ದಸರಾ ಪ್ರಯುಕ್ತ ಸ್ಥಾಪಿಸಲಾಗಿರುವ ಆಹಾರ ಮಳಿಗೆಯ ವಸ್ತುಪ್ರದರ್ಶನವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವತಿಯಿಂದ ಆಯೋಜಿಸಿದ್ದು, ಆಹಾರ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಯನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಉದ್ಘಾಟಿಸಿದರು.
ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಕುರಿತು ವಸ್ತು ಪ್ರರ್ದಶನದಲ್ಲಿ ಹಳ್ಳಿಯ ಜೀವನಶೈಲಿಯ ಕುರಿತ ಪ್ರದರ್ಶನ ಮಾಡಲಾಗಿದ್ದು ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ, ಜೋಳ, ರಾಗಿಯ ಕುರಿತು ಹಾಗೂ ಕಾನೂನು ಮಾಪನ ಶಾಸ್ತ್ರದ ಇಲಾಖೆಯ ತೂಕದ ಸಾಮಗ್ರಿಗಳ ಕುರಿತು ವಸ್ತು ಪ್ರದರ್ಶನವನ್ನು ಮಾಡಲಾಗಿತ್ತು.
ಹಸಿವು ಮುಕ್ತ ಕರ್ನಾಟಕ ಸಂಕಲ್ಪದೊಂದಿಗೆ ಸಮೃದ್ದ ಹಳ್ಳಿಯ ಚಿತ್ರಣವನ್ನು ಪ್ರದರ್ಶಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಪಡಿತರ ಕಾರ್ಡ್ ಗಳು ಪರಿಷ್ಕರಣೆ ನಡೆಸಲಾಗಿತ್ತಿದ್ದು, ಅರ್ಹರು ಒಂದು ವೇಳೆ ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆಯಾಗಿದ್ದರೆ ಸಂಬಂದಿಸಿದ ತಾಲ್ಲೂಕಿನಲ್ಲಿ ತಹಶಿಲ್ದಾರರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದಾಗ ಅವರು ಪರಿಶೀಲನೆ ನಡೆಸಿ ಪುನಃ ಕಾರ್ಡ್ ವಿತರಿಸಲು ಕ್ರಮವಹಿಸಲಾಗುವುದು ಎಂದರು.
ಮುಖ್ಯಮಂತ್ರಿಗಳ ಬದಲಾವಣೆ ವಿಚಾರವಾಗಿ ಮಾತನಾಡಿ ಸರ್ಕಾರ ಸುಭದ್ರವಾಗಿದ್ದು, ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಉತ್ತಮ ಕೆಲಸ ಮಾಡುತ್ತಿದ್ದು ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದು ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಸಚಿವ ಸಂಪುಟದ ಪುನರ್ ರಚನೆಯ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದರು.
ಅನ್ನಭಾಗ್ಯ ಯೋಜನೆಯಡಿ ಅರ್ಹ ಪ್ರತಿ ಫಲಾನುಭವಿಗೆ 10ಕೆಜಿ ಅಕ್ಕಿ ವಿತರಣೆ ಮಾಡುತ್ತಿದ್ದು ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮವಹಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್ ಹಾಗೂ ಜಿಲ್ಲಾ ಜಂಟಿ ಉಪ ನಿರ್ದೇಶಕ ಮಂಟೇಸ್ವಾಮಿ ಹಾಗೂ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು
ಡೇ ಕೇರ್........, ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ...... ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…
ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…
ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…