ಪರಿಶಿಷ್ಟ ವರ್ಗಗಳ ಕಾನೂನು ಪದವೀಧರರಿಗೆ ತರಬೇತಿಗಾಗಿ ಅರ್ಜಿ ಆಹ್ವಾನ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿ ನೀಡುವ ಸಲುವಾಗಿ ಪರಿಶಿಷ್ಟ ವರ್ಗಗಳ ಕಾನೂನು ಪದವೀಧರರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವೆಬ್‌ಸೈಟ್ www.twd.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2024ರ ಜೂನ್ 18 ರಿಂದ ಪ್ರಾರಂಭವಾಗಿ ಜುಲೈ 31 ಕೊನೆಯ ದಿನಾಂಕವಾಗಿರುತ್ತದೆ.

*ಷರತ್ತುಗಳು*

1. ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು.
2. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
3. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಎರಡು ವರ್ಷದ ಒಳಗೆ ಕಾನೂನು ಪದವಿಯನ್ನು ಪಡೆದಿರಬೇಕು.
4. ವಾರ್ಷಿಕ ಆದಾಯ ರೂ.2,00,000/-ಗಳ ಒಳಗೊಂಡಿರಬೇಕು.
5. ತರಬೇತಿ ಅವಧಿ ಎರಡು ವರ್ಷಗಳಾಗಿದ್ದು,ಮಾಸಿಕ ರೂ.10,000/-ಗಳ ಶಿಷ್ಯ ವೇತನ ನೀಡಲಾಗುವುದು.
6. ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ಹಿರಿಯ ವಕೀಲರಲ್ಲಿ ತರಬೇತಿ ತರಬೇತಿ ನಿಯೋಜಿಸಲಾಗುವುದು.
7. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಮಧ್ಯಂತರದಲ್ಲಿ ಬಿಟ್ಟು ಹೋಗಬಾರದು ಹಾಗೆ ಬಿಟ್ಟು ಹೋದ ಪಕ್ಷದಲ್ಲಿ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯ ವೇತನ ವಾಪಸ್ಸು ಪಡೆಯಲಾಗುವುದು ಹಾಗೂ ಈ ನಿಯಮ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ದಿಮೆಯಲ್ಲಿ ನೇಮಕ ಹೊಂದಿರುವವರಿಗೆ ಅನ್ವಯಿಸುವುದಿಲ್ಲ.
8. ಸುಳ್ಳು ದಾಖಲೆ ಮಾಹಿತಿಯನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನಿನ ಅನ್ವಯ ಶಿಕ್ಷೆಗೆ ಗುರಿಪಡಿಸಲಾಗುವುದು ಹಾಗೂ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯವೇತನ ಶೇ.10ರಂತೆ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು.
9. ಅರ್ಜಿಯಲ್ಲಿನ ಮಾಹಿತಿಯು ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
10. ಆಯ್ಕೆ ಸಮಿತಿಯ ತಿರ್ಮಾನವೇ ಅಂತಿಮ ತೀರ್ಮಾನ ವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ನಂ-205 ಎರಡನೇ ಮಹಡಿ,ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು-562110. ದೂರವಾಣಿ ಸಂಖ್ಯೆ; 080-29787448 ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ-ದೂ.ಸಂ.; 27681784, ದೊಡ್ಡಬಳ್ಳಾಪುರ-ದೂ.ಸಂ.; 27623681, ಹೊಸಕೋಟೆ-ದೂ.ಸಂ.; 27931528 ಮತ್ತು ನೆಲಮಂಗಲ-ದೂ.ಸಂ.; 27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

46 minutes ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

12 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

13 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

14 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

17 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago