Categories: ಲೇಖನ

ಪರಿಸರ ನಾಶ ಮಾಡುತ್ತಾ ಪರಿಸರದ ದಿನ ಆಚರಿಸುವ ಆತ್ಮವಂಚಕ ಮನಸ್ಥಿತಿ ನಮ್ಮದು…..

ನಮಗಾಗಿ ಪರಿಸರ ಎಂಬ ಘೋಷಣೆ ಮುಗಿದು, ಪರಿಸರಕ್ಕಾಗಿ ನಾವು ಎಂಬ ಅನಿವಾರ್ಯತೆಯ ದುಸ್ಥಿತಿಯಲ್ಲಿ………

ಜೂನ್ ತಿಂಗಳೆಂದರೆ ಮೊದಲು ನೆನಪಾಗುವುದು ವಿಶ್ವ ಪರಿಸರ ದಿನ………

ಈ ವರ್ಷದ World environment day
ಜೂನ್ 5………

ವರ್ಷದಿಂದ ವರ್ಷಕ್ಕೆ ತಾಪಮಾನದ ಹೊಡೆತಕ್ಕೆ ಬಹಳಷ್ಟು ಜನ ಮತ್ತು ಪ್ರಾಣಿ ಪಕ್ಷಿಗಳು ನುಜ್ಜುಗುಜ್ಜಾಗುತ್ತಿರುವ ಕಾರಣ ಇದರ ನೆನಪು ಬೇಗ ಆಗುತ್ತಿದೆ….

ಅದರಲ್ಲೂ ಉತ್ತರ ಭಾರತದ ಒಂದು ಸ್ಥಳದಲ್ಲಿ ಗರಿಷ್ಠ ತಾಪಮಾನ 56 ಡಿಗ್ರಿ ಸೆಲ್ಸಿಯಸ್ ಎಂದು ಕೇಳಿಯೇ ತಲೆ ತಿರುಗುತ್ತಿದೆ…..

ವಿಶ್ವ ಪರಿಸರ ದಿನ ಎಂಬ ನಾಟಕ,
ನೀರು ಉಳಿಸಿ ಜೀವ ಉಳಿಸಿ ಎಂಬ ಮೂರ್ಖತನ,
ಹಸಿರೇ ಉಸಿರು, ಗಿಡ ನೆಡಿ ಎಂಬ ಫ್ಯಾಷನ್,
ಪ್ರಕೃತಿಯೇ ದೇವರು ಎಂಬ ಸೋಗಲಾಡಿತನ…..

ಅರೆ, ಮನುಷ್ಯನೇ ಪ್ರಕೃತಿಯ ಒಂದು ಭಾಗ,
ಆತನ ಅಸ್ತಿತ್ವವದ ಮೂಲವೇ ಪರಿಸರ,
ಅದನ್ನು ಉಳಿಸಿಕೊಳ್ಳದೇ ನಾಶ ಮಾಡುತ್ತಿರುವ ಮನುಷ್ಯನಿಗೆ ಪರಿಸರ ದಿನ ಆಚರಿಸುವ ನೈತಿಕತೆಯೇ ಇಲ್ಲ, ಅದೊಂದು ಆತ್ಮವಂಚನೆ – ಬೂಟಾಟಿಕೆ….

ಸ್ವತಃ ತನ್ನ ಕಣ್ಣನ್ನು ತಾನೇ ತಿವಿದುಕೊಂಡು ನನ್ನ ಕಣ್ಣನ್ನು ಉಳಿಸಿ ಎಂದು ಗೋಗರೆಯುವ ನಾಟಕವೇಕೆ,….

ಹೃದಯವನ್ನು ಇರಿದುಕೊಂಡು ಹೃದಯ ಉಳಿಸಿ ಎಂಬ ಕಣ್ಣೀರೇಕೆ,….

ಆತ್ಮಹತ್ಯೆ ಮಾಡಿಕೊಳ್ಳಲು ವಿಷ ಕುಡಿದು ಜೀವ ಉಳಿಸಿ ಎಂದು ಬೇಡುವಂತ ದೈನೇಸಿ ಸ್ಥಿತಿ ಏಕೆ……

ಈ ಮನುಷ್ಯನಿಗೆ ಬೇಕಿರುವುದು ದೊಡ್ಡ ದೊಡ್ಡ, ಉದ್ದುದ್ದದ ವಿಶಾಲ ರಸ್ತೆಗಳು, ಲೆಕ್ಜುರಿ ಅಪಾರ್ಟ್‌ಮೆಂಟ್ ಗಳು, ಬೃಹತ್ ಕಟ್ಟಡಗಳು, ಜಂಗಲ್ ಲಾಡ್ಜ್ ಗಳು, ಸ್ಮಾರ್ಟ್ ಸಿಟಿಗಳು, ನಿರಂತರ ವಿದ್ಯುತ್, ವಿಮಾನ ನಿಲ್ದಾಣಗಳು, ಭವ್ಯ ಆಸ್ಪತ್ರೆಗಳು, ರಾಸಾಯನಿಕ ಕಾರ್ಖಾನೆಗಳು,….‌

ಮೊಬೈಲ್, ಷೂ, ಲಿಪ್ ಸ್ಟಿಕ್, ಡ್ರೆಸ್, ಕಾರ್, ಕಮೋಡ್ ಗಳಲ್ಲಿ ಅತ್ಯುತ್ತಮ ಕ್ವಾಲಿಟಿ ನಿರೀಕ್ಷಿಸುವ – ಬಯಸುವ ಇದೇ ಮನುಷ್ಯನಲ್ಲಿ ಆತನ ದೇಹ ಮತ್ತು ಮಾನಸಿಕ ಆರೋಗ್ಯದಲ್ಲಿ ಯಾವುದೇ ಕ್ವಾಲಿಟಿ ಇರುವುದಿಲ್ಲ…..

ನೀರನ್ನು, ಗಾಳಿಯನ್ನು, ಆಹಾರವನ್ನು ವಿಷಯುಕ್ತ ಮಾಡಿರುವ ಸರ್ಕಾರಗಳು ಈಗ ವಿಶ್ವ ಪರಿಸರ ದಿನ ಎಂಬ ಜಾಗೃತಿ ಮೂಡಿಸುವ ದಿನವನ್ನು ಆಚರಿಸುವ ನಾಟಕ ಪ್ರದರ್ಶಿಸುತ್ತಿವೆ…..

ಅಭಿವೃದ್ಧಿಯ ಮಾನದಂಡಗಳನ್ನು ತಪ್ಪಾಗಿ ಅರ್ಥೈಸಿ, ಆಧುನಿಕ ತಂತ್ರಜ್ಞಾನ ಉಪಯೋಗಿಸಿಕೊಂಡು ಒಂದು ಕಡೆ ಪರಿಸರ ನಾಶ, ಇನ್ನೊಂದು ಕಡೆ ಮಾನವೀಯ ಮೌಲ್ಯಗಳ ಕುಸಿತಕ್ಕೆ ಕಾರಣವಾಗಿದೆ…..

ಅಭಿವೃದ್ಧಿಯೂ ಬೇಕು, ಆಧುನಿಕತೆಯೂ ಬೇಕು, ತಂತ್ರಜ್ಞಾನವೂ ಬೇಕು, ಬೃಹತ್ ಜನಸಂಖ್ಯೆಯ ಬೇಡಿಕೆಯನ್ನೂ ಪೂರೈಸಬೇಕು, ಅದರಲ್ಲಿ ಯಾವುದೇ ರಾಜಿ ಬೇಡ. ಆದರೆ ಅದರ ಅರ್ಥ ಪರಿಸರ ಮತ್ತು ಮಾನವೀಯತೆಯ ನಾಶ ಎಂದಲ್ಲ. ಅವುಗಳ ಸಮತೋಲನ ಮತ್ತು ಸಮನ್ವಯ…..

ದುರಾದೃಷ್ಟವಶಾತ್ ಇಂದಿನ ಅಭಿವೃದ್ಧಿ ವಿನಾಶಕಾಲೇ ವಿಪರೀತ ಬುದ್ದಿ ಎಂಬಂತೆ ಆಗಿದೆ…..

ಅಣುವಿನ ಕಣವಾಗಿ
ಪರಿಸರದ ದಿನಕ್ಕಾಗಿ
ನಾ ಕೊಡುವುದಾದರೂ ಏನು…………….

ಈಗಾಗಲೇ ಎಲ್ಲವನ್ನೂ ಕೊಟ್ಟಾಗಿದೆ.
ಈಗೇನಿದ್ದರೂ ಎಲ್ಲವೂ ಪಡೆಯುವುದೆ…..

ಏನೇನು ಪಡೆದಿರುವೆ ಹೇಳಲೆ……

ತಲೆ ತಿರುಗುತ್ತಿದೆ ಕೆಟ್ಟ ಬಿಸಿಲಿನ ಝಳಕ್ಕೆ ಸಿಲುಕಿ,…

ಕಣ್ಣು ಉರಿಯುತ್ತಿದೆ ಧೂಳು ತುಂಬಿದ ಗಾಳಿಗೆ ಸಿಲುಕಿ,….

ಉಸಿರಾಡುವುದೂ ಕಷ್ಟವಾಗುತ್ತಿದೆ ವಿಷಪೂರಿತ ವಾಯುವಿಗೆ ಸಿಲುಕಿ,….

ಕಿವಿ ನೋಯುತ್ತಿದೆ ಕರ್ಕಶ ಶಬ್ದಕ್ಕೆ ಸಿಲುಕಿ,…

ಬಾಯಿ ಹುಣ್ಣಾಗಿದೆ ಕಲುಷಿತ ನೀರಿಗೆ ಸಿಲುಕಿ,…

ನಾಲಿಗೆ ಹೆಪ್ಪುಗಟ್ಟಿದೆ ರಾಸಾಯನಿಕ ಬೆರೆಸಿದ ತಂಪು ಪಾನೀಯಕ್ಕೆ ಸಿಲುಕಿ,…

ಗಂಟಲು ಕೆಟ್ಟಿದೆ ಮಲಿನ ನೀರಿಗೆ ಸಿಲುಕಿ,…

ಹೊಟ್ಟೆ ನೋಯುತ್ತಿದೆ ಕಲಬೆರಕೆ ಆಹಾರಕ್ಕೆ ಸಿಲುಕಿ,…

ಸಾಕೇ ಇನ್ನೂ ಬೇಕೇ….

ಆದರೂ,

ಹೇಳುತ್ತಿದ್ದೇವೆ ಅಭಿವೃದ್ಧಿ ಹೊಂದುತ್ತಿದ್ದೇವೆಂದು,….

ಶಿಕ್ಷಣದ ಗುಣಮಟ್ಟ ಹಾಳಾಗುತ್ತಿದೆ,
ಆಡಳಿತ ವ್ಯವಸ್ಥೆ ಹದಗೆಡುತ್ತಿದೆ,
ಚುನಾವಣಾ ರಾಜಕೀಯ ಹಳ್ಳ ಹಿಡಿಯುತ್ತಿದೆ,
ನ್ಯೆತಿಕತೆ ಕುಸಿಯುತ್ತಿದೆ,
ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿವೆ,….

ಆದರೂ,

ಹೇಳುತ್ತಿದ್ದೇವೆ ಅಭಿವೃದ್ಧಿ ಹೊಂದುತ್ತಿದ್ದೇವೆಂದು,….

SMART CITY ಆಗುತ್ತಿದೆ,
BULLET TRAIN ಬರುತ್ತಿದೆ,
E-GOVERNENCE ಆಗುತ್ತಿದೆ,
DIGITAL INDIA ಬರುತ್ತಿದೆ,
HIGHTECH ಆಸ್ಪತ್ರೆ ಆಗುತ್ತಿದೆ,
FIRST CLASS. ರಸ್ತೆಗಳು ಬರುತ್ತಿವೆ,…..

ಶ್ರೀಮಂತರು ಜಾಸ್ತಿಯಾಗುತ್ತಿದ್ದಾರೆ,
ತಂತ್ರಜ್ಞಾನ ಮುಂದುವರಿಯುತ್ತಿದೆ,….

ಆದರೆ,
ಧೈರ್ಯವಾಗಿ ಹೇಳಲು ಸಾಧ್ಯವಾಗುತ್ತಿಲ್ಲ ನಾವು ಮುಂದುವರಿಯುತ್ತಿದ್ದೇವೆಂದು…….

ಈ ಅಭಿವೃದ್ಧಿ,
ಹಣ ಕೇಂದ್ರಿತ, ತಂತ್ರಜ್ಞಾನ ಆಧಾರಿತ, ಅಂಕಿ ಸಂಖ್ಯೆ ಪ್ರೇರಿತ,…..

ವ್ಯಕ್ತಿತ್ವಗಳೇ ಕುಸಿಯುತ್ತಿರುವಾಗ, ಮಾನವೀಯತೆ ಮರೆಯಾಗುತ್ತಿರುವಾಗ,
ಸಮಾನತೆ ಕಾಣದಾದಾಗ, ಪ್ರಬುದ್ಧತೆ ಬೆಳೆಯದಾದಾಗ,
ಅಭಿವೃದ್ಧಿ ತಾತ್ಕಾಲಿಕ ಮತ್ತು ವಿನಾಶಕಾರಕ,….

ಪ್ರಕೃತಿ – ಪರಿಸರಗಳನ್ನೇ ದೇವರೆಂದು ಹೇಳಿ ಅದರ ಹೃದಯಕ್ಕೆ ಬೆನ್ನಿಗೆ ಚೂರಿ ಹಾಕುವ ಈ ಮನುಷ್ಯ ಪ್ರಾಣಿಗೆ ಏನು ಮಾಡುವುದು…..

ಪರಿಸರ ನಾಶ ಮಾಡುತ್ತಾ ಪರಿಸರದ ದಿನ ಆಚರಿಸುವ ಆತ್ಮವಂಚಕ ಮನಸ್ಥಿತಿ ನಮ್ಮದು…..

ತಕ್ಷಣ ಮಾಡಬೇಕಾದ ಕೆಲಸ ಬಹಳಷ್ಟಿದೆ. ಆದರೆ ಮಾಡುವವರು ಯಾರು ಎಂಬ ದೊಡ್ಡ ಪ್ರಶ್ನೆಯೊಂದಿಗೆ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

10 minutes ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 hour ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

3 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

3 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

7 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

9 hours ago