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದ್ದು, ಕನ್ನಡ ನಾಡಿನ ಜನತೆಯ ಪರವಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.ಪ್ರಶಸ್ತಿ ಪುರಸ್ಕೃತರ ಸಾಧನೆಗಳು ಎಲ್ಲರಿಗೂ ದಾರಿದೀಪವಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ರಾಜನಹಳ್ಳಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸಂನಾನಂದಪುರಿ ಸ್ವಾಮೀಜಿ , ಸಚಿವರಾದ ಡಾ: ಹೆಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಬಿ.ನಾಗೇಂದ್ರ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ಆಂಜನೇಯ, ಮಾಜೋ ಸಂಸದ ಉಗ್ರಪ್ಪ ಹಾಗೂ ವಾಲ್ಮೀಕಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago