ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಾಲ್ಮೀಕಿ ಜಯಂತಿಯ ಅಂಗವಾಗಿ ಇಂದು ವಿಧಾನಸೌಧದ  ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ  ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

ನಮ್ಮ ಹಿಂದಿನ ಸರ್ಕಾರದ ಅವಧಿಯಲ್ಲಿ  ಬೆಳಗಾವಿಯ ಅಧಿವೇಶನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡುವ ತೀರ್ಮಾನವನ್ನು ಕೈಗೊಳ್ಳಲಾಯಿತು. ಆದಕಾರಣ ಎಸ್ ಸಿ ಎಸ್ ಪಿ ಹಾಗೂ ಟಿಎಸ್ ಪಿ ಯೋಜನೆಯಡಿ ಹೆಚ್ಚು ಅನುದಾನ ಖರ್ಚು ಮಾಡಲು ಸಾಧ್ಯವಾಯಿತು. ಮೊದಲು ಈ ಯೋಜನೆಗಳಡಿ ಕೇವಲ 6 ಸಾವಿರ ಅನುದಾನ ಮೀಸಲಿಡಲಾಗುತ್ತಿತ್ತು. ಆದರೆ ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಈ ಮೊತ್ತವನ್ನು 6 ಸಾವಿರದಿಂದ 30 ಸಾವಿರಕ್ಕೆ ಹೆಚ್ಚಿಗೆ ಮಾಡಲಾಯಿತು. ಹಿಂದಿನ ಸರ್ಕಾರದವರು ಈ ಮೊತ್ತವನ್ನು ಹೆಚ್ಚಿಸಲಿಲ್ಲ. ನಮ್ಮ ಸರ್ಕಾರ ಈ ವರ್ಷದ ಆಯವ್ಯಯದಲ್ಲಿ ಈ ವರ್ಗಗಳಿಗೆ 34 ಸಾವಿರ ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.

ಎಸ್ ಸಿ, ಎಸ್ ಟಿ ಜನರಿಗೆ ಅನುದಾನ ರಾಜ್ಯಾಂಗಬದ್ಧ 

ರಾಜ್ಯದ ಒಟ್ಟು ಜನಸಂಖ್ಯೆಯ ಶೇ.17.1ರಷ್ಟು ಎಸ್ ಸಿ ಹಾಗೂ ಶೇ.7 ರಷ್ಟು ಎಸ್ ಟಿ ವರ್ಗಕ್ಕೆ ಸೇರಿದವರಿದ್ದಾರೆ. 2011ರ ಜನಗಣತಿ ಪ್ರಕಾರ, ಶೇ.24.1 ರಷ್ಟು ಎಸ್ ಸಿ ಹಾಗೂ ಎಸ್ ಟಿ ವರ್ಗದ ಜನಸಂಖ್ಯೆಯಿದೆ. ಈ ಜನಸಂಖ್ಯೆಗನುಗುಣವಾಗಿ ಎಸ್ ಸಿ ಎಸ್ ಟಿ ವರ್ಗಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ಅನುದಾನ ಮೀಸಲಿಡುವ ಬಗ್ಗೆ ಕಾನೂನು ತಂದ ಮೊದಲ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೆ ರಾಜ್ಯ ಪಾತ್ರವಾಗಿದೆ. ಯಾವುದೇ ಸರ್ಕಾರಗಳು ಬಂದರೂ ಈ ಕಾನೂನನ್ನು ಯಾರು ಬದಲಾಯಿಸಲು ಸಾಧ್ಯವಿಲ್ಲ. ಈ ಕಾನೂನು ನಂತರ 2013 ರಿಂದ 2018ರವರೆಗೆ ನಮ್ಮ ಸರ್ಕಾರ ಒಟ್ಟು 88 ಸಾವಿರ ಕೋಟಿ ರೂ.ಗಳನ್ನು ಎಸ್ ಸಿ ಎಸ್ಟಿ ಜನರಿಗೆ ಮೀಸಲಿಡಲಾಗಿತ್ತು.  ಈ ಪ್ರಮಾಣದ ಜನಸಂಖ್ಯೆಗೆ ಈ ಅನುದಾನ ರಾಜ್ಯಾಂಗಬದ್ಧವಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಶಸ್ತಿ ವಿಜೇತರ ಸಾಧನೆಗಳು ಸ್ಫೂರ್ತಿಯಾಗಲಿ

ನಾಡಿನ ಸಮಸ್ತ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದ ಶುಭಾಶಯಗಳನ್ನು ಮುಖ್ಯಮಂತ್ರಿಯವರು ಕೋರಿದರು. ಈ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 8 ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದ್ದು, ಕನ್ನಡ ನಾಡಿನ ಜನತೆಯ ಪರವಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.ಪ್ರಶಸ್ತಿ ಪುರಸ್ಕೃತರ ಸಾಧನೆಗಳು ಎಲ್ಲರಿಗೂ ದಾರಿದೀಪವಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ರಾಜನಹಳ್ಳಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸಂನಾನಂದಪುರಿ ಸ್ವಾಮೀಜಿ , ಸಚಿವರಾದ ಡಾ: ಹೆಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಬಿ.ನಾಗೇಂದ್ರ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ಆಂಜನೇಯ, ಮಾಜೋ ಸಂಸದ ಉಗ್ರಪ್ಪ ಹಾಗೂ ವಾಲ್ಮೀಕಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

6 minutes ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

14 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

16 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago