ಪರಿಸರ ನಿಯಮಗಳನ್ನು ಉಲ್ಲಂಘನೆ: ರೆಸೋನೆನ್ಸ್ ಲ್ಯಾಬೊರೇಟರಿಗೆ 11.68 ಕೋಟಿ ದಂಡ ವಿಧಿಸುವಂತೆ ಎನ್‌ಜಿಟಿಗೆ ಶಿಫಾರಸು

ಪರಿಸರ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಬಳಿಯ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿರುವ ಔಷಧ ಉತ್ಪಾದನಾ ಕಂಪನಿ ‘ರೆಸೋನೆನ್ಸ್ ಲ್ಯಾಬೊರೇಟರಿ’ಗೆ ₹‍11.68 ಕೋಟಿ ಪರಿಸರ ದಂಡ ವಿಧಿಸಬಹುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಶಿಫಾರಸು ಮಾಡಿದೆ.

ಈ ಕಂಪನಿಯು ಪರಿಸರ ಅನುಮತಿ ಪಡೆಯದೇ ದೀರ್ಘಕಾಲದಿಂದ ಬೃಹತ್ ಔಷಧ ಉತ್ಪಾದನಾ ಘಟಕ ನಡೆಸುತ್ತಿದೆ. ಉಲ್ಲಂಘನೆಯ ವಿಭಾಗದ ಅಡಿಯಲ್ಲಿ 2020ರ ಆಗಸ್ಟ್‌ನಲ್ಲಿ ಕರ್ನಾಟಕ ರಾಜ್ಯ ಪರಿಸರ ಪರಿಣಾಮ ಮೌಲ್ಯಮಾಪನ ಪ್ರಾಧಿಕಾರದಿಂದ ಪರಿಸರ ಅನುಮತಿ ಪಡೆದಿದೆ. ಹಿಂದಿನ ಉಲ್ಲಂಘನೆಗಳಿಗೆ ಪರಿಹಾರವನ್ನು ಮೌಲ್ಯಮಾಪನ ಮಾಡಿ ದಂಡ ಪಾವತಿಸದ ಹೊರತು ಪರಿಸರ ಅನುಮತಿ ನೀಡುವಂತಿಲ್ಲ. ನಿಯಮಬಾಹಿರವಾಗಿ ಪರಿಸರ ಅನುಮತಿ ನೀಡಲಾಗಿದೆ. ಜತೆಗೆ, ಪ್ರಾಧಿಕಾರಕ್ಕೆ ಈ ಅಧಿಕಾರವೇ ಇಲ್ಲ ಎಂದು ಆರೋಪಿಸಿ ಎಸ್‌.ಕೆ. ವಿಜಯಕುಮಾರ್ ಎಂಬುವವರು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ದಕ್ಷಿಣ ವಲಯ ಪೀಠದ ಮೆಟ್ಟಿಲೇರಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಪೀಠವು ಈ ವರ್ಷದ ಫೆಬ್ರವರಿ 1ರಂದು ಆದೇಶ ಹೊರಡಿಸಿ, ‘ಪ್ರಾಧಿಕಾರವು ಕ್ಯೋಟೋ ಪ್ರೋಟೋಕಾಲ್ ಪ್ರಕಾರ, ಪರಿಸರದ ಮೇಲಾಗಿರುವ ಹಾನಿಯ ಲೆಕ್ಕಾಚಾರ ಮಾಡಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಗಳನ್ನು ಅನುಸರಿಸಿಲ್ಲ. ಕಂಪನಿಯ ಮನವಿಯ ಮೇರೆಗೆ ಪ್ರಾಧಿಕಾರವು ಈ ರೀತಿ ಮೌಲ್ಯಮಾಪನ ಮಾಡಿತ್ತು. ಇದು ಸರಿಯಲ್ಲ’ ಎಂದು ಹೇಳಿತ್ತು.

ಕೇಂದ್ರ ಅಥವಾ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಗಳ ಪ್ರಕಾರ ಪರಿಸರ ಹಾನಿಯ ಮೌಲ್ಯಮಾಪನ ಮಾಡಿ ವರದಿ ಸಲ್ಲಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಪೀಠ ನಿರ್ದೇಶನ ನೀಡಿತ್ತು. ಮಂಡಳಿಯ ಪರಿಸರ ಅಧಿಕಾರಿ ರಾಜಶೇಖರ ಎಸ್. ಅವರು ಪೀಠಕ್ಕೆ ಶುಕ್ರವಾರ ವರದಿ ಸಲ್ಲಿಸಿದ್ದು, ಇದನ್ನು ಪರಿಗಣನೆಗೆ ತೆಗೆದುಕೊಂಡು ಮುಂದಿನ ಆದೇಶ ಹೊರಡಿಸಬೇಕು ಎಂದು ಕೋರಿದ್ದಾರೆ. ಪ್ರಕರಣದ ಅಂತಿಮ ವಿಚಾರಣೆಯನ್ನು ಸೆಪ್ಟೆಂಬರ್ 25ಕ್ಕೆ ಮುಂದೂಡಲಾಗಿದೆ.

ಕ್ಯೋಟೋ ಪ್ರೋಟೋಕಾಲ್ ನಿಯಮ ಅನುಸರಿಸಿ ಪರಿಸರಕ್ಕೆ ಆಗಿರುವ ಹಾನಿಯ ಲೆಕ್ಕಾಚಾರ ನಡೆಸಲಾಗಿದೆ. ಈ ಪ್ರಕಾರ, ದಂಡವು 17.63 ಲಕ್ಷ ಆಗಲಿದೆ ಎಂದು ಕಂಪನಿಯು ಪ್ರಾಧಿಕಾರಕ್ಕೆ ವರದಿ ಸಲ್ಲಿಸಿದೆ. ಇನ್ನೊಂದೆಡೆ, ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಗಳ ಪ್ರಕಾರ, ಪರಿಸರ ಉಲ್ಲಂಘನೆಯ ಕಾರಣದಿಂದ ಪಡೆದ ಆರ್ಥಿಕ ಲಾಭಕ್ಕೆ ಸಂಬಂಧಿಸಿದಂತೆ/ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಹಾನಿಗೊಳಗಾದ ಪರಿಸರವನ್ನು ಲೆಕ್ಕಾಚಾರ ಮಾಡಲು ಅಥವಾ ನಿರ್ಣಯಿಸಲು ಯಾವುದೇ ಸೂತ್ರವಿಲ್ಲ ಎಂದೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮಾಲಿನ್ಯ ನಿಯಂತ್ರಣ ಮಂಡಳಿಯ ವರ್ಗೀಕರಣದ ಪ್ರಕಾರ, ಇದು ಕೆಂಪು ವರ್ಗದ ಕಂಪನಿ, ಕಂಪನಿ 2012ರ ಫೆಬ್ರುವರಿ 8ರಿಂದ ಕಾರ್ಯಾಚರಣೆ ನಡೆಸುತ್ತಿದೆ. ಪರಿಸರ ಅನುಮತಿ ಪಡೆದಿದ್ದು 2020ರ ಆಗಸ್ಟ್ 24 ರಿಂದ ಪರಿಸರ ಅನುಮತಿ ಇಲ್ಲದೆ 3,117 ದಿನ ಕಾರ್ಯಾಚರಣೆ ನಡೆಸಲಾಗಿದೆ. ಈ ಕಂಪನಿಯ ಯೋಜನಾ ವೆಚ್ಚ 110 ಕೋಟಿಯಿಂದ 725 ಕೋಟಿ ನಡುವೆ ಇದೆ. ಹಾಗಾಗಿ, ಇದೊಂದು ದೊಡ್ಡ ಕಂಪನಿ. 50 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ ಪ್ರದೇಶದಲ್ಲಿ ಈ ಕಂಪನಿ ಇದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿ ಪ್ರಕಾರ, ಪರಿಸರ ಪರಿಹಾರ 711.68 ಕೋಟಿ ಆಗುತ್ತದೆ ಎಂದೂ ವರದಿಯಲ್ಲಿ ತಿಳಿಸಲಾಗಿದೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago