Categories: ಲೇಖನ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕಾಗಿದೆ……..ಒಂದು ಅಂತರಂಗದ ಅಭಿಯಾನ..

ಈ ವರ್ಷದ ಬೇಸಿಗೆಯ ತಾಪಮಾನ ಬಹುತೇಕ ಇಡೀ ಕರ್ನಾಟಕದ ಜನರನ್ನು ಅಲುಗಾಡಿಸಿ ಬಿಟ್ಟಿತು. ಅದರಲ್ಲೂ ಮಧ್ಯಮ, ಕೆಳಮಧ್ಯಮ ಮತ್ತು ಬಡವರ್ಗದ ಜನರು ತಾಪಮಾನದ ಏರಿಕೆಯಿಂದ ತತ್ತರಿಸಿ ಹೋದರು. ಕೆಲವು ಜೀವಗಳು ಹೊರಟೇ ಹೋದವು. ಇನ್ನೊಂದಷ್ಟು ಜನ ಅನಾರೋಗ್ಯಗಳಿಗೆ ತುತ್ತಾದರು. ಪ್ರಾಣಿಪಕ್ಷಿಗಳು ಕಣ್ಣ ಮುಂದೆಯೇ ತುಂಬಾ ಒದ್ದಾಡಿದವು……

ಈಗ ಎರಡು ಮೂರು ದಿನದಿಂದ ಸ್ವಲ್ಪಮಟ್ಟಿಗೆ ಉಷ್ಣಾಂಶ ಕಡಿಮೆಯಾಗಿದೆ. ಆದರೆ ಆ ತಾಪಮಾನದ ಹೊಡೆತ ನಮಗೆ ಒಂದು ಬಹುದೊಡ್ಡ ಪಾಠವಾಗಬೇಕು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿ ವರ್ಷ ಹೀಗೆ ಒಂದೊಂದು ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಜಾಸ್ತಿಯಾಗುತ್ತಾ ಹೋಗುತ್ತದೆ ಎಂದು ಯಾರೋ ಬರೆದ ಒಂದು ಲೇಖನ ಪ್ರಸಾರವಾಗುತ್ತಿದೆ. ಅದು ಎಷ್ಟರಮಟ್ಟಿಗೆ ನಿಜವೋ ಗೊತ್ತಿಲ್ಲ. ಆದರೆ ಮುಂದೆಯೂ ಪರಿಸರವನ್ನು ಹೀಗೇ ನಿರ್ಲಕ್ಷಿಸಿದರೆ ಖಂಡಿತವಾಗಿಯೂ ತಾಪಮಾನದ ಹೊಡೆತಕ್ಕೆ ನಾವೆಲ್ಲರೂ ನಾಶವಾಗುವುದು ನಿಶ್ಚಿತ. ಅದಕ್ಕಾಗಿ ಆ ಹಂತ ತಲುಪುವ ಮುನ್ನವೇ ನಾವೆಲ್ಲ ಎಚ್ಚೆತ್ತುಕೊಳ್ಳಬೇಕಾಗಿದೆ ಮತ್ತು ಆ ನಿಟ್ಟಿನಲ್ಲಿ ಒಂದಷ್ಟು ಕೆಲಸ ಮಾಡಬೇಕಾಗಿದೆ……..

ಮುಖ್ಯವಾಗಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ, ಈ ವರ್ಷದ ಈಗ ಪ್ರಾರಂಭವಾಗಿರುವ ಮಳೆಗಾಲದಲ್ಲಿ ಕನಿಷ್ಠ ಒಂದು ಲಕ್ಷ ಗಿಡಗಳನ್ನು ಬೆಳೆಸುವ ಪ್ರತಿಜ್ಞೆ ಮಾಡಬೇಕು. ಹಾಗೆಯೇ ಹೋಬಳಿ ಮಟ್ಟದಲ್ಲಿ 10 ಲಕ್ಷ ಗಿಡಗಳು, ತಾಲೂಕು ಮಟ್ಟದಲ್ಲಿ 50 ಲಕ್ಷದಷ್ಟು ಗಿಡಗಳು ಮತ್ತು ಗ್ರೇಡ್-ಒನ್ ನಗರಗಳಲ್ಲಿ ಅಂದರೆ ಜಿಲ್ಲಾಮಟ್ಟದಲ್ಲಿ ಒಂದು ಕೋಟಿ ಗಿಡಮರಗಳನ್ನು ನೆಡುವ ಕಾರ್ಯಕ್ರಮವನ್ನು ತತ್ ಕ್ಷಣದಿಂದಲೇ ಹಮ್ಮಿಕೊಳ್ಳಬೇಕು. ಸರ್ಕಾರ ಮತ್ತು ಸ್ವಯಂಸೇವಾ ಸಂಸ್ಥೆಗಳ ಜಂಟಿ ನೇತೃತ್ವದಲ್ಲಿ ಇದನ್ನು ಆರಂಭಿಸಬೇಕು. ಅಂದರೆ ಇಡೀ ರಾಜ್ಯದಲ್ಲಿ ನೂರಾರು ಕೋಟಿ ಗಿಡಗಳನ್ನು ಈ ಮಳೆಗಾಲದ ಸಮಯದಲ್ಲಿ ನೆಟ್ಟರೆ ಕನಿಷ್ಠ ಅದರಲ್ಲಿ ತೀರಾ ಕಡಿಮೆ ಎಂದರೂ 30 ರಿಂದ 40 ಶೇಕಡಾ ಗಿಡಗಳು ಉಳಿಸಿ ಬೆಳೆಸುವಲ್ಲಿ ಯಶಸ್ವಿಯಾದರೆ ಎಷ್ಟೋ ಕೋಟಿ ಮರಗಳು ಬೆಳೆಯುತ್ತವೆ. ಇಡೀ ರಾಜ್ಯದಲ್ಲಿ ಅರಣ್ಯ ಪ್ರದೇಶ ತುಂಬಾ ಹೆಚ್ಚಾಗುತ್ತದೆ…..

ಆಗ ಆಮ್ಲಜನಕ ಹೆಚ್ಚಾಗುತ್ತದೆ. ಮಳೆಯ ಕೊರತೆ ಕಡಿಮೆಯಾಗುತ್ತದೆ. ತಾಪಮಾನದ ಕುಸಿತ, ಮನಸ್ಸಿನ ಆಹ್ಲಾದ, ಆರೋಗ್ಯ ಎಲ್ಲವುಗಳಲ್ಲಿ ಕೆಲವೇ ವರ್ಷದಲ್ಲಿ ಕ್ರಾಂತಿಕಾರಕ ಬದಲಾವಣೆ ಉಂಟು ಮಾಡುತ್ತದೆ‌…..

ಇಷ್ಟನ್ನು ಸಹ ನಮ್ಮಿಂದ ಮಾಡಲು ಸಾಧ್ಯವಿಲ್ಲವೇ ! ಪ್ರಕೃತಿ ತನ್ನ ಕಷ್ಟ ಸಹಿಸಿ ನಮಗೆ ಸಹಾಯ ಮಾಡುತ್ತದೆ. ನಾವು ಆ ಪರಿಸರವನ್ನು ಉಳಿಸಲು ಇಷ್ಟೂ ಪ್ರಯತ್ನ ಪಡದಿದ್ದರೆ ನಮಗೆ ಕ್ಷಮೆಯೇ ಇಲ್ಲ…..

ಯಾರು ಏನು ಮಾಡುತ್ತಿರೋ ಗೊತ್ತಿಲ್ಲ. ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ಸರ್ಕಾರ ಮತ್ತು ಸ್ವಯಂಸೇವಾ ಸಂಸ್ಥೆಗಳು ಹಾಗೂ ಸಾಮಾನ್ಯ ಜನರು ದಯವಿಟ್ಟು ಇದನ್ನು ಒಂದು ದೊಡ್ಡ ಅಭಿಯಾನವಾಗಿ ಪ್ರಾರಂಭಿಸಿ, ಮಳೆಗಾಲದಲ್ಲಿ ಗಿಡ ನೆಟ್ಟರೆ, ನೀರು ಉಣಿಸುವ ತೊಂದರೆಯೂ ಇರುವುದಿಲ್ಲ. ಸಹಜವಾಗಿಯೇ ಮಳೆ ನೀರಿನಲ್ಲಿ ಅವು ಬೆಳೆಯುತ್ತವೆ. ಸ್ವಲ್ಪ ಸಸಿ ದೊಡ್ಡದಾಗುವವರೆಗೂ ಒಂದಷ್ಟು ಜಾಗೃತಿ ವಹಿಸಿದರೆ ಸಾಕು….

ಯೋಚಿಸಿ, ಏನನ್ನಾದರೂ ಮಾಡಿ. ಮುಂದಿನ ವರ್ಷಕ್ಕೆ ಇಷ್ಟೊಂದು ತಾಪಮಾನ ಹೆಚ್ಚಾಗದೆ ನಿಯಂತ್ರಿಸಲು ನಮ್ಮ ನಮ್ಮ ಕರ್ತವ್ಯ ನಿರ್ವಹಿಸೋಣ. ಈ ವರ್ಷದ ಭೀಕರ ಬಿಸಿಲನ್ನು ಮರೆಯುವುದು ಬೇಡ. ಅದು ಸದಾ ನೆನಪಾಗಿ ಗಿಡ ಬೆಳೆಸುವ ಕೆಲಸ ವೇಗ ಪಡೆಯಲಿ……

ಹಾಗೆಯೇ, ಫ್ಲೈ ಓವರ್ ಗಳು,
ಅನಾವಶ್ಯಕವಾದ ಉದ್ದುದ್ದ, ಹೆಚ್ಚು ಅಗಲದ ರಸ್ತೆಗಳು ಮುಂತಾದವುಗಳನ್ನು ಕಡಿಮೆ ಮಾಡಿ, ಆ ಜಾಗದಲ್ಲಿ ಕೆರೆಕಟ್ಟೆಗಳು, ಇಂಗು ಗುಂಡಿಗಳು ಮುಂತಾದ ನೀರಾವರಿ ಯೋಜನೆಗಳು, ನೀರಿನ ಸಂಗ್ರಹ ಕಾಲುವೆಗಳ ಬಗ್ಗೆ ಹೆಚ್ಚು ಗಮನಹರಿಸುವಂತೆ ಸ್ಥಳೀಯ ಜನರು ಅಲ್ಲಿನ ಆಡಳಿತ ಮತ್ತು ರಾಜಕೀಯ ವ್ಯವಸ್ಥೆಯನ್ನು ಒತ್ತಾಯಿಸಬೇಕಾಗುತ್ತದೆ. ಅಭಿವೃದ್ಧಿಯ ಪರಿಕಲ್ಪನೆಯನ್ನು ನಾವು ಬದಲಾಯಿಸಿಕೊಳ್ಳದಿದ್ದರೆ ಇಡೀ ದೇಶ ಸಿಮೆಂಟ್ ಕಾಡಾಗಿ ತಾಪಮಾನ, ಬರಗಾಲ ನಮ್ಮನ್ನು ನಿರಂತರವಾಗಿ ಕಾಡುತ್ತದೆ. ನಮ್ಮ ಮುಂದಿನ ಪೀಳಿಗೆಗೆ ನಾವು ಅತ್ಯಂತ ಅಪಾಯಕಾರಿ ವಾತಾವರಣವನ್ನು ಕೊಡುಗೆಯಾಗಿ ನೀಡಿದಂತಾಗುತ್ತದೆ.
ಅವರು ನಮ್ಮನ್ನು ಕ್ಷಮಿಸುವುದಿಲ್ಲ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

27 minutes ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

39 minutes ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

9 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

22 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

23 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

24 hours ago