ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಪಿಯುಸಿ ಹಾಗೂ ನಂತರದ ಕೋರ್ಸುಗಳ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕೋರ್ಸುಗಳ ವಿವರ ಹಾಗೂ ಪ್ರೋತ್ಸಾಹ ಧನ ಮೊತ್ತ ರೂ. ಗಳಲ್ಲಿ (ಪ್ರತಿ ವಿದ್ಯಾರ್ಥಿಗೆ)
1. II PUC/3 Years Diploma Polytechnic, 20,000/-
2. Degree, 25,000/-
3 Post Graduate Course like MA, M.sc, Mcom, MBA, MCA, MFA etc., 30,000/-
4 Agriculture/Engineering/Medicine/ Vetrinary, 35,000/-
ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್ಸೈಟ್ www.tw.kar.nic.in ನಲ್ಲಿ ಅರ್ಜಿಯನ್ನು ಸಲ್ಲಿಸಲು 2023ರ ಆಗಸ್ಟ್ 31 ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿ, ಮತ್ತು ಸಲ್ಲಿಸಿದ ಅರ್ಜಿಯನ್ನು ಕಡ್ಡಾಯವಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ: 205, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ಈ ಕಛೇರಿಗೆ ಪಿಯುಸಿ ಹಾಗೂ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ದೃಡೀಕೃತ ದಾಖಲಾತಿಗಳನ್ನು ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29787448 ಅನ್ನು ಸಂಪರ್ಕಿಸುವುದು.
ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಸಲ್ಲಿಸಬೇಕಾಗುವ ದಾಖಲೆಗಳು:
1. ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ.
2. ಜಾತಿ ಪ್ರಮಾಣ ಪತ್ರ.
3. ಆಧಾರ್ ಕಾರ್ಡ್ ಪ್ರತಿ.
4. ಹಿಂದಿನ ತರಗತಿಯ ವ್ಯಾಸಂಗ ಪ್ರಮಾಣ ಪತ್ರಗಳು/ಅಂಕಪಟ್ಟಿಗಳು.
5. ಚಾಲ್ತಿಯಲ್ಲಿರುವ ಮತ್ತು ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ವಿವರ
6. ಪಾಸ್ಪೋರ್ಟ್ ಅಳತೆಯ ಭಾವಚಿತ್ರ.
ಅರ್ಜಿ ಸಲ್ಲಿಸಲು ಪಿ.ಯು.ಸಿ/ಪದವಿ/ಸ್ವಾತಕೋತ್ತರ ಪದವಿ ವಿದ್ಯಾರ್ಥಿಗಳು ನಿಗಧಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜು.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.