ದಸರಾ ಪ್ರಯುಕ್ತ ಸ್ಥಾಪಿಸಲಾಗಿರುವ ಆಹಾರ ಮಳಿಗೆಯ ವಸ್ತುಪ್ರದರ್ಶನವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವತಿಯಿಂದ ಆಯೋಜಿಸಿದ್ದು, ಆಹಾರ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಯನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಉದ್ಘಾಟಿಸಿದರು.
ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಕುರಿತು ವಸ್ತು ಪ್ರರ್ದಶನದಲ್ಲಿ ಹಳ್ಳಿಯ ಜೀವನಶೈಲಿಯ ಕುರಿತ ಪ್ರದರ್ಶನ ಮಾಡಲಾಗಿದ್ದು ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ, ಜೋಳ, ರಾಗಿಯ ಕುರಿತು ಹಾಗೂ ಕಾನೂನು ಮಾಪನ ಶಾಸ್ತ್ರದ ಇಲಾಖೆಯ ತೂಕದ ಸಾಮಗ್ರಿಗಳ ಕುರಿತು ವಸ್ತು ಪ್ರದರ್ಶನವನ್ನು ಮಾಡಲಾಗಿತ್ತು.
ಹಸಿವು ಮುಕ್ತ ಕರ್ನಾಟಕ ಸಂಕಲ್ಪದೊಂದಿಗೆ ಸಮೃದ್ದ ಹಳ್ಳಿಯ ಚಿತ್ರಣವನ್ನು ಪ್ರದರ್ಶಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಪಡಿತರ ಕಾರ್ಡ್ ಗಳು ಪರಿಷ್ಕರಣೆ ನಡೆಸಲಾಗಿತ್ತಿದ್ದು, ಅರ್ಹರು ಒಂದು ವೇಳೆ ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆಯಾಗಿದ್ದರೆ ಸಂಬಂದಿಸಿದ ತಾಲ್ಲೂಕಿನಲ್ಲಿ ತಹಶಿಲ್ದಾರರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದಾಗ ಅವರು ಪರಿಶೀಲನೆ ನಡೆಸಿ ಪುನಃ ಕಾರ್ಡ್ ವಿತರಿಸಲು ಕ್ರಮವಹಿಸಲಾಗುವುದು ಎಂದರು.
ಮುಖ್ಯಮಂತ್ರಿಗಳ ಬದಲಾವಣೆ ವಿಚಾರವಾಗಿ ಮಾತನಾಡಿ ಸರ್ಕಾರ ಸುಭದ್ರವಾಗಿದ್ದು, ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಉತ್ತಮ ಕೆಲಸ ಮಾಡುತ್ತಿದ್ದು ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದು ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಸಚಿವ ಸಂಪುಟದ ಪುನರ್ ರಚನೆಯ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದರು.
ಅನ್ನಭಾಗ್ಯ ಯೋಜನೆಯಡಿ ಅರ್ಹ ಪ್ರತಿ ಫಲಾನುಭವಿಗೆ 10ಕೆಜಿ ಅಕ್ಕಿ ವಿತರಣೆ ಮಾಡುತ್ತಿದ್ದು ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮವಹಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್ ಹಾಗೂ ಜಿಲ್ಲಾ ಜಂಟಿ ಉಪ ನಿರ್ದೇಶಕ ಮಂಟೇಸ್ವಾಮಿ ಹಾಗೂ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…