Categories: ಮೈಸೂರು

ಪರಿಷ್ಕರಣೆಯಲ್ಲಿ ಅರ್ಹರ ಕಾರ್ಡ್ ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆ ಆಗಿದ್ದಲ್ಲಿ ಎರಡು ದಿನಗಳಲ್ಲಿ ಪುನಃ ಕಾರ್ಡ್ ವಿತರಿಸಲಾಗುತ್ತದೆ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ದಸರಾ ಪ್ರಯುಕ್ತ ಸ್ಥಾಪಿಸಲಾಗಿರುವ ಆಹಾರ ಮಳಿಗೆಯ ವಸ್ತುಪ್ರದರ್ಶನವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವತಿಯಿಂದ ಆಯೋಜಿಸಿದ್ದು, ಆಹಾರ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಯನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಉದ್ಘಾಟಿಸಿದರು.

ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ  ಅನ್ನಭಾಗ್ಯ ಯೋಜನೆಯ ಕುರಿತು ವಸ್ತು ಪ್ರರ್ದಶನದಲ್ಲಿ ಹಳ್ಳಿಯ ಜೀವನಶೈಲಿಯ ಕುರಿತ ಪ್ರದರ್ಶನ  ಮಾಡಲಾಗಿದ್ದು ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ, ಜೋಳ, ರಾಗಿಯ ಕುರಿತು ಹಾಗೂ ಕಾನೂನು ಮಾಪನ ಶಾಸ್ತ್ರದ ಇಲಾಖೆಯ ತೂಕದ ಸಾಮಗ್ರಿಗಳ ಕುರಿತು ವಸ್ತು ಪ್ರದರ್ಶನವನ್ನು ಮಾಡಲಾಗಿತ್ತು.

ಹಸಿವು ಮುಕ್ತ ಕರ್ನಾಟಕ  ಸಂಕಲ್ಪದೊಂದಿಗೆ ಸಮೃದ್ದ ಹಳ್ಳಿಯ ಚಿತ್ರಣವನ್ನು ಪ್ರದರ್ಶಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಪಡಿತರ ಕಾರ್ಡ್ ಗಳು ಪರಿಷ್ಕರಣೆ ನಡೆಸಲಾಗಿತ್ತಿದ್ದು, ಅರ್ಹರು ಒಂದು ವೇಳೆ ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆಯಾಗಿದ್ದರೆ ಸಂಬಂದಿಸಿದ ತಾಲ್ಲೂಕಿನಲ್ಲಿ ತಹಶಿಲ್ದಾರರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದಾಗ ಅವರು ಪರಿಶೀಲನೆ ನಡೆಸಿ ಪುನಃ ಕಾರ್ಡ್ ವಿತರಿಸಲು ಕ್ರಮವಹಿಸಲಾಗುವುದು ಎಂದರು.

ಮುಖ್ಯಮಂತ್ರಿಗಳ ಬದಲಾವಣೆ ವಿಚಾರವಾಗಿ ಮಾತನಾಡಿ ಸರ್ಕಾರ ಸುಭದ್ರವಾಗಿದ್ದು, ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಉತ್ತಮ ಕೆಲಸ ಮಾಡುತ್ತಿದ್ದು ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದು ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಸಚಿವ ಸಂಪುಟದ ಪುನರ್ ರಚನೆಯ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದರು.

ಅನ್ನಭಾಗ್ಯ ಯೋಜನೆಯಡಿ ಅರ್ಹ ಪ್ರತಿ ಫಲಾನುಭವಿಗೆ 10ಕೆಜಿ ಅಕ್ಕಿ ವಿತರಣೆ ಮಾಡುತ್ತಿದ್ದು ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮವಹಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್  ಹಾಗೂ ಜಿಲ್ಲಾ ಜಂಟಿ ಉಪ ನಿರ್ದೇಶಕ ಮಂಟೇಸ್ವಾಮಿ ಹಾಗೂ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು

Ramesh Babu

Journalist

Recent Posts

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 hour ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

2 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

4 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

7 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

9 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

13 hours ago