ಪರಿಸರ ನಿಯಮಗಳನ್ನು ಉಲ್ಲಂಘನೆ: ರೆಸೋನೆನ್ಸ್ ಲ್ಯಾಬೊರೇಟರಿಗೆ 11.68 ಕೋಟಿ ದಂಡ ವಿಧಿಸುವಂತೆ ಎನ್‌ಜಿಟಿಗೆ ಶಿಫಾರಸು

ಪರಿಸರ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಬಳಿಯ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿರುವ ಔಷಧ ಉತ್ಪಾದನಾ ಕಂಪನಿ ‘ರೆಸೋನೆನ್ಸ್ ಲ್ಯಾಬೊರೇಟರಿ’ಗೆ ₹‍11.68 ಕೋಟಿ ಪರಿಸರ ದಂಡ ವಿಧಿಸಬಹುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಶಿಫಾರಸು ಮಾಡಿದೆ.

ಈ ಕಂಪನಿಯು ಪರಿಸರ ಅನುಮತಿ ಪಡೆಯದೇ ದೀರ್ಘಕಾಲದಿಂದ ಬೃಹತ್ ಔಷಧ ಉತ್ಪಾದನಾ ಘಟಕ ನಡೆಸುತ್ತಿದೆ. ಉಲ್ಲಂಘನೆಯ ವಿಭಾಗದ ಅಡಿಯಲ್ಲಿ 2020ರ ಆಗಸ್ಟ್‌ನಲ್ಲಿ ಕರ್ನಾಟಕ ರಾಜ್ಯ ಪರಿಸರ ಪರಿಣಾಮ ಮೌಲ್ಯಮಾಪನ ಪ್ರಾಧಿಕಾರದಿಂದ ಪರಿಸರ ಅನುಮತಿ ಪಡೆದಿದೆ. ಹಿಂದಿನ ಉಲ್ಲಂಘನೆಗಳಿಗೆ ಪರಿಹಾರವನ್ನು ಮೌಲ್ಯಮಾಪನ ಮಾಡಿ ದಂಡ ಪಾವತಿಸದ ಹೊರತು ಪರಿಸರ ಅನುಮತಿ ನೀಡುವಂತಿಲ್ಲ. ನಿಯಮಬಾಹಿರವಾಗಿ ಪರಿಸರ ಅನುಮತಿ ನೀಡಲಾಗಿದೆ. ಜತೆಗೆ, ಪ್ರಾಧಿಕಾರಕ್ಕೆ ಈ ಅಧಿಕಾರವೇ ಇಲ್ಲ ಎಂದು ಆರೋಪಿಸಿ ಎಸ್‌.ಕೆ. ವಿಜಯಕುಮಾರ್ ಎಂಬುವವರು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ದಕ್ಷಿಣ ವಲಯ ಪೀಠದ ಮೆಟ್ಟಿಲೇರಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಪೀಠವು ಈ ವರ್ಷದ ಫೆಬ್ರವರಿ 1ರಂದು ಆದೇಶ ಹೊರಡಿಸಿ, ‘ಪ್ರಾಧಿಕಾರವು ಕ್ಯೋಟೋ ಪ್ರೋಟೋಕಾಲ್ ಪ್ರಕಾರ, ಪರಿಸರದ ಮೇಲಾಗಿರುವ ಹಾನಿಯ ಲೆಕ್ಕಾಚಾರ ಮಾಡಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಗಳನ್ನು ಅನುಸರಿಸಿಲ್ಲ. ಕಂಪನಿಯ ಮನವಿಯ ಮೇರೆಗೆ ಪ್ರಾಧಿಕಾರವು ಈ ರೀತಿ ಮೌಲ್ಯಮಾಪನ ಮಾಡಿತ್ತು. ಇದು ಸರಿಯಲ್ಲ’ ಎಂದು ಹೇಳಿತ್ತು.

ಕೇಂದ್ರ ಅಥವಾ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಗಳ ಪ್ರಕಾರ ಪರಿಸರ ಹಾನಿಯ ಮೌಲ್ಯಮಾಪನ ಮಾಡಿ ವರದಿ ಸಲ್ಲಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಪೀಠ ನಿರ್ದೇಶನ ನೀಡಿತ್ತು. ಮಂಡಳಿಯ ಪರಿಸರ ಅಧಿಕಾರಿ ರಾಜಶೇಖರ ಎಸ್. ಅವರು ಪೀಠಕ್ಕೆ ಶುಕ್ರವಾರ ವರದಿ ಸಲ್ಲಿಸಿದ್ದು, ಇದನ್ನು ಪರಿಗಣನೆಗೆ ತೆಗೆದುಕೊಂಡು ಮುಂದಿನ ಆದೇಶ ಹೊರಡಿಸಬೇಕು ಎಂದು ಕೋರಿದ್ದಾರೆ. ಪ್ರಕರಣದ ಅಂತಿಮ ವಿಚಾರಣೆಯನ್ನು ಸೆಪ್ಟೆಂಬರ್ 25ಕ್ಕೆ ಮುಂದೂಡಲಾಗಿದೆ.

ಕ್ಯೋಟೋ ಪ್ರೋಟೋಕಾಲ್ ನಿಯಮ ಅನುಸರಿಸಿ ಪರಿಸರಕ್ಕೆ ಆಗಿರುವ ಹಾನಿಯ ಲೆಕ್ಕಾಚಾರ ನಡೆಸಲಾಗಿದೆ. ಈ ಪ್ರಕಾರ, ದಂಡವು 17.63 ಲಕ್ಷ ಆಗಲಿದೆ ಎಂದು ಕಂಪನಿಯು ಪ್ರಾಧಿಕಾರಕ್ಕೆ ವರದಿ ಸಲ್ಲಿಸಿದೆ. ಇನ್ನೊಂದೆಡೆ, ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಗಳ ಪ್ರಕಾರ, ಪರಿಸರ ಉಲ್ಲಂಘನೆಯ ಕಾರಣದಿಂದ ಪಡೆದ ಆರ್ಥಿಕ ಲಾಭಕ್ಕೆ ಸಂಬಂಧಿಸಿದಂತೆ/ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಹಾನಿಗೊಳಗಾದ ಪರಿಸರವನ್ನು ಲೆಕ್ಕಾಚಾರ ಮಾಡಲು ಅಥವಾ ನಿರ್ಣಯಿಸಲು ಯಾವುದೇ ಸೂತ್ರವಿಲ್ಲ ಎಂದೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮಾಲಿನ್ಯ ನಿಯಂತ್ರಣ ಮಂಡಳಿಯ ವರ್ಗೀಕರಣದ ಪ್ರಕಾರ, ಇದು ಕೆಂಪು ವರ್ಗದ ಕಂಪನಿ, ಕಂಪನಿ 2012ರ ಫೆಬ್ರುವರಿ 8ರಿಂದ ಕಾರ್ಯಾಚರಣೆ ನಡೆಸುತ್ತಿದೆ. ಪರಿಸರ ಅನುಮತಿ ಪಡೆದಿದ್ದು 2020ರ ಆಗಸ್ಟ್ 24 ರಿಂದ ಪರಿಸರ ಅನುಮತಿ ಇಲ್ಲದೆ 3,117 ದಿನ ಕಾರ್ಯಾಚರಣೆ ನಡೆಸಲಾಗಿದೆ. ಈ ಕಂಪನಿಯ ಯೋಜನಾ ವೆಚ್ಚ 110 ಕೋಟಿಯಿಂದ 725 ಕೋಟಿ ನಡುವೆ ಇದೆ. ಹಾಗಾಗಿ, ಇದೊಂದು ದೊಡ್ಡ ಕಂಪನಿ. 50 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ ಪ್ರದೇಶದಲ್ಲಿ ಈ ಕಂಪನಿ ಇದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿ ಪ್ರಕಾರ, ಪರಿಸರ ಪರಿಹಾರ 711.68 ಕೋಟಿ ಆಗುತ್ತದೆ ಎಂದೂ ವರದಿಯಲ್ಲಿ ತಿಳಿಸಲಾಗಿದೆ.

Ramesh Babu

Journalist

Recent Posts

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

1 hour ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

12 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

13 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

15 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

23 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago