ದಸರಾ ಪ್ರಯುಕ್ತ ಸ್ಥಾಪಿಸಲಾಗಿರುವ ಆಹಾರ ಮಳಿಗೆಯ ವಸ್ತುಪ್ರದರ್ಶನವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವತಿಯಿಂದ ಆಯೋಜಿಸಿದ್ದು, ಆಹಾರ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಯನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಉದ್ಘಾಟಿಸಿದರು.
ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಕುರಿತು ವಸ್ತು ಪ್ರರ್ದಶನದಲ್ಲಿ ಹಳ್ಳಿಯ ಜೀವನಶೈಲಿಯ ಕುರಿತ ಪ್ರದರ್ಶನ ಮಾಡಲಾಗಿದ್ದು ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ, ಜೋಳ, ರಾಗಿಯ ಕುರಿತು ಹಾಗೂ ಕಾನೂನು ಮಾಪನ ಶಾಸ್ತ್ರದ ಇಲಾಖೆಯ ತೂಕದ ಸಾಮಗ್ರಿಗಳ ಕುರಿತು ವಸ್ತು ಪ್ರದರ್ಶನವನ್ನು ಮಾಡಲಾಗಿತ್ತು.
ಹಸಿವು ಮುಕ್ತ ಕರ್ನಾಟಕ ಸಂಕಲ್ಪದೊಂದಿಗೆ ಸಮೃದ್ದ ಹಳ್ಳಿಯ ಚಿತ್ರಣವನ್ನು ಪ್ರದರ್ಶಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಪಡಿತರ ಕಾರ್ಡ್ ಗಳು ಪರಿಷ್ಕರಣೆ ನಡೆಸಲಾಗಿತ್ತಿದ್ದು, ಅರ್ಹರು ಒಂದು ವೇಳೆ ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆಯಾಗಿದ್ದರೆ ಸಂಬಂದಿಸಿದ ತಾಲ್ಲೂಕಿನಲ್ಲಿ ತಹಶಿಲ್ದಾರರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದಾಗ ಅವರು ಪರಿಶೀಲನೆ ನಡೆಸಿ ಪುನಃ ಕಾರ್ಡ್ ವಿತರಿಸಲು ಕ್ರಮವಹಿಸಲಾಗುವುದು ಎಂದರು.
ಮುಖ್ಯಮಂತ್ರಿಗಳ ಬದಲಾವಣೆ ವಿಚಾರವಾಗಿ ಮಾತನಾಡಿ ಸರ್ಕಾರ ಸುಭದ್ರವಾಗಿದ್ದು, ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಉತ್ತಮ ಕೆಲಸ ಮಾಡುತ್ತಿದ್ದು ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದು ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಸಚಿವ ಸಂಪುಟದ ಪುನರ್ ರಚನೆಯ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದರು.
ಅನ್ನಭಾಗ್ಯ ಯೋಜನೆಯಡಿ ಅರ್ಹ ಪ್ರತಿ ಫಲಾನುಭವಿಗೆ 10ಕೆಜಿ ಅಕ್ಕಿ ವಿತರಣೆ ಮಾಡುತ್ತಿದ್ದು ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮವಹಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್ ಹಾಗೂ ಜಿಲ್ಲಾ ಜಂಟಿ ಉಪ ನಿರ್ದೇಶಕ ಮಂಟೇಸ್ವಾಮಿ ಹಾಗೂ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…
ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್…
ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…
ದೊಡ್ಡಬಳ್ಳಾಪುರದ ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕಗೊಂಡಿದ್ದಾರೆ. ಈ ಹಿನ್ನೆಲೆ ಇಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ…