Categories: ಮೈಸೂರು

ಪರಿಷ್ಕರಣೆಯಲ್ಲಿ ಅರ್ಹರ ಕಾರ್ಡ್ ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆ ಆಗಿದ್ದಲ್ಲಿ ಎರಡು ದಿನಗಳಲ್ಲಿ ಪುನಃ ಕಾರ್ಡ್ ವಿತರಿಸಲಾಗುತ್ತದೆ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ದಸರಾ ಪ್ರಯುಕ್ತ ಸ್ಥಾಪಿಸಲಾಗಿರುವ ಆಹಾರ ಮಳಿಗೆಯ ವಸ್ತುಪ್ರದರ್ಶನವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವತಿಯಿಂದ ಆಯೋಜಿಸಿದ್ದು, ಆಹಾರ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಯನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಉದ್ಘಾಟಿಸಿದರು.

ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ  ಅನ್ನಭಾಗ್ಯ ಯೋಜನೆಯ ಕುರಿತು ವಸ್ತು ಪ್ರರ್ದಶನದಲ್ಲಿ ಹಳ್ಳಿಯ ಜೀವನಶೈಲಿಯ ಕುರಿತ ಪ್ರದರ್ಶನ  ಮಾಡಲಾಗಿದ್ದು ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ, ಜೋಳ, ರಾಗಿಯ ಕುರಿತು ಹಾಗೂ ಕಾನೂನು ಮಾಪನ ಶಾಸ್ತ್ರದ ಇಲಾಖೆಯ ತೂಕದ ಸಾಮಗ್ರಿಗಳ ಕುರಿತು ವಸ್ತು ಪ್ರದರ್ಶನವನ್ನು ಮಾಡಲಾಗಿತ್ತು.

ಹಸಿವು ಮುಕ್ತ ಕರ್ನಾಟಕ  ಸಂಕಲ್ಪದೊಂದಿಗೆ ಸಮೃದ್ದ ಹಳ್ಳಿಯ ಚಿತ್ರಣವನ್ನು ಪ್ರದರ್ಶಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಪಡಿತರ ಕಾರ್ಡ್ ಗಳು ಪರಿಷ್ಕರಣೆ ನಡೆಸಲಾಗಿತ್ತಿದ್ದು, ಅರ್ಹರು ಒಂದು ವೇಳೆ ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆಯಾಗಿದ್ದರೆ ಸಂಬಂದಿಸಿದ ತಾಲ್ಲೂಕಿನಲ್ಲಿ ತಹಶಿಲ್ದಾರರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದಾಗ ಅವರು ಪರಿಶೀಲನೆ ನಡೆಸಿ ಪುನಃ ಕಾರ್ಡ್ ವಿತರಿಸಲು ಕ್ರಮವಹಿಸಲಾಗುವುದು ಎಂದರು.

ಮುಖ್ಯಮಂತ್ರಿಗಳ ಬದಲಾವಣೆ ವಿಚಾರವಾಗಿ ಮಾತನಾಡಿ ಸರ್ಕಾರ ಸುಭದ್ರವಾಗಿದ್ದು, ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಉತ್ತಮ ಕೆಲಸ ಮಾಡುತ್ತಿದ್ದು ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದು ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಸಚಿವ ಸಂಪುಟದ ಪುನರ್ ರಚನೆಯ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದರು.

ಅನ್ನಭಾಗ್ಯ ಯೋಜನೆಯಡಿ ಅರ್ಹ ಪ್ರತಿ ಫಲಾನುಭವಿಗೆ 10ಕೆಜಿ ಅಕ್ಕಿ ವಿತರಣೆ ಮಾಡುತ್ತಿದ್ದು ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮವಹಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್  ಹಾಗೂ ಜಿಲ್ಲಾ ಜಂಟಿ ಉಪ ನಿರ್ದೇಶಕ ಮಂಟೇಸ್ವಾಮಿ ಹಾಗೂ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

1 hour ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

7 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

21 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

22 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

23 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

23 hours ago