ಆಮ್ಲಜನಕ ನೀಡುವ ಸಸಿಗಳನ್ನು ನೆಡಬೇಕು, ಪರಿಸರ ನಾಶಕ್ಕೆ ನಾವೆಂದೂ ಕಾರಣರಾಗಬಾರದು. ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ ಎಂದು ರುಡ್ ಸೆಟ್ ಸಂಸ್ಥೆ ನಿರ್ದೇಶಕ ಜೆ.ಆನಂದ್ ತಿಳಿಸಿದರು.
ಇಂದು ವಿಶ್ವ ಪರಿಸರದ ದಿನದ ಅಂಗವಾಗಿ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್ಸೆಟ್ ಸಂಸ್ಥೆಯಲ್ಲಿ ಸಸಿಯನ್ನು ನೆಟ್ಟು, ನೀರೆರೆದು ಪರಿಸರ ದಿನ ಆಚರಣೆ ಮಾಡಿ ಮಾತನಾಡಿದ ಅವರು, ಪರಿಸರದ ಸಬಲತೆಗಾಗಿ ಗಿಡಮರಗಳನ್ನು ನೆಟ್ಟು, ಪೋಷಿಸಿ, ಕಡಿಯದೆ ಸಂರಕ್ಷಿಸಬೇಕು ಎಂದರು.
‘ಜವಾಬ್ಧಾರಿಯುತ ನಾಗರೀಕರಾದ ನಾವು
ಪರಿಸರ ದಿನಾಚರಣೆಯ ಅಂಗವಾಗಿ ಇಂದು ಪ್ರಮಾಣೀಕರಿಸುವುದೇನೆಂದರೆ, ಪರಿಸರದ ಸಬಲತೆಗಾಗಿ ಗಿಡಮರಗಳನ್ನು ನೆಟ್ಟು, ಪೋಷಿಸಿ, ಕಡಿಯದೆ ಸಂರಕ್ಷಿಸುತ್ತೇವೆ. ಅಂತೇಯೇ ಪರಿಸರದ ನಾಶಕ್ಕೆ ಕಾರಣವಾಗುವ ಯಾವುದೇ ಕೃತ್ಯಗಳಲ್ಲಿ ಭಾಗಿಯಾಗದೇ ಪರಿಸರ ರಕ್ಷಣೆಗೆ ಕೈಜೋಡಿಸುತ್ತೇವೆಂದು’ ಈ ಮೂಲಕ ಪ್ರಮಾಣ ಮಾಡುತ್ತಿದ್ದೇವೆ ಎಂದು ಪರಿಸರ ಸಂರಕ್ಷಣೆ ಕುರಿತ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…